ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸದ ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷ ರೇವಣಸಿದ್ದಪ್ಪ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ದಾವಣಗೆರೆ ಜಿಲ್ಲೆಯ ಹಿರೇಮೇಗಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸುವುದಾಗಿ ಡಾ. ಬಿ.ಆರ್ ಅಂಬೇಡ್ಕರ್ ಸಂಘಟನೆಯ ಅಧ್ಯಕ್ಷ ರೇವಣಸಿದ್ದಪ್ಪ 2021ರ ಆಗಸ್ಟ್ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು, ನಾಲ್ಕು ತಿಂಗಳಲ್ಲಿ ಪ್ರತಿಮೆ ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಇದಕ್ಕೆ ಸಮ್ಮತಿಸಿದ್ದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿತ್ತು. ಆದರೆ, ಭರವಸೆಯಂತೆ ಪ್ರತಿಮ ಸ್ಥಳಾಂತರಿಸದ ಹಿನ್ನೆಲೆಯಲ್ಲಿ ಸಂಘಟನೆ ಅಧ್ಯಕ್ಷರು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿ, ಸಮನ್ಸ್ ಜಾರಿ ಮಾಡಿದೆ ಎಂದು ಲೀಗಲ್ ನ್ಯೂಸ್ ವರದಿ ಮಾಡಿದೆ.

ಹಿನ್ನೆಲೆ: ಡಾ. ಬಿ.ಆರ್ ಅಂಬೇಡ್ಕರರ ಪ್ರತಿಮೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಮಹಾನ್ ಮಾನವತಾವಾದಿ, ನ್ಯಾಯಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸುವುದು ಅವರಿಗೆ ಮಾಡುವ ಅಪಮಾನ ಎಂದು ಬೇಸರ ವ್ಯಕ್ತಪಡಿಸಿತ್ತು. ಈ ವೇಳೆ ನ್ಯಾಯಾಲಯದ ಕ್ಷಮೆ ಕೋರಿದ್ದ ಸಂಘಟನೆ, ಪುತ್ಥಳಿ ಮರುಸ್ಥಾಪಿಸಲು ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿತ್ತು. ಆದರೆ, ಸರ್ಕಾರ ಸ್ಥಳ ನೀಡಲು ನಿರಾಕರಿಸಿತ್ತು. ನಂತರ, ಪುತ್ಥಳಿ ಸ್ಥಳಾಂತರಿಸುವುದಾಗಿ ಸಂಘದ ಪ್ರತಿನಿಧಿಗಳು ಆಗಸ್ಟ್‌ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥಪಡಿಸಿದ್ದ ನ್ಯಾಯಾಲಯ ಡಿಸೆಂಬರ್‌ 17 ರೊಳಗೆ ಪ್ರತಿಮೆ ಸ್ಥಳಾಂತರಿಸಿ, ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!