ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಆಯ್ಕೆ ಶೀಘ್ರ: ಬಿ.ಎನ್.ಕೃಷ್ಣಪ್ಪ

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪರಿಷತ್ತಿನ ಶೀಘ್ರದಲ್ಲಿಯೇ ಘಟಕಗಳನ್ನು ವ್ಯವಸ್ಥಿತವಾಗಿ ರಚಿಸಲಾಗುವುದು ಕ್ರಿಯಾಯೋಜನೆ ರೂಪಿಸುವ ಮೂಲಕ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದ್ದಾರೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ತಮ್ಮನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಮತದಾರರ ಪಟ್ಟಿ ಸೇರಿದಂತೆ ಹಲವಾರು ತೊಡಕುಗಳಿದ್ದವು. ಪರಿಷತ್ತು ಸರ್ಕಾರದ ಅನುದಾನಿತ ಸಂಸ್ಥೆಯಾಗಿದ್ದರೂ ಸಹ ಇದು ಸಹಕಾರ ಸಂಘಗಳ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಸಹಕಾರ ಸಂಘಗಳ ನಿಯಮಗಳೇ ಇದಕ್ಕೂ ಅನ್ವಯಿಸುತ್ತದೆ. ಕಸಾಪ ಅಧ್ಯಕ್ಷರ ಅವ 3ವರ್ಷದಿಂದ 5 ವರ್ಷಕ್ಕೆ ಏರಿಸಿರುವುದು, ಪರಿಷತ್ತಿನ ಸದಸ್ಯತ್ವ ಶುಲ್ಕವನ್ನು 250 ರೂಗಳಿಗೆ ಇಳಿಸಿರುವುದು ಮೊದಲಾದ ವಿಚಾರಗಳು ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜ್ಯೋಷಿ ಅವರ ಸಭೆಯಲ್ಲಿ ಚರ್ಚಿತವಾಗಿವೆ.

ಸದಸ್ಯತ್ವ ಶುಲ್ಕವನ್ನು 250 ರೂಗಳಿಗೆ ಇಳಿಸುವ ಕುರಿತು ಅಧ್ಯಕ್ಷರು ಈಗಾಗಲೇ ಭರವಸೆ ನೀಡಿರುವ ಹಿನ್ನಲೆಯಲ್ಲಿ ಶುಲ್ಕ  ಇಳಿಸುವುದು ಖಚಿತವಾಗಿದೆ. ಕಸಾಪದ ನೂತನ ನಿಬಂಧನೆಗಳನ್ವಯ ಜಿಲ್ಲಾ ಹಾಗೂ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ನಮ್ಮ ಜಿಲ್ಲೆ ನಗರ ಹಾಗೂ ಗ್ರಾಮೀಣದ ಸೊಗಡು ಇರುವ ಜಿಲ್ಲೆಯಾದ್ದರಿಂದ ಎಲ್ಲಾ ವರ್ಗದ ಜನರ ಅಗತ್ಯ ಸಹಕಾರ ನೆರವು ಪಡೆದು ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದರು.

ಹಿರಿಯ ಕನ್ನಡ ಪರ ಹೋರಾಟಗಾರ ಜಿ.ಸತ್ಯನಾರಾಯಣ್ ಮಾತನಾಡಿ, ಜಿಲ್ಲೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿದ್ದಾಗ ನಮಗೆ  ಬಿ.ಎನ್.ಕೃಷ್ಣಪ್ಪ ಅವರು ಕಂಡು ಬಂದರು. ಆದರೆ ದೊಡ್ಡಬಳ್ಳಾಪುರದಲ್ಲಿ ಅವರ ಪರವಾಗಿ ಬೂತ್ ಏಜೆಂಟ್ ಸಹ ನೇಮಕ ಮಾಡಲು ಆಗದೇ ಇರುವ ಪರಿಸ್ಥಿತಿ ಇತ್ತು.  ಇಂತಹ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಕಸಾಪ ಮತದಾರರು ಅವರನ್ನು ಬೆಂಬಲಿಸಿದ್ದಾರೆ. ಗಾಂಧಿ ಚೌಕಕ್ಕೇ ಸೀಮಿತವಾಗಿದ್ದ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಎಲ್ಲಡೆ ನಡೆಯುವಂತಾಗಬೇಕು. ಬರೀ ಸಾಹಿತ್ಯಕ ಕಾರ್ಯಕ್ರಮಗಳಷ್ಟೇ ಅಲ್ಲದೇ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕನ್ನಡದ ವಿಚಾರಕ್ಕೆ ದಕ್ಕೆ ಬಂದಾಗ ದನಿ ಎತ್ತುವುದು ಹಾಗೂ  ಕನ್ನಡಪರ ಹೋರಾಟಗಳಲ್ಲಿ ಬಾಗವಹಿಸುವ ಮೂಲಕ ಪರಿಷತ್ತಿಗೆ ಚೈತನ್ಯ ನೀಡಬೇಕಿದ್ದು, ನಮ್ಮೆಲ್ಲರ ಸಹಕಾರ ನೂತನ ಅಧ್ಯಕ್ಷರಿಗೆ ಇದೆ ಎಂದರು.

ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಮಾತನಾಡಿ, ಜಿಲ್ಲಾ ಕಸಾಪ ಚುಣಾವಣೆಗೆ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಆದರೆ ಅಧ್ಯಕ್ಷರ ಆಯ್ಕೆ ಬಗ್ಗೆ  ಜಿಲ್ಲಾ ಕಸಾಪದ ನಿಕಟಪೂರ್ವ ಅಧ್ಯಕ್ಷರು ಯಾವುದೇ ಪ್ರತಿಕ್ರಿಯೆ ನೀಡದೇ ದೂರ ಉಳಿದು ಸ್ವತಂತ್ರ್ಯವಾಗಿ ಸ್ಪರ್ಧಿಸಿದರು. ಪರಿಷತ್ತಿನ ಶ್ರೇಯೋಭಿವೃದ್ದಿಗಾಗಿ ಕಸಾಪ ಮತದಾರರು ಕೃಷ್ಣಪ್ಪ ಅವರನ್ನು ಬೆಂಬಲಸಿದ್ದಾರೆ. ಅವರು ಅದನ್ನು ಉಳಿಸಿಕೊಂಡು ಹೆಚ್ಚಿನ ಕೆಲಸ ಮಾಡುವ ವಿಶ್ವಾಸವಿದೆ ಎಂದರು.

ಸಭೆಯಲ್ಲಿ ದೇವನಹಳ್ಳಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ನಂಜೇಗೌಡ, ಕಲಾವಿದ ರಬ್ಬನಹಳ್ಳಿ ಕೆಂಪಣ್ಣ, ಮುಖಂಡರಾದ ಕೆಂಪರಾಜ್ ಮೊದಲಾದವರು ಭಾಗವಹಿಸಿದ್ದರು.

ಸಭೆಯಲ್ಲಿ ಎಂಎಸ್‍ಜಿಪಿ ಘಟಕದ ವಿರುದ್ದ ಹೋರಾಟ ನಡೆಸುತ್ತಿರುವವರನ್ನು ಬೆಂಬಲಿಸಿ, ಪ್ರತಿಭಟನೆಯನ್ನು ಧರಣಿ ಹತ್ತಿಕ್ಕಿದ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!