ಐಟಿ ಅಧಿಕಾರಿಗಳ ವಿರುದ್ಧ ಎಫ್ಐಆರ್: ಪೊಲೀಸರ ನಡೆ ‘ದುರುದ್ದೇಶ ಪೂರಿತ ಕ್ರಮ’ ಎಂದ ಹೈಕೋರ್ಟ್

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ನ್ನು ಹೈಕೋರ್ಟ್ ರದ್ದುಪಡಿಸಿದೆ.

ಎಫ್ಐಆರ್ ರದ್ದು ಕೋರಿ ಆದಾಯ ತೆರಿಗೆ (ತನಿಖೆ) ಮಹಾನಿರ್ದೇಶಕರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಎಂಎಲ್ಸಿ ಗೋವಿಂದರಾಜು ನೀಡಿದ್ದ ದೂರು ಆಧರಿಸಿ ಐಟಿ ಅಧಿಕಾರಿಗಳ ವಿರುದ್ಧವೇ ಪೊಲೀಸರು ಎಫ್ಐಆರ್ ದಾಖಲಿಸಿರುವ ಕ್ರಮ ’ದುರುದ್ದೇಶದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿದೆ.

ಪೀಠ ತನ್ನ ತೀರ್ಪಿನಲ್ಲಿ, ಐಟಿ ಅಧಿಕಾರಿಗಳು ಗೋವಿಂದರಾಜು ಅವರ ಮನೆಯಲ್ಲಿ ನಡೆಸಿದ ಶೋಧ ಮತ್ತು ವಸ್ತುಗಳನ್ನು ವಶಕ್ಕೆ ಪಡೆಯುವ ಕಾರ್ಯಗಳನ್ನು ನಿಯಮದ ಪ್ರಕಾರವೇ ಮಾಡಿದ್ದಾರೆ. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 293 ಪ್ರಕಾರ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧ ಯಾವುದೇ ದಾವೆ, ವಿಚಾರಣೆ ಮತ್ತು ಇತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶವಿಲ್ಲ. ಅದರಂತೆ ಗೋವಿಂದರಾಜು ನೀಡಿದ್ದ ದೂರನ್ನು ಪೊಲೀಸರು ಮಾನ್ಯ ಮಾಡುವಂತಿಲ್ಲ ಮತ್ತು ಎಫ್ಐಆರ್ ದಾಖಲಿಸುವಂತೆಯೂ ಇಲ್ಲ. ದೂರು ನೀಡಿರುವ ಕೆ. ಗೋವಿಂದರಾಜು ಅವರಿಗೂ ಡೈರಿ ಬೇಕಾಗಿದೆ. ಇದೇ ವೇಳೆ ಪೊಲೀಸರಿಗೂ ಸಹ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಡೈರಿ ಬೇಕಾಗಿದೆ ಎನ್ನುವುದು ಅಘಾತಕಾರಿ ಸಂಗತಿ. ಪೊಲೀಸರಿಗೆ ತನಿಖೆ ನಡೆಸಲು ಡೈರಿ ಹೊರತುಪಡಿಸಿ ಬೇರೆ ಯಾವುದೇ ವಸ್ತು ಬೇಕಾಗಿಲ್ಲ. ಇದನ್ನು ಗಮನಿಸಿದರೆ ಇಂದಿರಾನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೂರುದಾರರ ಅಣತಿ ಮೇರೆಗೆ ನಡೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಅದಕ್ಕಾಗಿಯೇ, ಪೊಲೀಸರು ಅಪರಾಧ ದಂಡ ಸಂಹಿತೆ ಸೆಕ್ಷನ್ 91 ಬಳಸಿ ಆದಾಯ ತೆರಿಗೆ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ. 

