ಬಿಬಿಎಂಪಿ ತ್ಯಾಜ್ಯದ ವಿರುದ್ದ ಹೋರಾಟ: ಮುಖಂಡರ ಬಂಧನ, ಬಿಡುಗಡೆ / ಸುದ್ದಿಗೋಷ್ಠಿ ನಡೆಸಿದ ಪ್ರಮುಖರು / ಬಿಬಿಎಂಪಿ ಜಂಟಿ ಆಯುಕ್ತರ ಅಮಾನತ್ತಿಗೆ ಆಗ್ರಹ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿಯ ಎಂಎಸ್ಜಿಪಿ  ಘಟಕವನ್ನು ಬಂದ್ ಮಾಡುವಂತೆ ಸ್ಥಳೀಯರು ಮತ್ತೆ ಧರಣಿ ಪ್ರಾರಂಭಿಸದಂತೆ ಪೊಲೀಸರು ಭಾನುವಾರ ಇಡೀ ದಿನ ನಡೆಸಿದ ಹಲವಾರು ರೀತಿಯ ಕಸರತ್ತುಗನ್ನು ನಡೆಸಿ ಸ್ಥಳೀಯ ಮುಖಂಡರನ್ನು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಿದರು. 

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರಣಿಯ ನೇತೃತ್ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಬಿಬಿಎಂಪಿ ಕಸ ಇಲ್ಲಿಗೆ ಬರದಂತೆ 10 ದಿನಗಳಿಂದಲು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರನ್ನು ಪೊಲೀಸರು ಬಲಪ್ರಯೋಗ ನಡೆಸುವ ಮೂಲಕ ಶನಿವಾರ ಬಂಧಿಸಿದ್ದರು. ಆದರೂ ಸಹ ನಾವು ಭಾನುವಾರ ಕಸ ವಿಲೇವಾರಿ ಘಟಕದ ರಸ್ತೆಯುದ್ದಕ್ಕು ವಿವಿಧೆಡೆಗಳಲ್ಲಿ ಐದಾರು ಜನರು ಮಾತ್ರ ಕುಳಿತು ಧರಣಿ ನಡೆಸಲಾಗಿದೆ. ಧರಣಿ ನಿರತ ರೈತರಲ್ಲಿ ಭಯವನ್ನು ಉಂಟುಮಾಡುವ ಸಲುವಾಗಿ ಪೊಲೀಸರು ಹಲವಾರು ಜನರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪಿಟ್ಟಿ ಕೇಸ್ಗಳನ್ನು ದಾಖಲಿಸಿ ಬಿಡುಗಡೆ ಮಾಡಿದ್ದಾರೆ. ಕಸ ಇಲ್ಲಿಗೆ ಬರುವುದು ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿ ಹಲ್ಲು ಬೀಳುವಂತೆ ಮಾಡಿರುವ ಡಿವೈಎಸ್ಪಿ ನಾಗರಾಜ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಕುಂಟುನೆಪಗಳನ್ನು ಹೇಳುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಜಿಲ್ಲಾಡಳಿತವೇ ಮುಂದಿನ ಅನಾಹುತಗಳಿಗೆ ಹೊಣೆಯಾಗಲಿದೆ. ಬಿಬಿಎಂಪಿ ಜಂಟಿ ಆಯಕ್ತ ಸರ್ಫೆಜ್ಖಾನ್ ಅವರ ಧರಣಿ ನಿರತರೊಂದಿಗೆ ಅನಾಗರೀಕ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಸೂಕ್ತ ರೀತಿಯಲ್ಲಿ ಕಸ ನಿರ್ವಹಣೆ ಮಾಡುವಿಲ್ಲ ವಿಫಲವಾಗಿರುವ ಜಂಟಿ ಆಯುಕ್ತರನ್ನು ಅಮಾನತು ಮಾಡಬೇಕು. ಎಂಎಸ್ಜಿಪಿ ಕಸ ವಿಲೇವಾರಿ ಘಟಕದಲ್ಲಿನ ಎಲ್ಲಾ ಅವ್ಯವಸ್ಥೆಗು ಬಿಬಿಎಂಪಿ ಜಂಟಿ ಆಯಕ್ತರೇ ನೇರ ಹೊಣೆಗಾರರಾಗಿದ್ದಾರೆ. ಇಲ್ಲಿನ ಅವ್ಯವಹಾರವನ್ನು ಎಸಿಬಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. 

