ಸಂಗೀತ ವಿದ್ಯೆ ಸಾಧಕನ ಸ್ವತ್ತಾಗಬೇಕು: ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರದಲ್ಲಿ ಅಭಿಮತ

ಬೆಂಗಳೂರು: ನಮ್ಮ ಬಳಿ ಕಲಿತ ಅನೇಕ ಶಿಷ್ಯರು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಖುಷಿ ತಂದಿದೆ. ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ.  ಶಿಸ್ತಿನ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಬದ್ಧತೆಯಿಂದ ಸಂಗೀತ ಕಲಿತಾಗ ಮಾತ್ರ ಗಾಯನ ಕ್ಷೇತ್ರದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ವಿದ್ಯೆಯನ್ನು ಕಲಿಯಬೇಕು ಅದನ್ನು ಹೊರತು ಕದಿಯಬಾರದು ಎಂದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ನಾಡಿನ ಹೆಸರಾಂತ ಗಾಯಕ ಹಾಗೂ ಸ್ವರ ಸಂಯೋಜಕರಾದ ಪಂಡಿತ್ ಬಸವರಾಜ್ ಮುಗಳಖೋಡ ಸಂಗೀತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ನಗರದ ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಶ್ರೀ ಆರೂಢ ಜ್ಞಾನಸಭಾಂಗಣ ಸಿದ್ಧಾರೂಢ ಆಶ್ರಮದಲ್ಲಿ ಚಿರಂತನ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಇವರ ಸಹಕಾರದಲ್ಲಿ ನಡೆದ ಸ್ವರ ಚಿರಂತನ ಅರ್ಪಿಸುವ ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಸಾಧನೆಗೆ ಸತತ ಪರಿಶ್ರಮವೇ ಮುಖ್ಯ.  ವಿದ್ಯೆಯೆಂಬ ಸಂಪತ್ತನ್ನ ಸಾಧನೆಯ ಅಭ್ಯಾಸದ ಮೂಲಕ ನಾವು ಡಿಪಾಜಿಟ್ ಮಾಡುತ್ತ ಹೋದರೆ ಯಾವಾಗ ಬೇಕಾದರೂ ಅದನ್ನು ಗಾಯನವೆಂಬ ವಿತ್ ಡ್ರಾ ಮೂಲಕ ಬಳಸಬಹುದು. ಸಾಧನೆ ಮಾಡದೆ ಯಾವುದನ್ನು ಬಳಸಲು ಆಗುವುದಿಲ್ಲ  ಎಂದು ಸೂಚ್ಯವಾಗಿ ತಿಳಿಸಿದರು.  

ನಾಡಿನ ಖ್ಯಾತ ಗಾಯಕಿ ಹಾಗೂ ಸಂಗೀತ ನಿರ್ದೇಶಕರಾದ ಸುಮಾ ಎಲ್.ಎನ್. ಶಾಸ್ತ್ರೀ ಅವರು ಮಾತನಾಡಿ, ಗುರುವಿನ ಮುಖೇನ ಕಲಿಯುವ ಶಿಕ್ಷಣಾರ್ಥಿಗಳು ಹೆಚ್ಚಾಗಬೇಕು. ನಾದಝೇಂಕಾರದಂತಹ ಶಾಸೀಯ ಸಂಗೀತ ಹಾಗೂ ವೈವಿಧ್ಯಮಯ ಕನ್ನಡ ಗೀತೆಗಳ ಪ್ರಸ್ತುತಿಯಿಂದ ಯುವ ಪ್ರತಿಭೆಗಳಿಗೆ ಅವಕಾಶದ ಜತೆಗೆ ಗುರುಪರಂಪರೆಯ ಸಂಗೀತ ಶಿಕ್ಷಣಕ್ಕೆ ಮುನ್ನುಡಿಯಾಗಲಿದೆ ಎಂದು ಹೇಳಿದರು. 

ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಕೇಳುವ, ಕಲಿಯುವ ಮತ್ತು ಅದನ್ನು ಪ್ರಸ್ತುತಿ ಪಡಿಸುವ ಕಲಿಕೆಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಾಗಲಿದೆ. ಜಂಜಾಟದ ಜೀವನದಲ್ಲಿ ಸಂಗೀತ ಎಲ್ಲರಿಗೂ ಚಿಕಿತ್ಸೆ ರೂಪದಲ್ಲಿ ನಮಗೆ ಮಾನಸಿಕ ಶಾಂತಿಯನ್ನು ಹಾಗೂ ಶಾರೀರಿಕ ತಾಲೀಮು ಅನ್ನು ನೀಡುತ್ತದೆ. ಕೊರೊನಾ ಸಂದರ್ಭದಲ್ಲೂ ಇಷ್ಟುಂದು ಜನ ಸಭಿಕರು ಸೇರಿರುವುದು ಸಂಗೀತಕ್ಕಿರುವ ಶಕ್ತಿಯನ್ನು ತೋರಿಸುತ್ತದೆ ಎಂದರು. 