ಪ್ರಕರಣದ ಎಲ್ಲ ವಿವರಗಳನ್ನು ಗಮನಿಸಿದರೆ ಮತ್ತು ಪೊಲೀಸರ ಕಾರ್ಯ ವೈಖರಿ ಪರಿಶೀಲಿಸಿದರೆ ಎಫ್ಐಆರ್ ದಾಖಲಿಸಿದ್ದರ ಹಿಂದೆ ಅನ್ಯ ಉದ್ದೇಶವಿರುವುದು ಕಂಡುಬರುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೇ, ಐಟಿ ಕಾಯ್ದೆಯ ಸೆಕ್ಷನ್ 138ರ ಅಡಿ ದಾಖಲೆಗಳಲ್ಲಿ ಗೌಪ್ಯತೆ ಕಾಯ್ದುಕೊಳ್ಳುವ ಅಧಿಕಾರ ಆದಾಯ ತೆರಿಗೆ ಅಧಿಕಾರಿಗಳಿಗೆ ಇದೆ. ಇದಕ್ಕೆ ವಿರುದ್ಧವಾಗಿ ಪೊಲೀಸರು ನೀಡಿರುವ ನೋಟಿಸ್ ನಿಯಮಬಾಹಿರ. ಇನ್ನು, ನಿಯಮದಂತೆ ಒಮ್ಮೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಮತ್ತು ಪತ್ತೆ ಕಾರ್ಯ ನಡೆಸಿದ ನಂತರ ಯಾವುದೇ ಸಾರ್ವಜನಿಕ ಸಿಬ್ಬಂದಿಗೆ ಅದರ ವಿಚಾರಗಳನ್ನು ಅಥವಾ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ. ಅಂತಹ ಬಾಧ್ಯತೆಗಳೂ ಸಹ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಇಲ್ಲ ಎಂದು ಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2016ರ ಮಾರ್ಚ 15ರಂದು ಎಂಎಲ್ ಸಿ ಕೆ. ಗೋವಿಂದರಾಜು ಮನೆ ಮೇಲೆ ದಾಳಿ ನಡೆಸಿ ಅವರ ಬೆಡ್ ರೂಮ್ ನಲ್ಲಿ ಸಿಕ್ಕ ಡೈರಿ ವಶಪಡಿಸಿಕೊಂಡಿದ್ದರು. ಆ ಡೈರಿಯಲ್ಲಿ ಉಲ್ಲೇಖಿಸಲಾಗಿದ್ದ ಅಂಶಗಳು ಮತ್ತು ಹೆಸರುಗಳನ್ನು ಆಧರಿಸಿ ಐಟಿ ಅಧಿಕಾರಿಗಳು ಹಲವು ವ್ಯಕ್ತಿಗಳು, ಸಚಿವರುಗಳನ್ನು ವಿಚಾರಣೆಗೆ ಕರೆಸಿ ಹೇಳಿಕೆ ದಾಖಲಿಸಿದ್ದರು. 

ಗೋವಿಂದರಾಜು ಅವರಿಗೂ ಹೇಳಿಕೆಗಳ ಪ್ರತಿಯನ್ನು ನೀಡಲಾಗಿತ್ತು. 2017ರ ಫೆಬ್ರವರಿಯಲ್ಲಿ ಕೆಲ ಮಾಧ್ಯಮಗಳಲ್ಲಿ ಡೈರಿಗಳಲ್ಲಿನ ಅಂಶಗಳು ಬಹಿರಂಗವಾಗಿದ್ದವು.

ಈ ಹಿನ್ನೆಲೆಯಲ್ಲಿ ಫೆಬ್ರವರಿ 28ರಂದು ಗೋವಿಂದರಾಜು ಇಂದಿರಾನಗರ ಪೊಲೀಸ್ ಠಾಣೆಗೆ ತೆರಳಿ ಆದಾಯ ತೆರಿಗೆ ಅಧಿಕಾರಿಗಳೇ ಮಾಹಿತಿ ಸೋರಿಕೆ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಐಟಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಮತ್ತು ತನಿಖೆಗೆ ಹೈಕೋರ್ಟ್ 2017ರ ಜುಲೈನಲ್ಲಿ ತಡೆಯಾಜ್ಞೆ ನೀಡಿತ್ತು ಎಂದು‌ ಲೀಗಲ್ ನ್ಯೂಸ್ ವರದಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ HD Kumaraswamy

[ccc_my_favorite_select_button post_id="100970"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! | Video

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬಸ್‌ಗೆ ಬೆಂಕಿ.. ಓರ್ವ ಪ್ರಯಾಣಿಕ ಸಜೀವ ದಹನ..! |

ಈ ಅವಘಡ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸಜೀವ ದಹನವಾಗಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ.mahakumbh mela

[ccc_my_favorite_select_button post_id="100965"]

ಆರೋಗ್ಯ

ಸಿನಿಮಾ

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಹಿರಿಯ ನಟ ಸರಿಗಮ ವಿಜಿ ನಿಧನ..! Sarigama viji

ಆದರೆ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಯ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ

[ccc_my_favorite_select_button post_id="100973"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]