ಸಂಗೀತ ವಿದ್ಯೆ ಸಾಧಕನ ಸ್ವತ್ತಾಗಬೇಕು: ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರದಲ್ಲಿ ಅಭಿಮತ

ಬೆಂಗಳೂರು: ನಮ್ಮ ಬಳಿ ಕಲಿತ ಅನೇಕ ಶಿಷ್ಯರು ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಖುಷಿ ತಂದಿದೆ. ಗುರುಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಇದು ಸಹಕಾರಿಯಾಗಿದೆ.  ಶಿಸ್ತಿನ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಬದ್ಧತೆಯಿಂದ ಸಂಗೀತ ಕಲಿತಾಗ ಮಾತ್ರ ಗಾಯನ ಕ್ಷೇತ್ರದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತದೆ. ವಿದ್ಯೆಯನ್ನು ಕಲಿಯಬೇಕು ಅದನ್ನು ಹೊರತು ಕದಿಯಬಾರದು ಎಂದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ನಾಡಿನ ಹೆಸರಾಂತ ಗಾಯಕ ಹಾಗೂ ಸ್ವರ ಸಂಯೋಜಕರಾದ ಪಂಡಿತ್ ಬಸವರಾಜ್ ಮುಗಳಖೋಡ ಸಂಗೀತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ನಗರದ ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಶ್ರೀ ಆರೂಢ ಜ್ಞಾನಸಭಾಂಗಣ ಸಿದ್ಧಾರೂಢ ಆಶ್ರಮದಲ್ಲಿ ಚಿರಂತನ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ಇವರ ಸಹಕಾರದಲ್ಲಿ ನಡೆದ ಸ್ವರ ಚಿರಂತನ ಅರ್ಪಿಸುವ ವೈವಿಧ್ಯಮಯ ಕನ್ನಡ ಗೀತೆಗಳ ಗಾನಯಾನ ನಾದಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಸಾಧನೆಗೆ ಸತತ ಪರಿಶ್ರಮವೇ ಮುಖ್ಯ.  ವಿದ್ಯೆಯೆಂಬ ಸಂಪತ್ತನ್ನ ಸಾಧನೆಯ ಅಭ್ಯಾಸದ ಮೂಲಕ ನಾವು ಡಿಪಾಜಿಟ್ ಮಾಡುತ್ತ ಹೋದರೆ ಯಾವಾಗ ಬೇಕಾದರೂ ಅದನ್ನು ಗಾಯನವೆಂಬ ವಿತ್ ಡ್ರಾ ಮೂಲಕ ಬಳಸಬಹುದು. ಸಾಧನೆ ಮಾಡದೆ ಯಾವುದನ್ನು ಬಳಸಲು ಆಗುವುದಿಲ್ಲ  ಎಂದು ಸೂಚ್ಯವಾಗಿ ತಿಳಿಸಿದರು.  

ನಾಡಿನ ಖ್ಯಾತ ಗಾಯಕಿ ಹಾಗೂ ಸಂಗೀತ ನಿರ್ದೇಶಕರಾದ ಸುಮಾ ಎಲ್.ಎನ್. ಶಾಸ್ತ್ರೀ ಅವರು ಮಾತನಾಡಿ, ಗುರುವಿನ ಮುಖೇನ ಕಲಿಯುವ ಶಿಕ್ಷಣಾರ್ಥಿಗಳು ಹೆಚ್ಚಾಗಬೇಕು. ನಾದಝೇಂಕಾರದಂತಹ ಶಾಸೀಯ ಸಂಗೀತ ಹಾಗೂ ವೈವಿಧ್ಯಮಯ ಕನ್ನಡ ಗೀತೆಗಳ ಪ್ರಸ್ತುತಿಯಿಂದ ಯುವ ಪ್ರತಿಭೆಗಳಿಗೆ ಅವಕಾಶದ ಜತೆಗೆ ಗುರುಪರಂಪರೆಯ ಸಂಗೀತ ಶಿಕ್ಷಣಕ್ಕೆ ಮುನ್ನುಡಿಯಾಗಲಿದೆ ಎಂದು ಹೇಳಿದರು. 

ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಆಸಕ್ತಿಯಿಂದ ಕೇಳುವ, ಕಲಿಯುವ ಮತ್ತು ಅದನ್ನು ಪ್ರಸ್ತುತಿ ಪಡಿಸುವ ಕಲಿಕೆಗಳು ಇಂತಹ ಕಾರ್ಯಕ್ರಮಗಳಿಂದ ಹೆಚ್ಚಾಗಲಿದೆ. ಜಂಜಾಟದ ಜೀವನದಲ್ಲಿ ಸಂಗೀತ ಎಲ್ಲರಿಗೂ ಚಿಕಿತ್ಸೆ ರೂಪದಲ್ಲಿ ನಮಗೆ ಮಾನಸಿಕ ಶಾಂತಿಯನ್ನು ಹಾಗೂ ಶಾರೀರಿಕ ತಾಲೀಮು ಅನ್ನು ನೀಡುತ್ತದೆ. ಕೊರೊನಾ ಸಂದರ್ಭದಲ್ಲೂ ಇಷ್ಟುಂದು ಜನ ಸಭಿಕರು ಸೇರಿರುವುದು ಸಂಗೀತಕ್ಕಿರುವ ಶಕ್ತಿಯನ್ನು ತೋರಿಸುತ್ತದೆ ಎಂದರು. 

