ಸಂಗೀತ ವಿದ್ಯೆ ಸಾಧಕನ ಸ್ವತ್ತಾಗಬೇಕು: ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರದಲ್ಲಿ ಅಭಿಮತ

ಬೆಂಗಳೂರು: ನಮ್ಮ ಬಳಿ ಕಲಿತ ಅನೇಕ ಶಿಷ್ಯರು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಖುಷಿ ತಂದಿದೆ. ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ.  ಶಿಸ್ತಿನ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಬದ್ಧತೆಯಿಂದ ಸಂಗೀತ ಕಲಿತಾಗ ಮಾತ್ರ ಗಾಯನ ಕ್ಷೇತ್ರದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ವಿದ್ಯೆಯನ್ನು ಕಲಿಯಬೇಕು ಅದನ್ನು ಹೊರತು ಕದಿಯಬಾರದು ಎಂದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ನಾಡಿನ ಹೆಸರಾಂತ ಗಾಯಕ ಹಾಗೂ ಸ್ವರ ಸಂಯೋಜಕರಾದ ಪಂಡಿತ್ ಬಸವರಾಜ್ ಮುಗಳಖೋಡ ಸಂಗೀತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ನಗರದ ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಶ್ರೀ ಆರೂಢ ಜ್ಞಾನಸಭಾಂಗಣ ಸಿದ್ಧಾರೂಢ ಆಶ್ರಮದಲ್ಲಿ ಚಿರಂತನ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಇವರ ಸಹಕಾರದಲ್ಲಿ ನಡೆದ ಸ್ವರ ಚಿರಂತನ ಅರ್ಪಿಸುವ ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಸಾಧನೆಗೆ ಸತತ ಪರಿಶ್ರಮವೇ ಮುಖ್ಯ.  ವಿದ್ಯೆಯೆಂಬ ಸಂಪತ್ತನ್ನ ಸಾಧನೆಯ ಅಭ್ಯಾಸದ ಮೂಲಕ ನಾವು ಡಿಪಾಜಿಟ್ ಮಾಡುತ್ತ ಹೋದರೆ ಯಾವಾಗ ಬೇಕಾದರೂ ಅದನ್ನು ಗಾಯನವೆಂಬ ವಿತ್ ಡ್ರಾ ಮೂಲಕ ಬಳಸಬಹುದು. ಸಾಧನೆ ಮಾಡದೆ ಯಾವುದನ್ನು ಬಳಸಲು ಆಗುವುದಿಲ್ಲ  ಎಂದು ಸೂಚ್ಯವಾಗಿ ತಿಳಿಸಿದರು.  

ನಾಡಿನ ಖ್ಯಾತ ಗಾಯಕಿ ಹಾಗೂ ಸಂಗೀತ ನಿರ್ದೇಶಕರಾದ ಸುಮಾ ಎಲ್.ಎನ್. ಶಾಸ್ತ್ರೀ ಅವರು ಮಾತನಾಡಿ, ಗುರುವಿನ ಮುಖೇನ ಕಲಿಯುವ ಶಿಕ್ಷಣಾರ್ಥಿಗಳು ಹೆಚ್ಚಾಗಬೇಕು. ನಾದಝೇಂಕಾರದಂತಹ ಶಾಸೀಯ ಸಂಗೀತ ಹಾಗೂ ವೈವಿಧ್ಯಮಯ ಕನ್ನಡ ಗೀತೆಗಳ ಪ್ರಸ್ತುತಿಯಿಂದ ಯುವ ಪ್ರತಿಭೆಗಳಿಗೆ ಅವಕಾಶದ ಜತೆಗೆ ಗುರುಪರಂಪರೆಯ ಸಂಗೀತ ಶಿಕ್ಷಣಕ್ಕೆ ಮುನ್ನುಡಿಯಾಗಲಿದೆ ಎಂದು ಹೇಳಿದರು. 

ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಕೇಳುವ, ಕಲಿಯುವ ಮತ್ತು ಅದನ್ನು ಪ್ರಸ್ತುತಿ ಪಡಿಸುವ ಕಲಿಕೆಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಾಗಲಿದೆ. ಜಂಜಾಟದ ಜೀವನದಲ್ಲಿ ಸಂಗೀತ ಎಲ್ಲರಿಗೂ ಚಿಕಿತ್ಸೆ ರೂಪದಲ್ಲಿ ನಮಗೆ ಮಾನಸಿಕ ಶಾಂತಿಯನ್ನು ಹಾಗೂ ಶಾರೀರಿಕ ತಾಲೀಮು ಅನ್ನು ನೀಡುತ್ತದೆ. ಕೊರೊನಾ ಸಂದರ್ಭದಲ್ಲೂ ಇಷ್ಟುಂದು ಜನ ಸಭಿಕರು ಸೇರಿರುವುದು ಸಂಗೀತಕ್ಕಿರುವ ಶಕ್ತಿಯನ್ನು ತೋರಿಸುತ್ತದೆ ಎಂದರು. 

