ದಿನ ಭವಿಷ್ಯ: ಮಂಗಳವಾರ, ಡಿಸೆಂಬರ್ 21, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ

ಮೇಷ: ಈ ರಾಶಿಯವರಿಗೆ ಹಿತಶತೃಗಳ ಸಲಹೆಯಿಂದ ತೊಂದರೆ. ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಈ ರಾಶಿಯವರ  ಪಾಲುದಾರಿಕೆಯಿಂದ ಲಾಭ ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಮಿಥುನ: ಈ ರಾಶಿಯವರ ಚತುರತೆಯಿಂದ ಜಯ, ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವುದು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಈ ರಾಶಿಯವರಿಗೆ ಖರ್ಚು ಜಾಸ್ತಿ, ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಈ ರಾಶಿಯವರು ಗುರುವಿನ ಅನುಗ್ರಹದಿಂದ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಈ  ರಾಶಿಯವರು ಅಪರಿಚಿತರ ಸಹಾಯದಿಂದ ಶುಭಫಲ ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಈ ರಾಶಿಯವರಿಗೆ ಗುರುವಿನ ಅನುಗ್ರಹವಿದೆ, ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ಈ ರಾಶಿಯವರಿಗೆ ಸ್ವಲ್ಪ ಹಿನ್ನಡೆ. ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ಈ ರಾಶಿಯವರಿಗೆ ಉತ್ತಮ ಅವಕಾಶಗಳು, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಈ ರಾಶಿಯವರಿಗೆ ಗಾಬರಿ, ಆತುರ ಬೇಡ. ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವುದು.

ಕುಂಭ: ಈ ರಾಶಿಯವರಿಗೆ ಆಕಸ್ಮಿಕ ಅದೃಷ್ಟ. ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಈ ರಾಶಿಯವರಿಗೆ ಹಿತ ಶತೃಗಳ ದೃಷ್ಟಿ, ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದ್ವಿತೀಯ 

ನಕ್ಷತ್ರ: ಪುನರ್ವಸು ನಕ್ಷತ್ರ

 ರಾಹುಕಾಲ: 03:13  ರಿಂದ 04:39

ಗುಳಿಕಕಾಲ: 12:22  ರಿಂದ 01:47

ಯಮಗಂಡಕಾಲ: 09:30 ರಿಂದ 10:56 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!