ಸರ್ಕಾರದ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಂಡರೆ ಕೃಷಿಯಿಂದ ಹೆಚ್ಚಿನ ಲಾಭ: ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು

ದೊಡ್ಡಬಳ್ಳಾಪುರ: ಕೃಷಿ ಯಾಂತ್ರೀಕರಣ, ಬೆಂಬಲ ಬೆಲೆಯ ಖರೀದಿ ಮೊದಲಾಗಿ  ರೈತರಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಂಡರೆ ವೃತ್ತಿಪರರು ಸಂಬಳ ಪಡೆಯುವುದಕ್ಕಿಂತ ಹೆಚ್ಚಾಗಿ,  ಕೃಷಿಯಿಂದ ಲಾಭ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ತಿಳಿಸಿದರು.

ತಾಲೂಕಿನ ಮೆಳೇಕೋಟೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ವತಿಯಿಂದ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ಎಕರೆ ಭೂಮಿ ಹೊಂದಿರುವ ರೈತರು ಸಮಗ್ರ ಕೃಷಿ ಪದ್ದತಿ ಅನುಸರಿಸಿದರೆ ಆರ್ಥಕವಾಗಿ ಸದೃಢರಾಗಬಹುದು. ಇದರೊಂದಿಗೆ ಪುಷ್ಪೋದ್ಯಮಕ್ಕೂ ಸಹ ಸರ್ಕಾರ ಸಹಾಯಧನ ನೀಡುತ್ತಿದ್ದು, ಹೆಚ್ಚಿನ ಜಮೀನು ಹೊಂದಿರುವವರು ಪುಷ್ಪೋದ್ಯಮ ಮಾಡಬಹುದು. ಹನಿ ನೀರಾವರಿ, ಕೃಷಿಯಲ್ಲಿ ಆಧುನಿಕ ಪದ್ದತಿಗಳನ್ನು ರೈತರು ಅಳವಡಿಸಿಕೊಳ್ಳಬೇಕಿದೆ ಎಂದ ಅವರು ತೆಂಗಿನ ನಾರಿಗೂ ಸಹ ಹೆಚ್ಚು ಬೇಡಿಕೆ ಇದ್ದು, ರೈತರು ಇದನ್ನು ನಾಶ ಪಡಿಸದೇ, ಕೊಳ್ಳುವವರಿಗೆ ನೀಡಬೇಕಿದೆ. ತೆಂಗಿನಿಂದ 150 ರೀತಿಯ ಉತ್ಪನ್ನಗಳನ್ನು ಮಾಡಲಾಗುತ್ತಿದೆ ಎಂದರು.

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಇಂದು ರೈತರ ಸ್ಥಿತಿಗತಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ರೈತರ ಆದಾಯ ದ್ವಿಗುಣ ಎನ್ನುವುದು ಬರೀ ಮಾತಿಗೆ ಸೀಮಿತವಾಗಿದೆ. ಕೃಷಿಯನ್ನು ಬಹುರಾಷ್ಟ್ರೀಯ ಕಂಪನಿಗಳ ವಶಕ್ಕೆ ಒಪ್ಪಿಸುವ ಬದಲಾಗಿ ಸ್ಥಳೀಯವಾಗಿ ಸ್ವದೇಶಿ ಕಂಪನಿಗಳ ಮೂಲಕ ಐತರಿಗೆ ನೆರವಾಗಬೇಕಿದೆ. ಈ ದಿಸೆಯಲ್ಲಿ ಹಾಡೋನಹಳ್ಳಿ ಅರ್ಕಾವತಿ ರೈತ ಉತ್ಪಾದಕ ಕಂಪನಿ ರೈತರಿಗೆ ವಿವಿಧ ಸೌಲಭ್ಯಗಳನ್ನು ನೀಡುವಲ್ಲಿ ಕಾರ್ಯೋನ್ಮುಖವಾಗಿದೆ ಎಂದರು.

ಪ್ರಗತಿಪರ ಕೃಷಿಕ ಕೃಷ್ಣಮೂರ್ತಿ ಮಾತನಾಡಿ, ಆಧುನಿಕತೆ ಅಳವಡಿಸಿಕೊಂಡು ಕೃಷಿ ಪದ್ದತಿ ನಡೆಸಿದಲ್ಲಿ ಯಾವ ರೈತರಿಗೂ ನಷ್ಟ ಉಂಟಾಗುವುದಿಲ್ಲ. ಅದರಲ್ಲಿಯು ಸಮಗ್ರ ಕೃಷಿ ಪದ್ದತಿ ರೈತನಿಗೆ ವರದಾನವಾಗಿದೆ ಎಂದರು.

ಸಮಾರಂಭದಲ್ಲಿ  ಪ್ರಗತಿಪರ ರೈತರಿಗೆ ಕೃಷಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಹಿಂಗಾರು ಬೆಳೆ ಸಮೀಕ್ಷೆ ಕುರಿತ ಪೋಷ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಆಂಜನ ಗೌಡ, ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ.ಎಸ್ ಗೌರೀಶ್, ಉಪಾಧ್ಯಕ್ಷ ಮುನಿರಾಜು, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ವಿಭಾಗದ ಅಧಿಕಾರಿ ರೂಪ, ಮಧುರೆ ಹೋಬಳಿ ಕೃಷಿ ಅಧಿಕಾರಿ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಯ್ಯ, ಮುಖಂಡರಾದ ಜಯರಾಮಯ್ಯ, ರಾಜ್‍ಕುಮಾರ್, ಪ್ರಗತಿಪರ ರೈತ ಭಾಸ್ಕರ್ ಸೇರಿದಂತೆ ಮೆಳೇಕೋಟೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೃಷಿಕ ಸಮಾಜದ ಸದಸ್ಯರು, ರೈತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!