ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ…!

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕ ಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳು ಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ದಾವಣಗೆರೆಯಿಂದ, ಸಂತೆಬೆನ್ನೂರು ಮಾರ್ಗವಾಗಿ, ಸೂಳೆಕೆರೆ ವರೆಗೆ ಬೈಕ್ ರ್ಯಾಲಿ ಯನ್ನು ಹಮ್ಮಿಕೊಳ್ಳಲಾಯಿತು.

ದಾವಣಗೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ತಮ್ಮ ತಮ್ಮ ಬುಲೆಟ್ ಬೈಕ್‍ನೊಂದಿಗೆ ರ್ಯಾಲಿ ಹೊರಡಲು ಉತ್ಸಾಹ, ಹುರುಪಿನೊಂದಿಗೆ ಸಿದ್ಧರಾಗಿ ಬಂದಿದ್ದರು.

ಜಿಲ್ಲಾಧಿಕಾರಿಗಳು ತಮ್ಮ ಬೈಕ್‍ಗೆ ‘ಕೋವಿಡ್ ನಿಯಂತ್ರಣ ಕುರಿತು, ತಪ್ಪದೆ ಲಸಿಕೆ ಪಡೆಯುವಂತೆ ಕೋರುವ ಸಂದೇಶವುಳ್ಳ ಫಲಕವನ್ನು ಅಳವಡಿಸಿಕೊಂಡರೆ, ಎಸ್‍ಪಿ ಸಿ.ಬಿ. ರಿಷ್ಯಂತ್ ಅವರು ಅಪರಾಧ ತಡೆ ಮಾಸಾಚರಣೆ ನಿಮಿತ್ಯ, ‘ಹೆಲ್ಮೆಟ್ ಬಳಸಿ ಚಾಲನೆ ಮಾಡಿ’, ಅಪರಾಧ ಮುಕ್ತ ಸಮಾಜ ನಿರ್ಮಿಸೋಣ ಬನ್ನಿ’ ಎಂಬ ಸಂದೇಶವುಳ್ಳ ಫಲಕ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ‘ಮಕ್ಕಳ ಸಹಾಯವಾಣೀ 1098’ ಕುರಿತು, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ಅವರು, ಬಾಲ ಕಾರ್ಮಿಕ ಪದ್ದತಿ ವಿರೋಧದ ಬಗೆಗಿನ ಸಂದೇಶವುಳ್ಳ ಫಲಕ, ಆರ್‍ಟಿಒ ಶ್ರೀಧರ್ ಮಲ್ಲಾಡ್ ಅವರು ಕೂಡ ರಸ್ತೆ ಸುರಕ್ಷತೆ ಸಪ್ತಾಹ ಕುರಿತು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗಂಗಪ್ಪ ಅವರು ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಫಲಕಗಳನ್ನು ತಮ್ಮ ಬೈಕ್‍ಗೆ ಅಳವಡಿಸಿಕೊಂಡಿದ್ದರು.

ಜಿಲ್ಲಾ ಪಂಚಾಯತ್ ಆವರಣದಿಂದ ಆವರಣದಿಂದ ಹೊರಟ ಅಧಿಕಾರಿಗಳ ಬೈಕ್ ರ್ಯಾಲಿ, ಶಿಸ್ತಿನಿಂದ, ರಸ್ತೆಯ ಒಂದೆ ಬದಿಯಲ್ಲಿ ಮಿತಿಯಾದ ವೇಗದೊಂದಿಗೆ ಸಾಗಿತು.  ಸಂತೆಬೆನ್ನೂರಿಗೆ ಆಗಮಿಸಿ, ಇಲ್ಲಿನ ಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿತು. ಬೈಕ್ ರ್ಯಾಲಿ ಸಾಗುತ್ತಿದ್ದ ದಾರಿಯಲ್ಲಿನ ಗ್ರಾಮಗಳಲ್ಲಿ ಸಾರ್ವಜನಿಕರು, ಇಕ್ಕೆಲಗಳಲ್ಲಿ ನಿಂತು, ಬೈಕ್ ರ್ಯಾಲಿಯನ್ನು ಅಚ್ಚರಿ ಹಾಗೂ ಕುತೂಹಲದಿಂದ ವೀಕ್ಷಿಸಿದ್ದು ಕಂಡುಬಂದಿತು.  ಸಂತೆಬೆನ್ನೂರಿನ ಪುಷ್ಕರಣಿ ವೀಕ್ಷಿಸಲು ಆಗಮಿಸಿದ್ದ ಸಾರ್ವಜನಿಕರಲ್ಲೂ ಕೂಡ ಜನಜಾಗೃತಿಯನ್ನು ಇದೇ ಸಂದರ್ಭದಲ್ಲಿ ಅಧಿಕಾರಿಗಳ ತಂಡ ಮೂಡಿಸುವಲ್ಲಿ ಯಶಸ್ವಿಯಾಯಿತು.  ಬೈಕ್ ರ್ಯಾಲಿಯು ಸೂಳೆಕೆರೆ ಬಳಿಯ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಮಾಡುವ ಮೂಲಕ ಜಾಥಾ ಪೂರ್ಣಗೊಳಿಸಿತು.

ಕಚೇರಿಗಳಲ್ಲಿ ಕುಳಿತು ಸಾರ್ವಜನಿಕರೊಂದಿಗೆ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು, ಸಮಸ್ಯೆಗಳ ಪರಿಹಾರಕ್ಕೆ ಕಡತಗಳ ನಡುವೆ ಕುಳಿತು ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ, ಭಾನುವಾರದಂದು ಏರ್ಪಡಿಸಿದ ವಿಶೇಷ ಬೈಕ್ ರ್ಯಾಲಿ, ಕಚೇರಿಯಿಂದ ಹೊರಬಂದು, ಬೈಕ್ ಮೂಲಕ ರಸ್ತೆಯಲ್ಲಿ ಸಾಗುತ್ತಾ ಜನರೊಂದಿಗೆ ಬೆರೆಯುವ ಅವಕಾಶ ಕಲ್ಪಿಸಿತಲ್ಲದೆ, ಸಾರ್ವಜನಿಕ ಜೀವನದ ಮತ್ತೊಂದು ಮಜಲನ್ನು ಪರಿಚಯಿಸುವಂತೆ ಮಾಡಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ನಾಯಕ್,  ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆರ್‍ಟಿಒ ಶೀಧರ್ ಮಲ್ಲಾಡ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!