ಬಿಬಿಎಂಪಿ ತ್ಯಾಜ್ಯದ ವಿರುದ್ದ ಹೋರಾಟ: ಮುಖಂಡರ ಬಂಧನ, ಬಿಡುಗಡೆ / ಸುದ್ದಿಗೋಷ್ಠಿ ನಡೆಸಿದ ಪ್ರಮುಖರು / ಬಿಬಿಎಂಪಿ ಜಂಟಿ ಆಯುಕ್ತರ ಅಮಾನತ್ತಿಗೆ ಆಗ್ರಹ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿಯ ಎಂಎಸ್ಜಿಪಿ  ಘಟಕವನ್ನು ಬಂದ್ ಮಾಡುವಂತೆ ಸ್ಥಳೀಯರು ಮತ್ತೆ ಧರಣಿ ಪ್ರಾರಂಭಿಸದಂತೆ ಪೊಲೀಸರು ಭಾನುವಾರ ಇಡೀ ದಿನ ನಡೆಸಿದ ಹಲವಾರು ರೀತಿಯ ಕಸರತ್ತುಗನ್ನು ನಡೆಸಿ ಸ್ಥಳೀಯ ಮುಖಂಡರನ್ನು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಿದರು. 

ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರಣಿಯ ನೇತೃತ್ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಬಿಬಿಎಂಪಿ ಕಸ ಇಲ್ಲಿಗೆ ಬರದಂತೆ 10 ದಿನಗಳಿಂದಲು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರನ್ನು ಪೊಲೀಸರು ಬಲಪ್ರಯೋಗ ನಡೆಸುವ ಮೂಲಕ ಶನಿವಾರ ಬಂಧಿಸಿದ್ದರು. ಆದರೂ ಸಹ ನಾವು ಭಾನುವಾರ ಕಸ ವಿಲೇವಾರಿ ಘಟಕದ ರಸ್ತೆಯುದ್ದಕ್ಕು ವಿವಿಧೆಡೆಗಳಲ್ಲಿ ಐದಾರು ಜನರು ಮಾತ್ರ ಕುಳಿತು ಧರಣಿ ನಡೆಸಲಾಗಿದೆ. ಧರಣಿ ನಿರತ ರೈತರಲ್ಲಿ ಭಯವನ್ನು ಉಂಟುಮಾಡುವ ಸಲುವಾಗಿ ಪೊಲೀಸರು ಹಲವಾರು ಜನರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪಿಟ್ಟಿ ಕೇಸ್ಗಳನ್ನು ದಾಖಲಿಸಿ ಬಿಡುಗಡೆ ಮಾಡಿದ್ದಾರೆ. ಕಸ ಇಲ್ಲಿಗೆ ಬರುವುದು ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ಹಲ್ಲೆ ನಡೆಸಿ ಹಲ್ಲು ಬೀಳುವಂತೆ ಮಾಡಿರುವ ಡಿವೈಎಸ್ಪಿ ನಾಗರಾಜ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಕುಂಟುನೆಪಗಳನ್ನು ಹೇಳುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಜಿಲ್ಲಾಡಳಿತವೇ ಮುಂದಿನ ಅನಾಹುತಗಳಿಗೆ ಹೊಣೆಯಾಗಲಿದೆ. ಬಿಬಿಎಂಪಿ ಜಂಟಿ ಆಯಕ್ತ ಸರ್ಫೆಜ್ಖಾನ್ ಅವರ ಧರಣಿ ನಿರತರೊಂದಿಗೆ ಅನಾಗರೀಕ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಸೂಕ್ತ ರೀತಿಯಲ್ಲಿ ಕಸ ನಿರ್ವಹಣೆ ಮಾಡುವಿಲ್ಲ ವಿಫಲವಾಗಿರುವ ಜಂಟಿ ಆಯುಕ್ತರನ್ನು ಅಮಾನತು ಮಾಡಬೇಕು. ಎಂಎಸ್ಜಿಪಿ ಕಸ ವಿಲೇವಾರಿ ಘಟಕದಲ್ಲಿನ ಎಲ್ಲಾ ಅವ್ಯವಸ್ಥೆಗು ಬಿಬಿಎಂಪಿ ಜಂಟಿ ಆಯಕ್ತರೇ ನೇರ ಹೊಣೆಗಾರರಾಗಿದ್ದಾರೆ. ಇಲ್ಲಿನ ಅವ್ಯವಹಾರವನ್ನು ಎಸಿಬಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. 

