ಬಿಬಿಎಂಪಿ ತ್ಯಾಜ್ಯದ ವಿರುದ್ದ ಹೋರಾಟ: ಮುಖಂಡರ ಬಂಧನ, ಬಿಡುಗಡೆ / ಸುದ್ದಿಗೋಷ್ಠಿ ನಡೆಸಿದ ಪ್ರಮುಖರು / ಬಿಬಿಎಂಪಿ ಜಂಟಿ ಆಯುಕ್ತರ ಅಮಾನತ್ತಿಗೆ ಆಗ್ರಹ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿಯ ಎಂಎಸ್ಜಿಪಿ  ಘಟಕವನ್ನು ಬಂದ್ ಮಾಡುವಂತೆ ಸ್ಥಳೀಯರು ಮತ್ತೆ ಧರಣಿ ಪ್ರಾರಂಭಿಸದಂತೆ ಪೊಲೀಸರು ಭಾನುವಾರ ಇಡೀ ದಿನ ನಡೆಸಿದ ಹಲವಾರು ರೀತಿಯ ಕಸರತ್ತುಗನ್ನು ನಡೆಸಿ ಸ್ಥಳೀಯ ಮುಖಂಡರನ್ನು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಿದರು. 

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರಣಿಯ ನೇತೃತ್ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಬಿಬಿಎಂಪಿ ಕಸ ಇಲ್ಲಿಗೆ ಬರದಂತೆ 10 ದಿನಗಳಿಂದಲು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರನ್ನು ಪೊಲೀಸರು ಬಲಪ್ರಯೋಗ ನಡೆಸುವ ಮೂಲಕ ಶನಿವಾರ ಬಂಧಿಸಿದ್ದರು. ಆದರೂ ಸಹ ನಾವು ಭಾನುವಾರ ಕಸ ವಿಲೇವಾರಿ ಘಟಕದ ರಸ್ತೆಯುದ್ದಕ್ಕು ವಿವಿಧೆಡೆಗಳಲ್ಲಿ ಐದಾರು ಜನರು ಮಾತ್ರ ಕುಳಿತು ಧರಣಿ ನಡೆಸಲಾಗಿದೆ. ಧರಣಿ ನಿರತ ರೈತರಲ್ಲಿ ಭಯವನ್ನು ಉಂಟುಮಾಡುವ ಸಲುವಾಗಿ ಪೊಲೀಸರು ಹಲವಾರು ಜನರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪಿಟ್ಟಿ ಕೇಸ್ಗಳನ್ನು ದಾಖಲಿಸಿ ಬಿಡುಗಡೆ ಮಾಡಿದ್ದಾರೆ. ಕಸ ಇಲ್ಲಿಗೆ ಬರುವುದು ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿ ಹಲ್ಲು ಬೀಳುವಂತೆ ಮಾಡಿರುವ ಡಿವೈಎಸ್ಪಿ ನಾಗರಾಜ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಕುಂಟುನೆಪಗಳನ್ನು ಹೇಳುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಜಿಲ್ಲಾಡಳಿತವೇ ಮುಂದಿನ ಅನಾಹುತಗಳಿಗೆ ಹೊಣೆಯಾಗಲಿದೆ. ಬಿಬಿಎಂಪಿ ಜಂಟಿ ಆಯಕ್ತ ಸರ್ಫೆಜ್ಖಾನ್ ಅವರ ಧರಣಿ ನಿರತರೊಂದಿಗೆ ಅನಾಗರೀಕ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಸೂಕ್ತ ರೀತಿಯಲ್ಲಿ ಕಸ ನಿರ್ವಹಣೆ ಮಾಡುವಿಲ್ಲ ವಿಫಲವಾಗಿರುವ ಜಂಟಿ ಆಯುಕ್ತರನ್ನು ಅಮಾನತು ಮಾಡಬೇಕು. ಎಂಎಸ್ಜಿಪಿ ಕಸ ವಿಲೇವಾರಿ ಘಟಕದಲ್ಲಿನ ಎಲ್ಲಾ ಅವ್ಯವಸ್ಥೆಗು ಬಿಬಿಎಂಪಿ ಜಂಟಿ ಆಯಕ್ತರೇ ನೇರ ಹೊಣೆಗಾರರಾಗಿದ್ದಾರೆ. ಇಲ್ಲಿನ ಅವ್ಯವಹಾರವನ್ನು ಎಸಿಬಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. 

