ಇ-ಶ್ರಮ್ ಯೋಜನೆಯ ಬಗ್ಗೆ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಇ-ಶ್ರಮ್ ಯೋಜನೆ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೊಂದಣಿಯಾಗುವ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ 14 ದಿವಸಗಳ ಕಾಲ ಈ ವಾಹನವು ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.

ಜಿಲ್ಲೆಯ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹೆಚ್ಚಾಗಿ ನೋಂದಾಯಿಸಿಕೊಂಡು ಗುರುತಿನ ಚೀಟಿಯನ್ನು ಪಡೆದುಕೊಳ್ಳುವ ಮೂಲಕ ಮಂಡಳಿಯಿಂದ ದೊರೆಯುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್), ಅಂತ್ಯ ಕ್ರಿಯೆ ವೆಚ್ಚ  ಹಾಗೂ ಅನುಗ್ರಹ ರಾಶಿ ಸಹಾಯ ಧನ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ ಸಹಾಯಧನ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ, ಮದುವೆ ಸಹಾಯಧನ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದರು.

ಅಲ್ಲದೇ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಇ-ಶ್ರಮ್ ಯೋಜನೆಯಡಿ ಇ.ಎಸ್.ಐ ಮತ್ತು ಪಿ.ಎಫ್ ಸದ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು  ಸಾಮಾನ್ಯ ಸೇವಾ ಕೇಂದ್ರಗಳಿಗೆ (ಸಿ.ಎಸ್‌.ಸಿ) ತೆರಳಿ ನೊಂದಾಯಿಸಿಕೊಳ್ಳಬಹುದು. ಅಥವಾ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸದರಿ ಯೋಜನೆಯಡಿ ನೋಂದಾಯಿಸಿ ಯೋಜನೆ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮೀ ರವರು ಮಾತನಾಡಿ, ಈ ಜಿಲ್ಲೆಯಲ್ಲಿ 43,032 ಕಟ್ಟಡ ಕಾರ್ಮಿಕರು ನೋಂದಣಿಯಾಗಿ ಗುರುತಿನ ಚೀಟಿಯನ್ನು ಪಡೆದುಕೊಂಡಿದ್ದಾರೆ. ಈ ಪೈಕಿ 11,342 ಫಲಾನುಭವಿಗಳು ವಿವಿಧ ಸೌಲಭ್ಯಗಳಡಿ ಮೊತ್ತವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಸುರಕ್ಷಾ ಭವನ, ಬೆಂಗಳೂರು ವತಿಯಿಂದ ಪಡೆದುಕೊಂಡಿರುತ್ತಾರೆ. ಈ ಪೈಕಿ ಶೈಕ್ಷಣಿಕ ಧನಸಹಾಯ 10,146 ಫಲಾನುಭವಿಗಳಿಗೆ ರೂ.8,75,56,243/-, ಅಂತ್ಯ ಸಂಸ್ಕಾರ 10 ಫಲಾನುಭವಿಗಳಿಗೆ ರೂ.40,000/-, ಹೆರಿಗೆ ಸಹಾಯಧನ 29 ಫಲಾನುಭವಿಗಳಿಗೆ ರೂ.7,75,000/-, ಪ್ರಮುಖ ವೈದ್ಯಕೀಯ ಧನಸಹಾಯ 63 ಫಲಾನುಭವಿಗಳಿಗೆ 32,16,858/-, ಮದುವೆ ಧನಸಹಾಯ 1,094 ಫಲಾನುಭವಿಗಳಿಗೆ 5,47,50,000/- ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೆಪ್ಟ್ ಮೂಲಕ ಜಮೆ ಮಾಡಲಾಗಿರುತ್ತದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಇ-ಶ್ರಮ್ ಯೋಜನೆಯಡಿ 66,740 ಅಸಂಘಟಿತ ಕಾರ್ಮಿಕರು ನೋಂದಣಿಯಾಗಿರುತ್ತಾರೆ. ಇನ್ನೂ ಹೆಚ್ಚಿನ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ನೊಂದಣಿ ಮಾಡಿಸಿ, ಆಯಾ ಸೌಲಭ್ಯಗಳಡಿ ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇ-ಶ್ರಮ್ ನೊಂದಣಿಯು ಉಚಿತವಾಗಿದ್ದು, ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಮತ್ತು ಇ-ಶ್ರಮ್ ಯೋಜನೆಯ ನೊಂದಣಿಗಾಗಿ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ಭೇಟಿ ಮಾಡುವುದು ಅಥವಾ ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೊಂದಣಿ ಮಾಡಿಕೊಳ್ಳಬಹುದು ಹಾಗೂ ನೊಂದಾಯಿತ ಕಾರ್ಮಿಕರು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದ್ದು, ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದ್ದು, ಈ ಎಲ್ಲಾ ಸೌಲಭ್ಯಗಳನ್ನು ಅರ್ಹ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವಂತೆ  ಮನವಿ  ಮಾಡಿದರು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ; ಜಿಎ-3, ನೆಲಮಹಡಿ. ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ಹಾಗೂ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರುಗಳ ಕಛೇರಿ ಮತ್ತು ಕಾರ್ಮಿಕ ಸಹಾಯವಾಣಿ-155214, ಇ-ಶ್ರಮ್ ಸಹಾಯವಾಣಿ-14434 ಅನ್ನು ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಎಂ.ಮಂಜುಳ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!