ಸ್ವರ ಚಿರಂತನ, ನಾಟ್ಯಾಂಜನ, ಸಾಯಿ ಸ್ವರಾಂಜಲಿ, ಝೇಂಕಾರ ಭಾರತಿ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ಕಲಾವಿದರಿಂದ ವೈವುವಿಧ್ಯಮಯ ಗೀತಗಾಯನ ಹಾಗೂ ಭರತನಾಟ್ಯ ಕಾರ್ಯ ಸೊಗಸಾಗಿ ಮೂಡಿಬಂದಿತು. ಗಾಯಕ, ಗಾಯಕಿಯರಿಗೆ  ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಚಿರಂತನ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ  ವೀರೇಶ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರತಿಭಾ ಸಿ.ವಿ., ವಂದಿಸಿದರು. ಗುರುರಾಜ್ ನಿರೂಪಿಸಿದರು. ಶ್ರೀ ಆರೂಢ ಜ್ಞಾನ ಮಂದಿರದ ವ್ಯವಸ್ಥಾಪಕ ಪ್ರಕಾಶ್ ಬಾಗನ್ನವರ್, ಗುರುಶಾಂತನಂದ ಪ್ರೌಢಶಾಲೆಯ ಶಿಕ್ಷಕ ಆರ್.ಟಿ. ಹುದ್ದಾರ್, ಮ್ಯೂಸಿಕ್ ಇನ್ ಡಿವೈನ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಕುಮಾರ್, ಜಾಗೃತಿ ಸಂಸ್ಥೆಯ  ಅಧ್ಯಕ್ಷ  ಬಿ.ನಾಗೇಶ್,  ಶಿಕ್ಷಣ ತಜ್ಞೆ ಪ್ರೇಮ ಶಾಂತಕುಮಾರ್, ಸವಿತಾ ಕುಲಕರ್ಣಿ, ಬಸವರಾಜ್ ಅಜ್ಜಪ್ಪಘಿ, ಸೂರ್ಯಕಾಂತ್ ಬಿರಾದರ್, ಕಾರ್ತಿಕ್, ಕಿರುತೆರೆ ನಟಿ ರಶ್ಮಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   

ಜನಮನಸೂರೆಗೊಂಡ ಸಂಗೀತ: ಪಂಡಿತ್ ಬಸವರಾಜ ಮುಗಳಖೋಡ ಅವರು ಪ್ರಸ್ತುತಿ ಪಡಿಸಿದ ರಾಗ ಮಾಲ್‌ಕೌಂಸ್, ವಚನ ಕಂಸಾಳೆ, ಶಿಸುನಾಳ ಶರೀಪರ ತತ್ವಪದ, ಸಿದ್ಧರೂಢರ ಭಕ್ತಿಗೀತೆಗಳು ನಗರದ ಜನತೆಗೆ ಮುದ ನೀಡಿದವು.

ಗಾಯಕಿ ಸುಮಾ ಎಲ್. ಎನ್ ಶಾಸ್ತ್ರೀ ವಚನ, ಭಜನ್, ಭಕ್ತಿಗೀತೆಗಳನ್ನು ಸೂಶ್ರವ್ಯವಾಗಿ ಸಂಗೀತ  ಉಣಬಡಿಸಿದರು. ಪ್ರತಿಭಾ ವೀರೇಶ್ ಹಾಗೂ ಸ್ವರಚಿರಂತನ ತಂಡ ಜನಪದ, ದೇಶಭಕ್ತಿಗೀತೆ, ವಚನಗಾಯನ ಪ್ರಸ್ತುತಿ ಪಡಿಸಿದರು. 

ವಾದ್ಯ ಸಹಕಾರದಲ್ಲಿ  ವಿದ್ವಾನರುಗಳಾದ ಶ್ರೀನಿವಾಸಯ್ಯ ಜಿ. ಕೀಬೋರ್ಡ್ ನುಡಿಸಿದರು. ನವನೀತ್ ಶ್ಯಾಂ ಹಾರ್ಮೋನಿಯಂ ಸಾಥ್ ನೀಡಿದರು. ರಾಘವೇಂದ್ರ ಜೋಷಿ ಅವರು ತಬಲಾ ಸಾಥ್ ನೀಡಿದರು. ಶಶಿದರ್ ಅವರು ರಿಂದಂ ಪ್ಯಾಡ್ ನುಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!