ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಬಂದ್ಗೆ ಒತ್ತಾಯಿಸಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಪ್ರತಿಭಟನೆ ಆರಂಭ / ಕರವೇ ಬೆಂಬಲ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಮೂಗೇನಹಳ್ಳಿ ಬಾರೆ ಬಳಿ ಪ್ರತಿಭಟನೆ ಆರಂಭವಾಗಿದೆ.

ಗುಂಡ್ಲಹಳ್ಳಿ ಕ್ರಾಸ್ ಬಳಿ ಪೊಲೀಸರು ಸೆ.144  ನಿಷೇಧಾಜ್ಞೆ ವಿಧಿಸಿರುವುದರಿಂದ ಪ್ರತಿಭಟನೆ ಸ್ಥಳವನ್ನು ಮೂಗೇನಹಳ್ಳಿ ಬಾರೆ ಬಳಿ ನಡೆಸಲಾಗುತ್ತಿದೆ ಎನ್ನಲಾಗಿದೆ.

ಈ ಪ್ರತಿಭಟನೆಗೆ ಕರವೇ ಪ್ರವೀಣ್ ಶೆಟ್ಟಿ ಬಣ, ಕರವೇ ಕನ್ನಡಿಗರ ಬಣದ ಮುಖಂಡರು ಭಾಗಿಯಾಗಿದ್ದು, ಕರವೇ ಬೆಂಬಲ ದೊರೆತಂತಾಗಿದೆ.

ಇನ್ನೂ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಬಂದ್ಗೆ ಪಕ್ಷಾತೀತವಾದ ಒಕ್ಕೊರಲ ಒತ್ತಾಯವಾಗಿದ್ದು, ಪ್ರತಿಭಟನೆಕಾರರ ಬಂಧಿಸಿ, ಕಾಣದ ಸ್ಥಳದಲ್ಲಿ ಇಡುವುದು ಧರಣಿ ಹತ್ತಿಕಲು ಮುಂದಾಗಿರುವುದು ಖಂಡನೀಯ. ಬಿಬಿಎಂಪಿ ತ್ಯಾಜ್ಯದಿಂದ ಜನರ ಜೀವನ ಹಾಳಾಗಿದೆ. ಬಲವಂತದಿಂದ ಹೊರಾಟವನ್ನು ಹತ್ತಿಕ್ಕಲು ಸಾಧ್ಯ ಎನ್ನುವುದಾದರೆ ನೂರು ಜನ ಪ್ರತಿಭಟನೆಗೆ ಇಳಿಯುತ್ತಾರೆ. ದೊಡ್ಡಬಳ್ಳಾಪುರ ಹೋರಾಟಗಾರರ ತವರೂರು ಎಂಬುದು ಅಧಿಕಾರಿಗಳು ನೆನಪಿಡಬೇಕಿದೆ.

ನ್ಯಾಯಯುತ ಹೋರಾಟಕ್ಕೆ ಕೋವಿಡ್ ಅಡ್ಡಿ ಎನ್ನುವುದಾದರೆ ಎಷ್ಟು ಜನ ರಾಜಕೀಯ ನಾಯಕರ ವಿರುದ್ದ ದೂರು ದಾಖಲಿಸಲಾಗಿದೆ ಉತ್ತರ ನೀಡುವರೆ ಅಧಿಕಾರಿಗಳು. ತ್ಯಾಜ್ಯದಿಂದ ಮನುಕುಲವಲ್ಲದೆ, ವನ್ಯಸಂಪತ್ತಿಗೂ ತೊಂದರೆಯಾಗಿದೆ. ದೊಡ್ಡಬಳ್ಳಾಪುರ ಕಸದ ತೊಟ್ಟಿಯಲ್ಲ. ಬಿಬಿಎಂಪಿ ಮಾರ್ಷಲ್ ಕರೆಸುವ ಅನಿವಾರ್ಯತೆ ಏನಿದೆ. ಹಳ್ಳಿ ಜನ ಎದ್ದರೆ ಮಾರ್ಷಲ್ಗಳಿಂದ ಅಲ್ಲ ಯಾರಿಂದಲೂ ತಡೆಯಲು ಸಾಧ್ಯವಿಲ್ಲ.

ಯಾವುದೇ ಧರಣಿ ರೂಪುರೇಷೆ ಸಮರ್ಪಕವಾಗಿ ಇರಬೇಕಿದೆ. ತ್ಯಾಜ್ಯದ ಹೋರಾಟದಲ್ಲಿ ಎಲ್ಲಾ ಸಂಘಟನೆಗಳ ಬೆಂಬಲವಿದೆ. ಆದರೆ ಮಾಹಿತಿ ಕೊರತೆಯಿದೆಯಷ್ಟೆ. ಈ ಹೋರಾಟ ಸಮೂಹ ನಾಯಕತ್ವದ ಅಡಿಯಲ್ಲಿ ಜನರ ಸಂಕಷ್ಟ ಅಂತ್ಯಕಾಣುವವರೆಗೂ ಹೋರಾಟ ನಡೆಸಬೇಕೆಂದರು.

ಪ್ರತಿಭಟನೆ ಶಾಸಕ ಟಿ.ವೆಂಕಟರಮಣಯ್ಯ, ಟಿಎಪಿಎಂಸಿಎಸ್ ಅಧ್ಯಕ್ಷ ಸಿದ್ದರಾಮಯ್ಯ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕರವೇ ಪ್ರವೀಣ್ ಶೆಟ್ಟಿಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡಿಗರ ಬಣದ ಚಂದ್ರಶೇಖರ್, ಬಿಜೆಪಿ ಮುಖಂಡ ಕೆ.ಟಿ.ಕೃಷ್ಣಪ್ಪ, ಮುಖಂಡರಾದ ಗೋವಿಂದ ರಾಜ್, ರಾಮಣ್ಣ, ಕೃಷ್ಷಮೂರ್ತಿ, ಪು.ಮಹೇಶ್, ಜಿ.ಲಕ್ಷ್ಮೀಪತಿ, ಬಶೀರ್, ಕರವೇ ನಂಜಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ.

ಪ್ರತಿಭಟನೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr. K.

[ccc_my_favorite_select_button post_id="118320"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!