ದೊಡ್ಡಬಳ್ಳಾಪುರದಲ್ಲಿ ಮೇಲ್ ಮರವತ್ತೂರು ಯಾತ್ರಾತ್ರಿಗಳಿಗೆ ಉಚಿತ ಬಸ್ ವ್ಯವಸ್ಥೆ

ದೊಡ್ಡಬಳ್ಳಾಪುರ: ತಮಿಳುನಾಡಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮೇಲ್ ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳುವ ಮಾಲಾಧಾರಿಗಳ ಯಾತ್ರೆಗೆ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಹಾಗೂ ಬಿಜಿಪಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಾಯೋಜಿಸಿರುವ ಉಚಿತ ಬಸ್‍ಗಳ ಸಂಚಾರಕ್ಕೆ ನಗರದ ಹೊರವಲಯದ ಅರ್ಕಾವತಿ ಸಮೀಪದ ಬಳಿ ಚಾಲನೆ ನೀಡಿ, ಶುಭ ಹಾರೈಸಿ ಕಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಧೀರಜ್ ಮುನಿರಾಜು, ವ್ರತಾಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅಯ್ಯಪ್ಪ ಸ್ವಾಮಿ ಮಾಲಾಧಾರಣೆ ಹಾಗೂ ಓಂ ಶಕ್ತಿ ಮಾಲಾಧಾರಣೆಗಳು ಈ ಸಮಯದಲ್ಲಿ ಸಾಮಾನ್ಯವಾಗಿದ್ದು, ಕೆಲವು ವ್ರತಧಾರಿಗಳಿಗೆ, ಖರ್ಚು ನಿಭಾಯಿಸಲು ಸಹ ಕಷ್ಟವಾಗುವ ಸಂದರ್ಭಗಳಿವೆ. ವ್ರತಧಾರಿಗಳಿಗೆ ಅನುಕೂಲವಾಗುವ ಹಾಗೂ ಲೋಕಕಲ್ಯಾಣದ ದೃಷ್ಟಿಯಿಂದ ಇಂತಹ ವೇಳೆಯಲ್ಲಿ ಇಂದು 22 ಬಸ್‍ಗಳನ್ನು ಹಾಗೂ ಕಳೆದ 15 ದಿನಗಳಿಂದ 16 ಬಸ್‍ಗಳನ್ನು ಉಚಿತವಾಗಿ ಯಾತ್ರೆಗೆ ಕಳುಹಿಸಿದ್ದೇವೆ. 2022 ಜನವರಿ 15 ವರೆಗೆ ಯಾತ್ರೆಗೆ ತೆರಳು ಮಾಲಾಧಾರಿಗಳಿಗೆ 80 ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಮುಂಗಡವಾಗಿ ಬುಕ್ ಮಾಡಲಾಗಿದೆ. 

ತಾಲೂಕಿನ ಓಂ ಶಕ್ತಿ ಮಾಲಾಧಾರಿಗಳ ಮೇಲ್ ಮರವತ್ತೂರು ದೇವಾಲಯಕ್ಕೆ ತೆರಳುವ ಎಲ್ಲಾ ಓಂ ಶಕ್ತಿ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ನಿಸ್ವಾರ್ಥವಾಗಿ ತಾಲೂಕಿನ ಬಹುತೇಕ ಮಧ್ಯಮ ಮತ್ತು ಬಡ ವರ್ಗದ ಭಕ್ತಾಧಿಗಳಿಗೆ ಧಾರ್ಮಿಕ ಭಾವನೆಗಳಿಗೆ ಪೂರಕವಾಗಿ ನಮ್ಮ ಸಹಾಯ ಹಸ್ತವನ್ನು ನೀಡುತ್ತಿದ್ದೇವೆ ಎಂದರು. 

ಮಾಲಾಧಾರಿಗಳಿಗೆ ಅರಿಶಿಣ ಕುಂಕುಮ: ಇದೇ ಸಂದರ್ಭದಲ್ಲಿ ವೇಲ್ ಮಾವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿದ ನೂರಾರು ಮಂದಿ ಮಾಲಾಧಾರಿಗಳಿಗೆ ಅನ್ನದಾನದ ವ್ಯವಸ್ಥೆಯೊಂದಿಗೆ ಅರಿಶಿಣ ಕುಂಕುಮ- ಬಳೆ ಕಣದ ಬಟ್ಟೆ ಹಾಗೂ ಕ್ಯಾಲೆಂಡರ್‍ಗಳನ್ನು ನೀಡಿ ಯಾತ್ರೆಗೆ ಶುಭಕೋರಲಾಯಿತು.

ಯಾತ್ರೆಗೆ ಹೊರಟ ಬಸ್‍ಗಳ ಚಾಲನೆ ಕಾರ್ಯಕ್ರಮದಲ್ಲಿ ಶ್ರೀಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪಿ.ಮುನಿರಾಜು, ರಾಜಶ್ರೀ ಕಂಫರ್ಟ್ ಮಾಲೀಕ ಪದ್ಮರಾಜ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎನ್.ಕೆ.ರಮೇಶ್, ನಗರಸಭಾ ಸದಸ್ಯರಾದ ಎಸ್.ಪದ್ಮನಾಭ್, ಬಂತಿ ವೆಂಕಟೇಶ್,  ಹಂಸಪ್ರಿಯ, ಭಾಸ್ಕರ್, ಲಕ್ಷ್ಮೀಪತಿ, ಸುಮಿತ್ರ ಆನಂದ್, ನಾಗರತ್ನ ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ವಿಶ್ವಾಸ್‍ಗೌಡ, ಕೋಳೂರು ನಾಗರಾಜು, ಡಿ.ಪಿ.ಲೋಕೇಶ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಓಂ ಶಕ್ತಿ ಮಾಲಾಧಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!