ಸಂಗೀತ ವಿದ್ಯೆ ಸಾಧಕನ ಸ್ವತ್ತಾಗಬೇಕು: ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರದಲ್ಲಿ ಅಭಿಮತ

ಬೆಂಗಳೂರು: ನಮ್ಮ ಬಳಿ ಕಲಿತ ಅನೇಕ ಶಿಷ್ಯರು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಖುಷಿ ತಂದಿದೆ. ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ.  ಶಿಸ್ತಿನ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಬದ್ಧತೆಯಿಂದ ಸಂಗೀತ ಕಲಿತಾಗ ಮಾತ್ರ ಗಾಯನ ಕ್ಷೇತ್ರದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ವಿದ್ಯೆಯನ್ನು ಕಲಿಯಬೇಕು ಅದನ್ನು ಹೊರತು ಕದಿಯಬಾರದು ಎಂದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ನಾಡಿನ ಹೆಸರಾಂತ ಗಾಯಕ ಹಾಗೂ ಸ್ವರ ಸಂಯೋಜಕರಾದ ಪಂಡಿತ್ ಬಸವರಾಜ್ ಮುಗಳಖೋಡ ಸಂಗೀತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ನಗರದ ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಶ್ರೀ ಆರೂಢ ಜ್ಞಾನಸಭಾಂಗಣ ಸಿದ್ಧಾರೂಢ ಆಶ್ರಮದಲ್ಲಿ ಚಿರಂತನ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಇವರ ಸಹಕಾರದಲ್ಲಿ ನಡೆದ ಸ್ವರ ಚಿರಂತನ ಅರ್ಪಿಸುವ ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಸಾಧನೆಗೆ ಸತತ ಪರಿಶ್ರಮವೇ ಮುಖ್ಯ.  ವಿದ್ಯೆಯೆಂಬ ಸಂಪತ್ತನ್ನ ಸಾಧನೆಯ ಅಭ್ಯಾಸದ ಮೂಲಕ ನಾವು ಡಿಪಾಜಿಟ್ ಮಾಡುತ್ತ ಹೋದರೆ ಯಾವಾಗ ಬೇಕಾದರೂ ಅದನ್ನು ಗಾಯನವೆಂಬ ವಿತ್ ಡ್ರಾ ಮೂಲಕ ಬಳಸಬಹುದು. ಸಾಧನೆ ಮಾಡದೆ ಯಾವುದನ್ನು ಬಳಸಲು ಆಗುವುದಿಲ್ಲ  ಎಂದು ಸೂಚ್ಯವಾಗಿ ತಿಳಿಸಿದರು.  

ನಾಡಿನ ಖ್ಯಾತ ಗಾಯಕಿ ಹಾಗೂ ಸಂಗೀತ ನಿರ್ದೇಶಕರಾದ ಸುಮಾ ಎಲ್.ಎನ್. ಶಾಸ್ತ್ರೀ ಅವರು ಮಾತನಾಡಿ, ಗುರುವಿನ ಮುಖೇನ ಕಲಿಯುವ ಶಿಕ್ಷಣಾರ್ಥಿಗಳು ಹೆಚ್ಚಾಗಬೇಕು. ನಾದಝೇಂಕಾರದಂತಹ ಶಾಸೀಯ ಸಂಗೀತ ಹಾಗೂ ವೈವಿಧ್ಯಮಯ ಕನ್ನಡ ಗೀತೆಗಳ ಪ್ರಸ್ತುತಿಯಿಂದ ಯುವ ಪ್ರತಿಭೆಗಳಿಗೆ ಅವಕಾಶದ ಜತೆಗೆ ಗುರುಪರಂಪರೆಯ ಸಂಗೀತ ಶಿಕ್ಷಣಕ್ಕೆ ಮುನ್ನುಡಿಯಾಗಲಿದೆ ಎಂದು ಹೇಳಿದರು. 

ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಕೇಳುವ, ಕಲಿಯುವ ಮತ್ತು ಅದನ್ನು ಪ್ರಸ್ತುತಿ ಪಡಿಸುವ ಕಲಿಕೆಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಾಗಲಿದೆ. ಜಂಜಾಟದ ಜೀವನದಲ್ಲಿ ಸಂಗೀತ ಎಲ್ಲರಿಗೂ ಚಿಕಿತ್ಸೆ ರೂಪದಲ್ಲಿ ನಮಗೆ ಮಾನಸಿಕ ಶಾಂತಿಯನ್ನು ಹಾಗೂ ಶಾರೀರಿಕ ತಾಲೀಮು ಅನ್ನು ನೀಡುತ್ತದೆ. ಕೊರೊನಾ ಸಂದರ್ಭದಲ್ಲೂ ಇಷ್ಟುಂದು ಜನ ಸಭಿಕರು ಸೇರಿರುವುದು ಸಂಗೀತಕ್ಕಿರುವ ಶಕ್ತಿಯನ್ನು ತೋರಿಸುತ್ತದೆ ಎಂದರು. 