ಧರಣಿಯಲ್ಲಿ ಭಾಗವಹಿಸಿದ್ದವರನ್ನು ಶನಿವಾರ ಪೊಲೀಸರು ಬಂಧಿಸಿದಾಗ ಶಾಸಕರು ನಮ್ಮನ್ನು ಬಿಡಿಸಿಲ್ಲ. 10 ದಿನ ಧರಣಿ ಕುಳಿತ್ತಿದ್ರು ಒಮ್ಮೆಯು ಭೇಟಿ ಮಾಡದ ಶಾಸಕರು ಬಂಧಿತರನ್ನು ಬಿಡಿಸಿದ್ದು ನಾನೆ, ಧರಣಿಗೆ ನಮ್ಮ ಬೆಂಬಲ ಇದೆ ಎಂದು ಹೇಳಿರುವುದಕ್ಕೆ ಅರ್ಥವಿಲ್ಲ ಎಂದ ಕೆ.ವಿ.ಸತ್ಯಪ್ರಕಾಶ್, 2013ರಲ್ಲಿ ಟೆರ್ರಾಫರ್ಮ್ ಕಸ ವಿಲೇವಾರಿ ಘಟಕವನ್ನು ಮುಚ್ಚುವಂತೆ ಹೋರಾಟ ಮಾಡಿ ಬಂದ್ ಮಾಡಿಸಿದ್ದು ನಾವೇ ಹೊರತು ಶಾಸಕರಲ್ಲ. ಅವರದೇ ಪಕ್ಷದ ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಗಳಾಗಿದ್ದರು. ಹೀಗಾಗಿ ಸರ್ಕಾರಕ್ಕೆ ಕೆಟ್ಟ ಹರಸರು ಬರುತ್ತದೆ ಎನ್ನುವ ಉದ್ದೆಶದಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದ್ದರು. ಈಗಲು ಸಹ ಅದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಕಸ ತಂದು ರಾಶಿಹಾಕುವ ಮೂಲಕ ಜರನ ಆರೋಗ್ಯ, ಇಲ್ಲಿನ ಪರಿಸರವನ್ನು ಹಾಳುಮಾಡುತ್ತಿರುವ ಬಿಬಿಎಂಪಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಿತ್ತು. ಈ ಅನುದಾನ ಬಳಕೆಯಲ್ಲೂ ಅವ್ಯವಹಾರ ನಡೆದಿದೆ. ನಮಗೆ ಅನುದಾನವು ಬೇಡ, ಬಿಬಿಎಂಪಿ ಕಸ ಇಲ್ಲಿಗೆ ಬರುವುದೇ ಬೇಕಿಲ್ಲ ಎಂದರು.

ಬಂಧನ ಬಿಡುಗಡೆ: ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರವೇ ಧರಣಿ ನಡೆಸಬೇಕು ಎನ್ನುವ ವಾದಮುಂದಿಟ್ಟುಕೊಂಡು ಭಾನುವಾರ ಧರಣಿಯ ಮುಂದಾಳತ್ವವಹಿಸಿದ್ದ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ಸದಸ್ಯ ಗಂಗಹನುಮಯ್ಯ, ರೈತ ರಂಗಪ್ಪ ಅವರನ್ನು ಬೆಳಿಗ್ಗೆಯೇ ಬಂಧಿಸಿ ನಗರದ ಪೊಲೀಸ್ ಠಾಣೆಯಲ್ಲಿಟ್ಟಿದ್ದರು. ಬಂದಿತರನ್ನು ಬಿಡಿಸಿಕೊಳ್ಳಲು ಬಂದ  ಕೆ.ವಿ.ಸತ್ಯಪ್ರಕಾಶ್, ಜಿ.ಎನ್.ಪ್ರದೀಪ್ ಅವರನ್ನು ಸಂಜೆ ಬಂಧಿಸಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಕರೆದೊಯ್ದು ಪಿಟ್ಟಿಕೇಸ್ ದಾಳಿಸುವ ಮೂಲಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರನ್ನು ಭೇಟಿ ಮಾಡಿ ಇಲ್ಲಿನ ವಾಸ್ತವ ಸ್ಥಿಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವ ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!