ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ…!

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕ ಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳು ಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ದಾವಣಗೆರೆಯಿಂದ, ಸಂತೆಬೆನ್ನೂರು ಮಾರ್ಗವಾಗಿ, ಸೂಳೆಕೆರೆ ವರೆಗೆ ಬೈಕ್ ರ್ಯಾಲಿ ಯನ್ನು ಹಮ್ಮಿಕೊಳ್ಳಲಾಯಿತು.

ದಾವಣಗೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ತಮ್ಮ ತಮ್ಮ ಬುಲೆಟ್ ಬೈಕ್‍ನೊಂದಿಗೆ ರ್ಯಾಲಿ ಹೊರಡಲು ಉತ್ಸಾಹ, ಹುರುಪಿನೊಂದಿಗೆ ಸಿದ್ಧರಾಗಿ ಬಂದಿದ್ದರು.

ಜಿಲ್ಲಾಧಿಕಾರಿಗಳು ತಮ್ಮ ಬೈಕ್‍ಗೆ ‘ಕೋವಿಡ್ ನಿಯಂತ್ರಣ ಕುರಿತು, ತಪ್ಪದೆ ಲಸಿಕೆ ಪಡೆಯುವಂತೆ ಕೋರುವ ಸಂದೇಶವುಳ್ಳ ಫಲಕವನ್ನು ಅಳವಡಿಸಿಕೊಂಡರೆ, ಎಸ್‍ಪಿ ಸಿ.ಬಿ. ರಿಷ್ಯಂತ್ ಅವರು ಅಪರಾಧ ತಡೆ ಮಾಸಾಚರಣೆ ನಿಮಿತ್ಯ, ‘ಹೆಲ್ಮೆಟ್ ಬಳಸಿ ಚಾಲನೆ ಮಾಡಿ’, ಅಪರಾಧ ಮುಕ್ತ ಸಮಾಜ ನಿರ್ಮಿಸೋಣ ಬನ್ನಿ’ ಎಂಬ ಸಂದೇಶವುಳ್ಳ ಫಲಕ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ‘ಮಕ್ಕಳ ಸಹಾಯವಾಣೀ 1098’ ಕುರಿತು, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ಅವರು, ಬಾಲ ಕಾರ್ಮಿಕ ಪದ್ದತಿ ವಿರೋಧದ ಬಗೆಗಿನ ಸಂದೇಶವುಳ್ಳ ಫಲಕ, ಆರ್‍ಟಿಒ ಶ್ರೀಧರ್ ಮಲ್ಲಾಡ್ ಅವರು ಕೂಡ ರಸ್ತೆ ಸುರಕ್ಷತೆ ಸಪ್ತಾಹ ಕುರಿತು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗಂಗಪ್ಪ ಅವರು ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಫಲಕಗಳನ್ನು ತಮ್ಮ ಬೈಕ್‍ಗೆ ಅಳವಡಿಸಿಕೊಂಡಿದ್ದರು.

ಜಿಲ್ಲಾ ಪಂಚಾಯತ್ ಆವರಣದಿಂದ ಆವರಣದಿಂದ ಹೊರಟ ಅಧಿಕಾರಿಗಳ ಬೈಕ್ ರ್ಯಾಲಿ, ಶಿಸ್ತಿನಿಂದ, ರಸ್ತೆಯ ಒಂದೆ ಬದಿಯಲ್ಲಿ ಮಿತಿಯಾದ ವೇಗದೊಂದಿಗೆ ಸಾಗಿತು.  ಸಂತೆಬೆನ್ನೂರಿಗೆ ಆಗಮಿಸಿ, ಇಲ್ಲಿನ ಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿತು. ಬೈಕ್ ರ್ಯಾಲಿ ಸಾಗುತ್ತಿದ್ದ ದಾರಿಯಲ್ಲಿನ ಗ್ರಾಮಗಳಲ್ಲಿ ಸಾರ್ವಜನಿಕರು, ಇಕ್ಕೆಲಗಳಲ್ಲಿ ನಿಂತು, ಬೈಕ್ ರ್ಯಾಲಿಯನ್ನು ಅಚ್ಚರಿ ಹಾಗೂ ಕುತೂಹಲದಿಂದ ವೀಕ್ಷಿಸಿದ್ದು ಕಂಡುಬಂದಿತು.  ಸಂತೆಬೆನ್ನೂರಿನ ಪುಷ್ಕರಣಿ ವೀಕ್ಷಿಸಲು ಆಗಮಿಸಿದ್ದ ಸಾರ್ವಜನಿಕರಲ್ಲೂ ಕೂಡ ಜನಜಾಗೃತಿಯನ್ನು ಇದೇ ಸಂದರ್ಭದಲ್ಲಿ ಅಧಿಕಾರಿಗಳ ತಂಡ ಮೂಡಿಸುವಲ್ಲಿ ಯಶಸ್ವಿಯಾಯಿತು.  ಬೈಕ್ ರ್ಯಾಲಿಯು ಸೂಳೆಕೆರೆ ಬಳಿಯ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಮಾಡುವ ಮೂಲಕ ಜಾಥಾ ಪೂರ್ಣಗೊಳಿಸಿತು.

ಕಚೇರಿಗಳಲ್ಲಿ ಕುಳಿತು ಸಾರ್ವಜನಿಕರೊಂದಿಗೆ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು, ಸಮಸ್ಯೆಗಳ ಪರಿಹಾರಕ್ಕೆ ಕಡತಗಳ ನಡುವೆ ಕುಳಿತು ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ, ಭಾನುವಾರದಂದು ಏರ್ಪಡಿಸಿದ ವಿಶೇಷ ಬೈಕ್ ರ್ಯಾಲಿ, ಕಚೇರಿಯಿಂದ ಹೊರಬಂದು, ಬೈಕ್ ಮೂಲಕ ರಸ್ತೆಯಲ್ಲಿ ಸಾಗುತ್ತಾ ಜನರೊಂದಿಗೆ ಬೆರೆಯುವ ಅವಕಾಶ ಕಲ್ಪಿಸಿತಲ್ಲದೆ, ಸಾರ್ವಜನಿಕ ಜೀವನದ ಮತ್ತೊಂದು ಮಜಲನ್ನು ಪರಿಚಯಿಸುವಂತೆ ಮಾಡಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ನಾಯಕ್,  ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆರ್‍ಟಿಒ ಶೀಧರ್ ಮಲ್ಲಾಡ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!