ಸ್ವರ ಚಿರಂತನ, ನಾಟ್ಯಾಂಜನ, ಸಾಯಿ ಸ್ವರಾಂಜಲಿ, ಝೇಂಕಾರ ಭಾರತಿ ವಿದ್ಯಾರ್ಥಿಗಳಿಂದ ಹಾಗೂ ಹಿರಿಯ ಕಲಾವಿದರಿಂದ ವೈವುವಿಧ್ಯಮಯ ಗೀತಗಾಯನ ಹಾಗೂ ಭರತನಾಟ್ಯ ಕಾರ್ಯ ಸೊಗಸಾಗಿ ಮೂಡಿಬಂದಿತು. ಗಾಯಕ, ಗಾಯಕಿಯರಿಗೆ  ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮವನ್ನು ಚಿರಂತನ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ  ವೀರೇಶ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರತಿಭಾ ಸಿ.ವಿ., ವಂದಿಸಿದರು. ಗುರುರಾಜ್ ನಿರೂಪಿಸಿದರು. ಶ್ರೀ ಆರೂಢ ಜ್ಞಾನ ಮಂದಿರದ ವ್ಯವಸ್ಥಾಪಕ ಪ್ರಕಾಶ್ ಬಾಗನ್ನವರ್, ಗುರುಶಾಂತನಂದ ಪ್ರೌಢಶಾಲೆಯ ಶಿಕ್ಷಕ ಆರ್.ಟಿ. ಹುದ್ದಾರ್, ಮ್ಯೂಸಿಕ್ ಇನ್ ಡಿವೈನ್ ಸಂಸ್ಥೆಯ ಅಧ್ಯಕ್ಷ ಮಹಾಂತೇಶ್ ಕುಮಾರ್, ಜಾಗೃತಿ ಸಂಸ್ಥೆಯ  ಅಧ್ಯಕ್ಷ  ಬಿ.ನಾಗೇಶ್,  ಶಿಕ್ಷಣ ತಜ್ಞೆ ಪ್ರೇಮ ಶಾಂತಕುಮಾರ್, ಸವಿತಾ ಕುಲಕರ್ಣಿ, ಬಸವರಾಜ್ ಅಜ್ಜಪ್ಪಘಿ, ಸೂರ್ಯಕಾಂತ್ ಬಿರಾದರ್, ಕಾರ್ತಿಕ್, ಕಿರುತೆರೆ ನಟಿ ರಶ್ಮಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.   

ಜನಮನಸೂರೆಗೊಂಡ ಸಂಗೀತ: ಪಂಡಿತ್ ಬಸವರಾಜ ಮುಗಳಖೋಡ ಅವರು ಪ್ರಸ್ತುತಿ ಪಡಿಸಿದ ರಾಗ ಮಾಲ್‌ಕೌಂಸ್, ವಚನ ಕಂಸಾಳೆ, ಶಿಸುನಾಳ ಶರೀಪರ ತತ್ವಪದ, ಸಿದ್ಧರೂಢರ ಭಕ್ತಿಗೀತೆಗಳು ನಗರದ ಜನತೆಗೆ ಮುದ ನೀಡಿದವು.

ಗಾಯಕಿ ಸುಮಾ ಎಲ್. ಎನ್ ಶಾಸ್ತ್ರೀ ವಚನ, ಭಜನ್, ಭಕ್ತಿಗೀತೆಗಳನ್ನು ಸೂಶ್ರವ್ಯವಾಗಿ ಸಂಗೀತ  ಉಣಬಡಿಸಿದರು. ಪ್ರತಿಭಾ ವೀರೇಶ್ ಹಾಗೂ ಸ್ವರಚಿರಂತನ ತಂಡ ಜನಪದ, ದೇಶಭಕ್ತಿಗೀತೆ, ವಚನಗಾಯನ ಪ್ರಸ್ತುತಿ ಪಡಿಸಿದರು. 

ವಾದ್ಯ ಸಹಕಾರದಲ್ಲಿ  ವಿದ್ವಾನರುಗಳಾದ ಶ್ರೀನಿವಾಸಯ್ಯ ಜಿ. ಕೀಬೋರ್ಡ್ ನುಡಿಸಿದರು. ನವನೀತ್ ಶ್ಯಾಂ ಹಾರ್ಮೋನಿಯಂ ಸಾಥ್ ನೀಡಿದರು. ರಾಘವೇಂದ್ರ ಜೋಷಿ ಅವರು ತಬಲಾ ಸಾಥ್ ನೀಡಿದರು. ಶಶಿದರ್ ಅವರು ರಿಂದಂ ಪ್ಯಾಡ್ ನುಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!