ಧರಣಿಯಲ್ಲಿ ಭಾಗವಹಿಸಿದ್ದವರನ್ನು ಶನಿವಾರ ಪೊಲೀಸರು ಬಂಧಿಸಿದಾಗ ಶಾಸಕರು ನಮ್ಮನ್ನು ಬಿಡಿಸಿಲ್ಲ. 10 ದಿನ ಧರಣಿ ಕುಳಿತ್ತಿದ್ರು ಒಮ್ಮೆಯು ಭೇಟಿ ಮಾಡದ ಶಾಸಕರು ಬಂಧಿತರನ್ನು ಬಿಡಿಸಿದ್ದು ನಾನೆ, ಧರಣಿಗೆ ನಮ್ಮ ಬೆಂಬಲ ಇದೆ ಎಂದು ಹೇಳಿರುವುದಕ್ಕೆ ಅರ್ಥವಿಲ್ಲ ಎಂದ ಕೆ.ವಿ.ಸತ್ಯಪ್ರಕಾಶ್, 2013ರಲ್ಲಿ ಟೆರ್ರಾಫರ್ಮ್ ಕಸ ವಿಲೇವಾರಿ ಘಟಕವನ್ನು ಮುಚ್ಚುವಂತೆ ಹೋರಾಟ ಮಾಡಿ ಬಂದ್ ಮಾಡಿಸಿದ್ದು ನಾವೇ ಹೊರತು ಶಾಸಕರಲ್ಲ. ಅವರದೇ ಪಕ್ಷದ ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಗಳಾಗಿದ್ದರು. ಹೀಗಾಗಿ ಸರ್ಕಾರಕ್ಕೆ ಕೆಟ್ಟ ಹರಸರು ಬರುತ್ತದೆ ಎನ್ನುವ ಉದ್ದೆಶದಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು. ಈಗಲು ಸಹ ಅದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಕಸ ತಂದು ರಾಶಿಹಾಕುವ ಮೂಲಕ ಜರನ ಆರೋಗ್ಯ, ಇಲ್ಲಿನ ಪರಿಸರವನ್ನು ಹಾಳುಮಾಡುತ್ತಿರುವ ಬಿಬಿಎಂಪಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಿತ್ತು. ಈ ಅನುದಾನ ಬಳಕೆಯಲ್ಲೂ ಅವ್ಯವಹಾರ ನಡೆದಿದೆ. ನಮಗೆ ಅನುದಾನವು ಬೇಡ, ಬಿಬಿಎಂಪಿ ಕಸ ಇಲ್ಲಿಗೆ ಬರುವುದೇ ಬೇಕಿಲ್ಲ ಎಂದರು.

ಬಂಧನ ಬಿಡುಗಡೆ: ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರವೇ ಧರಣಿ ನಡೆಸಬೇಕು ಎನ್ನುವ ವಾದಮುಂದಿಟ್ಟುಕೊಂಡು ಭಾನುವಾರ ಧರಣಿಯ ಮುಂದಾಳತ್ವವಹಿಸಿದ್ದ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ಸದಸ್ಯ ಗಂಗಹನುಮಯ್ಯ, ರೈತ ರಂಗಪ್ಪ ಅವರನ್ನು ಬೆಳಿಗ್ಗೆಯೇ ಬಂಧಿಸಿ ನಗರದ ಪೊಲೀಸ್ ಠಾಣೆಯಲ್ಲಿಟ್ಟಿದ್ದರು. ಬಂದಿತರನ್ನು ಬಿಡಿಸಿಕೊಳ್ಳಲು ಬಂದ  ಕೆ.ವಿ.ಸತ್ಯಪ್ರಕಾಶ್, ಜಿ.ಎನ್.ಪ್ರದೀಪ್ ಅವರನ್ನು ಸಂಜೆ ಬಂಧಿಸಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಕರೆದೊಯ್ದು ಪಿಟ್ಟಿಕೇಸ್ ದಾಳಿಸುವ ಮೂಲಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರನ್ನು ಭೇಟಿ ಮಾಡಿ ಇಲ್ಲಿನ ವಾಸ್ತವ ಸ್ಥಿಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!