ಸ್ವರ ಚಿರಂತನ, ನಾಟ್ಯಾಂಜನ, ಸಾಯಿ ಸ್ವರಾಂಜಲಿ, ಝೇಂಕಾರ ಭಾರತಿ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ಕಲಾವಿದರಿಂದ ವೈವುವಿಧ್ಯಮಯ ಗೀತಗಾಯನ ಹಾಗೂ ಭರತನಾಟ್ಯ ಕಾರ್ಯ ಸೊಗಸಾಗಿ ಮೂಡಿಬಂದಿತು. ಗಾಯಕ, ಗಾಯಕಿಯರಿಗೆ  ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಚಿರಂತನ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ  ವೀರೇಶ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರತಿಭಾ ಸಿ.ವಿ., ವಂದಿಸಿದರು. ಗುರುರಾಜ್ ನಿರೂಪಿಸಿದರು. ಶ್ರೀ ಆರೂಢ ಜ್ಞಾನ ಮಂದಿರದ ವ್ಯವಸ್ಥಾಪಕ ಪ್ರಕಾಶ್ ಬಾಗನ್ನವರ್, ಗುರುಶಾಂತನಂದ ಪ್ರೌಢಶಾಲೆಯ ಶಿಕ್ಷಕ ಆರ್.ಟಿ. ಹುದ್ದಾರ್, ಮ್ಯೂಸಿಕ್ ಇನ್ ಡಿವೈನ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಕುಮಾರ್, ಜಾಗೃತಿ ಸಂಸ್ಥೆಯ  ಅಧ್ಯಕ್ಷ  ಬಿ.ನಾಗೇಶ್,  ಶಿಕ್ಷಣ ತಜ್ಞೆ ಪ್ರೇಮ ಶಾಂತಕುಮಾರ್, ಸವಿತಾ ಕುಲಕರ್ಣಿ, ಬಸವರಾಜ್ ಅಜ್ಜಪ್ಪಘಿ, ಸೂರ್ಯಕಾಂತ್ ಬಿರಾದರ್, ಕಾರ್ತಿಕ್, ಕಿರುತೆರೆ ನಟಿ ರಶ್ಮಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   

ಜನಮನಸೂರೆಗೊಂಡ ಸಂಗೀತ: ಪಂಡಿತ್ ಬಸವರಾಜ ಮುಗಳಖೋಡ ಅವರು ಪ್ರಸ್ತುತಿ ಪಡಿಸಿದ ರಾಗ ಮಾಲ್‌ಕೌಂಸ್, ವಚನ ಕಂಸಾಳೆ, ಶಿಸುನಾಳ ಶರೀಪರ ತತ್ವಪದ, ಸಿದ್ಧರೂಢರ ಭಕ್ತಿಗೀತೆಗಳು ನಗರದ ಜನತೆಗೆ ಮುದ ನೀಡಿದವು.

ಗಾಯಕಿ ಸುಮಾ ಎಲ್. ಎನ್ ಶಾಸ್ತ್ರೀ ವಚನ, ಭಜನ್, ಭಕ್ತಿಗೀತೆಗಳನ್ನು ಸೂಶ್ರವ್ಯವಾಗಿ ಸಂಗೀತ  ಉಣಬಡಿಸಿದರು. ಪ್ರತಿಭಾ ವೀರೇಶ್ ಹಾಗೂ ಸ್ವರಚಿರಂತನ ತಂಡ ಜನಪದ, ದೇಶಭಕ್ತಿಗೀತೆ, ವಚನಗಾಯನ ಪ್ರಸ್ತುತಿ ಪಡಿಸಿದರು. 

ವಾದ್ಯ ಸಹಕಾರದಲ್ಲಿ  ವಿದ್ವಾನರುಗಳಾದ ಶ್ರೀನಿವಾಸಯ್ಯ ಜಿ. ಕೀಬೋರ್ಡ್ ನುಡಿಸಿದರು. ನವನೀತ್ ಶ್ಯಾಂ ಹಾರ್ಮೋನಿಯಂ ಸಾಥ್ ನೀಡಿದರು. ರಾಘವೇಂದ್ರ ಜೋಷಿ ಅವರು ತಬಲಾ ಸಾಥ್ ನೀಡಿದರು. ಶಶಿದರ್ ಅವರು ರಿಂದಂ ಪ್ಯಾಡ್ ನುಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದಲ್ಲಿ NDA 140 ರಿಂದ 150 ಸ್ಥಾನವನ್ನ ಗೆಲ್ಲುತ್ತೆವೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ NDA 140 ರಿಂದ 150 ಸ್ಥಾನವನ್ನ ಗೆಲ್ಲುತ್ತೆವೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ NDA 140 ರಿಂದ 150 ಸ್ಥಾನವನ್ನ ಗೆಲ್ಲುತ್ತೆವೆ. ಮಾನ್ಯ ಮುಖ್ಯಮಂತ್ರಿಗಳು ಯಾವ ಅರ್ಥದಲ್ಲಿ ಟ್ವೀಟ್ ಮಾಡಿದ್ದರೋ ಗೊತ್ತಿಲ್ಲ: ನಿಖಿಲ್ ಕುಮಾರಸ್ವಾಮಿ (Nikhil Kumaraswmy)

[ccc_my_favorite_select_button post_id="119635"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!