ಸರ್ಕಾರದ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಂಡರೆ ಕೃಷಿಯಿಂದ ಹೆಚ್ಚಿನ ಲಾಭ: ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು

ದೊಡ್ಡಬಳ್ಳಾಪುರ: ಕೃಷಿ ಯಾಂತ್ರೀಕರಣ, ಬೆಂಬಲ ಬೆಲೆಯ ಖರೀದಿ ಮೊದಲಾಗಿ  ರೈತರಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಂಡರೆ ವೃತ್ತಿಪರರು ಸಂಬಳ ಪಡೆಯುವುದಕ್ಕಿಂತ ಹೆಚ್ಚಾಗಿ,  ಕೃಷಿಯಿಂದ ಲಾಭ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ತಿಳಿಸಿದರು.

ತಾಲೂಕಿನ ಮೆಳೇಕೋಟೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ವತಿಯಿಂದ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ಎಕರೆ ಭೂಮಿ ಹೊಂದಿರುವ ರೈತರು ಸಮಗ್ರ ಕೃಷಿ ಪದ್ದತಿ ಅನುಸರಿಸಿದರೆ ಆರ್ಥಕವಾಗಿ ಸದೃಢರಾಗಬಹುದು. ಇದರೊಂದಿಗೆ ಪುಷ್ಪೋದ್ಯಮಕ್ಕೂ ಸಹ ಸರ್ಕಾರ ಸಹಾಯಧನ ನೀಡುತ್ತಿದ್ದು, ಹೆಚ್ಚಿನ ಜಮೀನು ಹೊಂದಿರುವವರು ಪುಷ್ಪೋದ್ಯಮ ಮಾಡಬಹುದು. ಹನಿ ನೀರಾವರಿ, ಕೃಷಿಯಲ್ಲಿ ಆಧುನಿಕ ಪದ್ದತಿಗಳನ್ನು ರೈತರು ಅಳವಡಿಸಿಕೊಳ್ಳಬೇಕಿದೆ ಎಂದ ಅವರು ತೆಂಗಿನ ನಾರಿಗೂ ಸಹ ಹೆಚ್ಚು ಬೇಡಿಕೆ ಇದ್ದು, ರೈತರು ಇದನ್ನು ನಾಶ ಪಡಿಸದೇ, ಕೊಳ್ಳುವವರಿಗೆ ನೀಡಬೇಕಿದೆ. ತೆಂಗಿನಿಂದ 150 ರೀತಿಯ ಉತ್ಪನ್ನಗಳನ್ನು ಮಾಡಲಾಗುತ್ತಿದೆ ಎಂದರು.

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಇಂದು ರೈತರ ಸ್ಥಿತಿಗತಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ರೈತರ ಆದಾಯ ದ್ವಿಗುಣ ಎನ್ನುವುದು ಬರೀ ಮಾತಿಗೆ ಸೀಮಿತವಾಗಿದೆ. ಕೃಷಿಯನ್ನು ಬಹುರಾಷ್ಟ್ರೀಯ ಕಂಪನಿಗಳ ವಶಕ್ಕೆ ಒಪ್ಪಿಸುವ ಬದಲಾಗಿ ಸ್ಥಳೀಯವಾಗಿ ಸ್ವದೇಶಿ ಕಂಪನಿಗಳ ಮೂಲಕ ಐತರಿಗೆ ನೆರವಾಗಬೇಕಿದೆ. ಈ ದಿಸೆಯಲ್ಲಿ ಹಾಡೋನಹಳ್ಳಿ ಅರ್ಕಾವತಿ ರೈತ ಉತ್ಪಾದಕ ಕಂಪನಿ ರೈತರಿಗೆ ವಿವಿಧ ಸೌಲಭ್ಯಗಳನ್ನು ನೀಡುವಲ್ಲಿ ಕಾರ್ಯೋನ್ಮುಖವಾಗಿದೆ ಎಂದರು.

ಪ್ರಗತಿಪರ ಕೃಷಿಕ ಕೃಷ್ಣಮೂರ್ತಿ ಮಾತನಾಡಿ, ಆಧುನಿಕತೆ ಅಳವಡಿಸಿಕೊಂಡು ಕೃಷಿ ಪದ್ದತಿ ನಡೆಸಿದಲ್ಲಿ ಯಾವ ರೈತರಿಗೂ ನಷ್ಟ ಉಂಟಾಗುವುದಿಲ್ಲ. ಅದರಲ್ಲಿಯು ಸಮಗ್ರ ಕೃಷಿ ಪದ್ದತಿ ರೈತನಿಗೆ ವರದಾನವಾಗಿದೆ ಎಂದರು.

ಸಮಾರಂಭದಲ್ಲಿ  ಪ್ರಗತಿಪರ ರೈತರಿಗೆ ಕೃಷಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಹಿಂಗಾರು ಬೆಳೆ ಸಮೀಕ್ಷೆ ಕುರಿತ ಪೋಷ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಆಂಜನ ಗೌಡ, ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ.ಎಸ್ ಗೌರೀಶ್, ಉಪಾಧ್ಯಕ್ಷ ಮುನಿರಾಜು, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ವಿಭಾಗದ ಅಧಿಕಾರಿ ರೂಪ, ಮಧುರೆ ಹೋಬಳಿ ಕೃಷಿ ಅಧಿಕಾರಿ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಯ್ಯ, ಮುಖಂಡರಾದ ಜಯರಾಮಯ್ಯ, ರಾಜ್‍ಕುಮಾರ್, ಪ್ರಗತಿಪರ ರೈತ ಭಾಸ್ಕರ್ ಸೇರಿದಂತೆ ಮೆಳೇಕೋಟೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೃಷಿಕ ಸಮಾಜದ ಸದಸ್ಯರು, ರೈತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ.. ಬಾಯಿ ಬಿಡದ ಬಿಜೆಪಿ ನಾಯಕರು: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ.. ಬಾಯಿ ಬಿಡದ ಬಿಜೆಪಿ ನಾಯಕರು: ಡಿಸಿಎಂ ಡಿ.ಕೆ.

"ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯನ್ನ 60 ರೂಪಾಯಿ ಏರಿಕೆ ಮಾಡಿದೆ. ಇದರ ಬಗ್ಗೆ ಒಬ್ಬನೇ ಒಬ್ಬ ಬಿಜೆಪಿ ನಾಯಕರು ಬಾಯಿ ಬಿಡುತ್ತಿಲ್ಲ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ

[ccc_my_favorite_select_button post_id="120046"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!