ಜಕ್ಕಲಮೊಡಗು ಕ್ರಾಸ್ ನ ಸೇತುವೆ ಬಳಿ ನೀರಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಸೇರ್ಪಡೆ ಆತಂಕ: ವಿವಿಧ ಇಲಾಖೆಗಳಿಂದ ಜಂಟಿ ಸಮೀಕ್ಷೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು  ಗೌರಿಬಿದನೂರು ಮಾರ್ಗ ಮಧ್ಯೆಯಿರುವ ಜಕ್ಕಲಮೊಡಗು ಕ್ರಾಸ್ ನ  ಸೇತುವೆ ಬಳಿ  ಯಾರೋ  ಕಿಡಿಗೇಡಿಗಳು ಟ್ಯಾಂಕರ್ ನಲ್ಲಿ ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವ ಮೂಲಕ ಶ್ರೀನಿವಾಸ ಸಾಗರ ಜಲಾಶಯದ ನೀರಿಗೆ  ಸೇರುವಂತೆ ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ  ಬುಧವಾರ  ಪರಿಸರ, ಪೊಲೀಸ್, ಕಂದಾಯ ಮೀನುಗಾರಿಕೆ , ಸಣ್ಣ ನೀರಾವರಿ, ಅರಣ್ಯ,  ಕೈಗಾರಿಕೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆ ಸೇರಿದಂತೆ ವಿವಿಧ  ಇಲಾಖೆಗಳ ಅಧಿಕಾರಿಗಳ ತಂಡ ಸದರಿ ಸ್ಥಳಕ್ಕೆ  ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವ ಮೂಲಕ ಮಾಹಿತಿ ಕಲೆ ಹಾಕಿತು.

ಈ ಸಂದರ್ಭದಲ್ಲಿ ಜಿಲ್ಲಾ ಪರಿಸರ ಅಧಿಕಾರಿ  ಸಿದ್ಧೇಶ್ವರ ಬಾಬು ರವರು  ಮಾತನಾಡಿ, ಜಕ್ಕಲಮಡುಗು ಕ್ರಾಸ್ ಹಾಗೂ ಶ್ರೀನಿವಾಸ್ ಸಾಗರದ ಬಳಿ ವಿಸರ್ಜಿಸಲಾಗಿರುವ ರಾಸಾಯನಿಕ ತ್ಯಾಜ್ಯ ನೀರು (ಜನರಲ್ ಪ್ಯಾರಾಮೀಟರ್, ಆಯಿಲ್ ಅಂಡ್ ಗ್ರೀಸ್, ಹೆವಿ ಮೆಟಲ್ ಮತ್ತು ಸೈನೈಡ್) ಮತ್ತು ಮಣ್ಣಿನ ಮಾದರಿ ಸಂಗ್ರಹಿಸಲಾಗಿರುತ್ತದೆ ಹಾಗೂ ಶ್ರೀನಿವಾಸ ಸಾಗರ ಜಲಾಶಯದ ನೀರನ್ನು ಸಹ ಸಂಗ್ರಹಿಸಲಾಗಿ ವಿಶ್ಲೇಷಣೆಗಾಗಿ ಬೆಂಗಳೂರಿನ ಕೇಂದ್ರ ಪರಿಸರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. 

ಕೇಂದ್ರ ಪರಿಸರ ಪ್ರಯೋಗಾಲಯದ ಅಧಿಕಾರಿಗಳಿಗೆ ಶೀಘ್ರದಲ್ಲಿ ವಿಶ್ಲೇಷಣಾ ವರದಿಯನ್ನು ನೀಡುವಂತೆ ಕೋರಲಾಗಿರುತ್ತದೆ. ವಿಶ್ಲೇಷಣಾ ವರದಿ ಬಂದ ನಂತರ ವರದಿಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಂಡಳಿಯ ಕೇಂದ್ರ ಕಛೇರಿಗೆ ಸದರಿ ವಿಷಯದ ಬಗ್ಗೆ ವರದಿಯನ್ನು ಸಲ್ಲಿಸಿ ಮುಂದಿನ ಕ್ರಮವಹಿಸಲಾಗುವುದು ಎಂದರು. 

ವಿಷಯುಕ್ತ ರಾಸಾಯನಿಕ ತ್ಯಾಜ್ಯ ನೀರನ್ನು  ವಿಲೇವಾರಿ ಮಾಡಿ ಹೋಗಿರುವ ಕಿಡಿಗೇಡಿಗಳ ಪತ್ತೆಗಾಗಿ ಈಗಾಗಲೇ ಪೊಲೀಸ್ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಈ ಘಟನೆಗೆ ಕಾರಣರಾದವರ  ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದುಎಂದು ಪೊಲೀಸ್ ಉಪಾಧೀಕ್ಷಕ ವಾಸುದೇವ್ ಅವರು ತಿಳಿಸಿದರು.

ಇದೇ  ವೇಳೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಾಧುರಿ ಮಾತನಾಡಿ,  ಸದ್ಯಕ್ಕೆ  ಶ್ರೀನಿವಾಸಸಾಗರ  ಜಲಾಶಯದಲ್ಲಿ ಮೀನು ಹಿಡಿಯದಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಜೊತೆಗೆ ಈ ಕೆರೆಯ   ನೀರು ಮತ್ತು ಮೀನನ್ನು ಪರೀಕ್ಷೆಗಾಗಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಸಂಶೋಧನಾ ಕೇಂದ್ರದ  ಪ್ರಯೋಗಾಲಯಕ್ಕೆ  ಕಳುಹಿಸಿ ಕೊಡಲು ಕ್ರಮವಹಿಸಲಾಗಿದೆ ಎಂದರು. 

ಪ್ರಯೋಗಾಲಯದ ವರದಿ ಬರುವವರೆಗೆ ಸುತ್ತಮುತ್ತಲ ಗ್ರಾಮಗಳ ಜನರು ತಮ್ಮ  ಜಾನುವಾರುಗಳಿಗೂ ಸಹ ಈ ಕೆರೆಯ ನೀರನ್ನು  ಕುಡಿಸದಂತೆ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸುವಂತೆ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಸೂಚಿಸಲಾಗಿದೆ  ಜೊತೆಗೆ ಜನರು  ಕೂಡ  ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸದಂತೆ  ಚಿಕ್ಕಬಳ್ಳಾಪುರ ತಾಲೂಕು ಪಂಚಾಯಿತಿ  ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಂಟಿ ಸಮೀಕ್ಷೆಯಲ್ಲಿ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಶರೀಫ್, ತಹಸೀಲ್ದಾರ್ ಗಣಪತಿಶಾಸ್ತ್ರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ (ಎಚ್.ಎನ್ ವ್ಯಾಲಿ ಯೋಜನೆ)ಯ ಸಹಾಯಕ ಕಾರ್ಯಪಾಲಕ ಅಭಿಯಂತರ ರವೀಂದ್ರನಾಥ್,  RFO  ಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು  ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!