ನವದೆಹಲಿ: ರಾಜ್ಯ ಸರ್ಕಾರಗಳು ಬಯಸಿದರೆ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ಅವಕಾಶ ನೀಡಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.
ಕೆಳಮನೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವೆ ಅನ್ನಪೂರ್ಣ ದೇವಿ, ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಮಕ್ಕಳಿಗೆ ಪ್ರಾದೇಶಿಕ ಭಾಷೆಯ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಣವು (ಸಂವಿಧಾನ) ಸಮಕಾಲೀನ ಪಟ್ಟಿಯಲ್ಲಿ ಬರುತ್ತದೆ. ರಾಜ್ಯಗಳು ಬಯಸಿದರೆ, ಅವರು ಭಗವತ್ಗೀತೆಯನ್ನು ಪಠ್ಯಕ್ರಮದಲ್ಲಿ ಸೇರಿಸಬಹುದು ಎಂದರು.
ಸಿಬಿಎಸ್ಇ ಮಾದರಿಯಡಿ, ಭಗವದ್ಗೀತೆಯನ್ನು ಈಗಾಗಲೇ ವಿವಿಧ ತರಗತಿಗಳಲ್ಲಿ ಕಲಿಸಲಾಗುತ್ತಿದೆ. ರಾಜ್ಯಗಳು ಬಯಸಿದರೆ ಅವರು ಭಗವದ್ಗೀತೆಯನ್ನು ಸೇರಿಸಬಹುದು, ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಸದನಕ್ಕೆ ತಿಳಿಸಿದ್ದಾರೆ.
ದೇಶಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ನಿಬಂಧನೆಗಳನ್ನು ತರಲು ಸರ್ಕಾರವು ಪರಿಗಣಿಸುತ್ತಿದೆಯೇ ಎಂದು ಉತ್ತರ ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರ ಪ್ರಶ್ನೆಗೆ ಸಚಿವೆ ಉತ್ತರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….