ಧರಣಿಯಲ್ಲಿ ಭಾಗವಹಿಸಿದ್ದವರನ್ನು ಶನಿವಾರ ಪೊಲೀಸರು ಬಂಧಿಸಿದಾಗ ಶಾಸಕರು ನಮ್ಮನ್ನು ಬಿಡಿಸಿಲ್ಲ. 10 ದಿನ ಧರಣಿ ಕುಳಿತ್ತಿದ್ರು ಒಮ್ಮೆಯು ಭೇಟಿ ಮಾಡದ ಶಾಸಕರು ಬಂಧಿತರನ್ನು ಬಿಡಿಸಿದ್ದು ನಾನೆ, ಧರಣಿಗೆ ನಮ್ಮ ಬೆಂಬಲ ಇದೆ ಎಂದು ಹೇಳಿರುವುದಕ್ಕೆ ಅರ್ಥವಿಲ್ಲ ಎಂದ ಕೆ.ವಿ.ಸತ್ಯಪ್ರಕಾಶ್, 2013ರಲ್ಲಿ ಟೆರ್ರಾಫರ್ಮ್ ಕಸ ವಿಲೇವಾರಿ ಘಟಕವನ್ನು ಮುಚ್ಚುವಂತೆ ಹೋರಾಟ ಮಾಡಿ ಬಂದ್ ಮಾಡಿಸಿದ್ದು ನಾವೇ ಹೊರತು ಶಾಸಕರಲ್ಲ. ಅವರದೇ ಪಕ್ಷದ ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಗಳಾಗಿದ್ದರು. ಹೀಗಾಗಿ ಸರ್ಕಾರಕ್ಕೆ ಕೆಟ್ಟ ಹರಸರು ಬರುತ್ತದೆ ಎನ್ನುವ ಉದ್ದೆಶದಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು. ಈಗಲು ಸಹ ಅದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಕಸ ತಂದು ರಾಶಿಹಾಕುವ ಮೂಲಕ ಜರನ ಆರೋಗ್ಯ, ಇಲ್ಲಿನ ಪರಿಸರವನ್ನು ಹಾಳುಮಾಡುತ್ತಿರುವ ಬಿಬಿಎಂಪಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಿತ್ತು. ಈ ಅನುದಾನ ಬಳಕೆಯಲ್ಲೂ ಅವ್ಯವಹಾರ ನಡೆದಿದೆ. ನಮಗೆ ಅನುದಾನವು ಬೇಡ, ಬಿಬಿಎಂಪಿ ಕಸ ಇಲ್ಲಿಗೆ ಬರುವುದೇ ಬೇಕಿಲ್ಲ ಎಂದರು.

ಬಂಧನ ಬಿಡುಗಡೆ: ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರವೇ ಧರಣಿ ನಡೆಸಬೇಕು ಎನ್ನುವ ವಾದಮುಂದಿಟ್ಟುಕೊಂಡು ಭಾನುವಾರ ಧರಣಿಯ ಮುಂದಾಳತ್ವವಹಿಸಿದ್ದ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ಸದಸ್ಯ ಗಂಗಹನುಮಯ್ಯ, ರೈತ ರಂಗಪ್ಪ ಅವರನ್ನು ಬೆಳಿಗ್ಗೆಯೇ ಬಂಧಿಸಿ ನಗರದ ಪೊಲೀಸ್ ಠಾಣೆಯಲ್ಲಿಟ್ಟಿದ್ದರು. ಬಂದಿತರನ್ನು ಬಿಡಿಸಿಕೊಳ್ಳಲು ಬಂದ  ಕೆ.ವಿ.ಸತ್ಯಪ್ರಕಾಶ್, ಜಿ.ಎನ್.ಪ್ರದೀಪ್ ಅವರನ್ನು ಸಂಜೆ ಬಂಧಿಸಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಕರೆದೊಯ್ದು ಪಿಟ್ಟಿಕೇಸ್ ದಾಳಿಸುವ ಮೂಲಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರನ್ನು ಭೇಟಿ ಮಾಡಿ ಇಲ್ಲಿನ ವಾಸ್ತವ ಸ್ಥಿಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]