ಡಿಸಿ, ಎಸ್‍ಪಿ, ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬೈಕ್ ರ್ಯಾಲಿ…!

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳು, ಅಲ್ಲದೆ ಸಾಮಾಜಿಕ ಪಿಡುಗುಗಳ ಕುರಿತು ಜನ ಜಾಗೃತಿ, ಸಂಚಾರ ನಿಯಮಗಳು ಹಾಗೂ ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್‍ಪಿ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ದಾವಣಗೆರೆಯಿಂದ, ಸಂತೆಬೆನ್ನೂರು ಮಾರ್ಗವಾಗಿ, ಸೂಳೆಕೆರೆ ವರೆಗೆ ಬೈಕ್ ರ್ಯಾಲಿ ಯನ್ನು ಹಮ್ಮಿಕೊಳ್ಳಲಾಯಿತು.

ದಾವಣಗೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ತಮ್ಮ ತಮ್ಮ ಬುಲೆಟ್ ಬೈಕ್‍ನೊಂದಿಗೆ ರ್ಯಾಲಿ ಹೊರಡಲು ಉತ್ಸಾಹ, ಹುರುಪಿನೊಂದಿಗೆ ಸಿದ್ಧರಾಗಿ ಬಂದಿದ್ದರು.

ಜಿಲ್ಲಾಧಿಕಾರಿಗಳು ತಮ್ಮ ಬೈಕ್‍ಗೆ ‘ಕೋವಿಡ್ ನಿಯಂತ್ರಣ ಕುರಿತು, ತಪ್ಪದೆ ಲಸಿಕೆ ಪಡೆಯುವಂತೆ ಕೋರುವ ಸಂದೇಶವುಳ್ಳ ಫಲಕವನ್ನು ಅಳವಡಿಸಿಕೊಂಡರೆ, ಎಸ್‍ಪಿ ಸಿ.ಬಿ. ರಿಷ್ಯಂತ್ ಅವರು ಅಪರಾಧ ತಡೆ ಮಾಸಾಚರಣೆ ನಿಮಿತ್ಯ, ‘ಹೆಲ್ಮೆಟ್ ಬಳಸಿ ಚಾಲನೆ ಮಾಡಿ’, ಅಪರಾಧ ಮುಕ್ತ ಸಮಾಜ ನಿರ್ಮಿಸೋಣ ಬನ್ನಿ’ ಎಂಬ ಸಂದೇಶವುಳ್ಳ ಫಲಕ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಅವರು ‘ಮಕ್ಕಳ ಸಹಾಯವಾಣೀ 1098’ ಕುರಿತು, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ಅವರು, ಬಾಲ ಕಾರ್ಮಿಕ ಪದ್ದತಿ ವಿರೋಧದ ಬಗೆಗಿನ ಸಂದೇಶವುಳ್ಳ ಫಲಕ, ಆರ್‍ಟಿಒ ಶ್ರೀಧರ್ ಮಲ್ಲಾಡ್ ಅವರು ಕೂಡ ರಸ್ತೆ ಸುರಕ್ಷತೆ ಸಪ್ತಾಹ ಕುರಿತು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗಂಗಪ್ಪ ಅವರು ಕೋವಿಡ್ ನಿಯಂತ್ರಣ ಕುರಿತ ಜಾಗೃತಿ ಫಲಕಗಳನ್ನು ತಮ್ಮ ಬೈಕ್‍ಗೆ ಅಳವಡಿಸಿಕೊಂಡಿದ್ದರು.

ಜಿಲ್ಲಾ ಪಂಚಾಯತ್ ಆವರಣದಿಂದ ಆವರಣದಿಂದ ಹೊರಟ ಅಧಿಕಾರಿಗಳ ಬೈಕ್ ರ್ಯಾಲಿ, ಶಿಸ್ತಿನಿಂದ, ರಸ್ತೆಯ ಒಂದೆ ಬದಿಯಲ್ಲಿ ಮಿತಿಯಾದ ವೇಗದೊಂದಿಗೆ ಸಾಗಿತು.  ಸಂತೆಬೆನ್ನೂರಿಗೆ ಆಗಮಿಸಿ, ಇಲ್ಲಿನ ಐತಿಹಾಸಿಕ ಪುಷ್ಕರಣಿಗೆ ಭೇಟಿ ನೀಡಿತು. ಬೈಕ್ ರ್ಯಾಲಿ ಸಾಗುತ್ತಿದ್ದ ದಾರಿಯಲ್ಲಿನ ಗ್ರಾಮಗಳಲ್ಲಿ ಸಾರ್ವಜನಿಕರು, ಇಕ್ಕೆಲಗಳಲ್ಲಿ ನಿಂತು, ಬೈಕ್ ರ್ಯಾಲಿಯನ್ನು ಅಚ್ಚರಿ ಹಾಗೂ ಕುತೂಹಲದಿಂದ ವೀಕ್ಷಿಸಿದ್ದು ಕಂಡುಬಂದಿತು.  ಸಂತೆಬೆನ್ನೂರಿನ ಪುಷ್ಕರಣಿ ವೀಕ್ಷಿಸಲು ಆಗಮಿಸಿದ್ದ ಸಾರ್ವಜನಿಕರಲ್ಲೂ ಕೂಡ ಜನಜಾಗೃತಿಯನ್ನು ಇದೇ ಸಂದರ್ಭದಲ್ಲಿ ಅಧಿಕಾರಿಗಳ ತಂಡ ಮೂಡಿಸುವಲ್ಲಿ ಯಶಸ್ವಿಯಾಯಿತು.  ಬೈಕ್ ರ್ಯಾಲಿಯು ಸೂಳೆಕೆರೆ ಬಳಿಯ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ, ದೇವರ ದರ್ಶನ ಮಾಡುವ ಮೂಲಕ ಜಾಥಾ ಪೂರ್ಣಗೊಳಿಸಿತು.

ಕಚೇರಿಗಳಲ್ಲಿ ಕುಳಿತು ಸಾರ್ವಜನಿಕರೊಂದಿಗೆ ಸಮಸ್ಯೆಗಳನ್ನು ಆಲಿಸಿ, ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು, ಸಮಸ್ಯೆಗಳ ಪರಿಹಾರಕ್ಕೆ ಕಡತಗಳ ನಡುವೆ ಕುಳಿತು ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ, ಭಾನುವಾರದಂದು ಏರ್ಪಡಿಸಿದ ವಿಶೇಷ ಬೈಕ್ ರ್ಯಾಲಿ, ಕಚೇರಿಯಿಂದ ಹೊರಬಂದು, ಬೈಕ್ ಮೂಲಕ ರಸ್ತೆಯಲ್ಲಿ ಸಾಗುತ್ತಾ ಜನರೊಂದಿಗೆ ಬೆರೆಯುವ ಅವಕಾಶ ಕಲ್ಪಿಸಿತಲ್ಲದೆ, ಸಾರ್ವಜನಿಕ ಜೀವನದ ಮತ್ತೊಂದು ಮಜಲನ್ನು ಪರಿಚಯಿಸುವಂತೆ ಮಾಡಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ನಾಯಕ್,  ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಆರ್‍ಟಿಒ ಶೀಧರ್ ಮಲ್ಲಾಡ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!