ಮೇಷ: ಈ ರಾಶಿಯವರಿಗೆ ಆಕಸ್ಮಿಕ ಧನಲಾಭವಾಗಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು. ಆತ್ಮೀಯರ ಭೇಟಿ ಮತ್ತು ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಆಟಪಾಠಗಳಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ನಷ್ಟ.
ವೃಷಭ: ಈ ರಾಶಿಯವರಿಗೆ ಊಹಾಪೋಹಗಳು ಬೇಡ. ಕೌಟುಂಬಿಕ ಸುಖ, ಶಾಂತಿಗಳು ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯ–ಕಲಾಪಗಳಲ್ಲಿ ಪ್ರಗತಿ. ಕೂಡಿಕೊಳ್ಳುವ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ.
ಮಿಥುನ: ಈ ರಾಶಿಯವರಿಗೆ ಮಾನಸಿಕ ಚಂಚಲದಿಂದ ಭಯದ ವಾತಾವರಣ ಉಂಟಾಗಲಿದೆ . ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.
ಕಟಕ: ಈ ರಾಶಿಯ ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಂಭವ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ.
ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗದಲ್ಲಿ ಪ್ರಗತಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಕುಟುಂಬ ಸದಸ್ಯರೊಂದಿಗೆ ದೇವತಾ ದರ್ಶನ.
ಕನ್ಯಾ: ಈ ರಾಶಿಯವರ ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಲಿದ್ದು, ಸಂತಸವಾಗಲಿದೆ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ.
ತುಲಾ: ಈ ರಾಶಿಯವರ ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ ಸಹಕಾರ ದೊರಕಲಿದೆ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ.
ವೃಶ್ಚಿಕ: ಈ ರಾಶಿಯವರಿಗೆ ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು.ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ಲೇವಾದೇವಿ ವ್ಯವಹಾರವನ್ನು ದಿನದ ಮಟ್ಟಿಗೆ ಮುಂದೂಡಿ.
ಧನಸ್ಸು: ಈ ರಾಶಿಯವರ ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ.
ಮಕರ: ಈ ರಾಶಿಯವರು ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ ಸಾಧ್ಯತೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ.
ಕುಂಭ: ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲಿದ್ದು, ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಆಟ–ಪಾಠಗಳಲ್ಲಿ ಹೆಚ್ಚಿನ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ ಉಂಟಾಗುತ್ತದೆ.
ಮೀನ: ಈ ರಾಶಿಯವರು ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚಿಗೆ ನಾಂದಿಯಾಗುವ ಸಾಧ್ಯತೆಯಿದೆ. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ.
ಮಾಸ: ಮಾರ್ಗಶಿರ ಮಾಸ
ಪಕ್ಷ: ಶುಕ್ಲ ಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಅಶ್ವಿನಿ ನಕ್ಷತ್ರ
ರಾಹುಕಾಲ: 03:09 ರಿಂದ 04:35
ಗುಳಿಕಕಾಲ: 12:18 ರಿಂದ 01:43
ಯಮಗಂಡಕಾಲ: 09:26 ರಿಂದ 10:52
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….