ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸದ ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷ ರೇವಣಸಿದ್ದಪ್ಪ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ದಾವಣಗೆರೆ ಜಿಲ್ಲೆಯ ಹಿರೇಮೇಗಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸುವುದಾಗಿ ಡಾ. ಬಿ.ಆರ್ ಅಂಬೇಡ್ಕರ್ ಸಂಘಟನೆಯ ಅಧ್ಯಕ್ಷ ರೇವಣಸಿದ್ದಪ್ಪ 2021ರ ಆಗಸ್ಟ್ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು, ನಾಲ್ಕು ತಿಂಗಳಲ್ಲಿ ಪ್ರತಿಮೆ ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಇದಕ್ಕೆ ಸಮ್ಮತಿಸಿದ್ದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿತ್ತು. ಆದರೆ, ಭರವಸೆಯಂತೆ ಪ್ರತಿಮ ಸ್ಥಳಾಂತರಿಸದ ಹಿನ್ನೆಲೆಯಲ್ಲಿ ಸಂಘಟನೆ ಅಧ್ಯಕ್ಷರು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿ, ಸಮನ್ಸ್ ಜಾರಿ ಮಾಡಿದೆ ಎಂದು ಲೀಗಲ್ ನ್ಯೂಸ್ ವರದಿ ಮಾಡಿದೆ.

ಹಿನ್ನೆಲೆ: ಡಾ. ಬಿ.ಆರ್ ಅಂಬೇಡ್ಕರರ ಪ್ರತಿಮೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಮಹಾನ್ ಮಾನವತಾವಾದಿ, ನ್ಯಾಯಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸುವುದು ಅವರಿಗೆ ಮಾಡುವ ಅಪಮಾನ ಎಂದು ಬೇಸರ ವ್ಯಕ್ತಪಡಿಸಿತ್ತು. ಈ ವೇಳೆ ನ್ಯಾಯಾಲಯದ ಕ್ಷಮೆ ಕೋರಿದ್ದ ಸಂಘಟನೆ, ಪುತ್ಥಳಿ ಮರುಸ್ಥಾಪಿಸಲು ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿತ್ತು. ಆದರೆ, ಸರ್ಕಾರ ಸ್ಥಳ ನೀಡಲು ನಿರಾಕರಿಸಿತ್ತು. ನಂತರ, ಪುತ್ಥಳಿ ಸ್ಥಳಾಂತರಿಸುವುದಾಗಿ ಸಂಘದ ಪ್ರತಿನಿಧಿಗಳು ಆಗಸ್ಟ್‌ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥಪಡಿಸಿದ್ದ ನ್ಯಾಯಾಲಯ ಡಿಸೆಂಬರ್‌ 17 ರೊಳಗೆ ಪ್ರತಿಮೆ ಸ್ಥಳಾಂತರಿಸಿ, ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!