ಸ್ವರ ಚಿರಂತನ, ನಾಟ್ಯಾಂಜನ, ಸಾಯಿ ಸ್ವರಾಂಜಲಿ, ಝೇಂಕಾರ ಭಾರತಿ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ಕಲಾವಿದರಿಂದ ವೈವುವಿಧ್ಯಮಯ ಗೀತಗಾಯನ ಹಾಗೂ ಭರತನಾಟ್ಯ ಕಾರ್ಯ ಸೊಗಸಾಗಿ ಮೂಡಿಬಂದಿತು. ಗಾಯಕ, ಗಾಯಕಿಯರಿಗೆ  ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಚಿರಂತನ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ  ವೀರೇಶ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರತಿಭಾ ಸಿ.ವಿ., ವಂದಿಸಿದರು. ಗುರುರಾಜ್ ನಿರೂಪಿಸಿದರು. ಶ್ರೀ ಆರೂಢ ಜ್ಞಾನ ಮಂದಿರದ ವ್ಯವಸ್ಥಾಪಕ ಪ್ರಕಾಶ್ ಬಾಗನ್ನವರ್, ಗುರುಶಾಂತನಂದ ಪ್ರೌಢಶಾಲೆಯ ಶಿಕ್ಷಕ ಆರ್.ಟಿ. ಹುದ್ದಾರ್, ಮ್ಯೂಸಿಕ್ ಇನ್ ಡಿವೈನ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಕುಮಾರ್, ಜಾಗೃತಿ ಸಂಸ್ಥೆಯ  ಅಧ್ಯಕ್ಷ  ಬಿ.ನಾಗೇಶ್,  ಶಿಕ್ಷಣ ತಜ್ಞೆ ಪ್ರೇಮ ಶಾಂತಕುಮಾರ್, ಸವಿತಾ ಕುಲಕರ್ಣಿ, ಬಸವರಾಜ್ ಅಜ್ಜಪ್ಪಘಿ, ಸೂರ್ಯಕಾಂತ್ ಬಿರಾದರ್, ಕಾರ್ತಿಕ್, ಕಿರುತೆರೆ ನಟಿ ರಶ್ಮಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   

ಜನಮನಸೂರೆಗೊಂಡ ಸಂಗೀತ: ಪಂಡಿತ್ ಬಸವರಾಜ ಮುಗಳಖೋಡ ಅವರು ಪ್ರಸ್ತುತಿ ಪಡಿಸಿದ ರಾಗ ಮಾಲ್‌ಕೌಂಸ್, ವಚನ ಕಂಸಾಳೆ, ಶಿಸುನಾಳ ಶರೀಪರ ತತ್ವಪದ, ಸಿದ್ಧರೂಢರ ಭಕ್ತಿಗೀತೆಗಳು ನಗರದ ಜನತೆಗೆ ಮುದ ನೀಡಿದವು.

ಗಾಯಕಿ ಸುಮಾ ಎಲ್. ಎನ್ ಶಾಸ್ತ್ರೀ ವಚನ, ಭಜನ್, ಭಕ್ತಿಗೀತೆಗಳನ್ನು ಸೂಶ್ರವ್ಯವಾಗಿ ಸಂಗೀತ  ಉಣಬಡಿಸಿದರು. ಪ್ರತಿಭಾ ವೀರೇಶ್ ಹಾಗೂ ಸ್ವರಚಿರಂತನ ತಂಡ ಜನಪದ, ದೇಶಭಕ್ತಿಗೀತೆ, ವಚನಗಾಯನ ಪ್ರಸ್ತುತಿ ಪಡಿಸಿದರು. 

ವಾದ್ಯ ಸಹಕಾರದಲ್ಲಿ  ವಿದ್ವಾನರುಗಳಾದ ಶ್ರೀನಿವಾಸಯ್ಯ ಜಿ. ಕೀಬೋರ್ಡ್ ನುಡಿಸಿದರು. ನವನೀತ್ ಶ್ಯಾಂ ಹಾರ್ಮೋನಿಯಂ ಸಾಥ್ ನೀಡಿದರು. ರಾಘವೇಂದ್ರ ಜೋಷಿ ಅವರು ತಬಲಾ ಸಾಥ್ ನೀಡಿದರು. ಶಶಿದರ್ ಅವರು ರಿಂದಂ ಪ್ಯಾಡ್ ನುಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]