ಕೋವಿಡ್‍ನಿಂದ ಮೃತರಾದ ರಾಜ್ಯದ 36 ಸಾವಿರ ಕುಟುಂಬಗಳಿಗೆ ತಲಾ ರೂ. ಒಂದು ಲಕ್ಷ ಪರಿಹಾರ: ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ಕೋವಿಡ್‍ನಿಂದ ರಾಜ್ಯ ಸೇರಿದಂತೆ ಇಡಿ ಜಗತ್ತು ಆರ್ಥಿಕ ಕುಸಿತ ಕಂಡು ಸಂಕಷ್ಟದಲ್ಲಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೋವಿಡ್‍ನಿಂದ ಮೃತಪಟ್ಟ ಕುಟುಂಬಕ್ಕೆ ರೂ.50 ಸಾವಿರ ಹಾಗೂ ರಾಜ್ಯ ಸರ್ಕಾರ ತಲಾ ರೂ. ಒಂದು ಲಕ್ಷ ಪರಿಹಾರ ನೀಡುವ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು.

ರಾಣೆಬೆನ್ನೂರು ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ರಾಣೇಬೆನ್ನೂರ ಮತ್ತು ಬ್ಯಾಡಗಿ ತಾಲೂಕಿನ ಕೋವಿಡ್‍ನಿಂದ ಮೃತರಾದವರ ಕುಟುಂಬಗಳಿಗೆ ಪರಿಹಾರ ಚೆಕ್ ನೀಡುವ  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ ಮಾತನಾಡಿದ ಅವರು,

ಡಿಸೆಂಬರ್ 2019ರಿಂದ ಆರಂಭವಾದ ಕೋವಿಡ್ ಇನ್ನೂ ಮುಗಿದಲ್ಲ. ಇನ್ನು ಮುಂದುವರೆದಿದೆ. ಸಂಕಷ್ಟ ಪರಿಸ್ಥಿತಿಯಲ್ಲಿಯೂ ಸಹ  ಪ್ರಥಮವಾಗಿ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ.  ರಾಜ್ಯಾದ್ಯಂತ ಪರಿಹಾರ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‍ನಿಂದ 36 ಸಾವಿರ ಜನ ಮೃತಪಟ್ಟಿದ್ದಾರೆ. ದೇಶದ ಯಾವ ರಾಜ್ಯದಲ್ಲೂ ಪರಿಹಾರ ನೀಡುತ್ತಿಲ್ಲ, ನಮ್ಮ ರಾಜ್ಯದಲ್ಲಿ ಮಾತ್ರ ನೀಡಲಾಗುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ರೈತರ ಪರವಾಗಿದ್ದು, ಆರ್ಥಿಕ ಸಂಕಷ್ಟದಲ್ಲೂ ನೀರಾವರಿ ಕಾಮಗಾರಿಗಳು ಸ್ಥಗಿತಗೊಳ್ಳದಂತೆ ನೋಡಿಕೊಂಡಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ರೂ.206 ಕೋಟಿ ಮಂಜೂರು ಮಾಡಲಾಗಿದೆ. ಅತಿವೃಷ್ಟಿ ಮನೆಹಾನಿಗೆ ರೂ.ಐದು ಲಕ್ಷ ನೀಡಲಾಗುತ್ತಿದೆ. ಅತಿವೃಷ್ಟಿ ಬೆಳೆಹಾನಿ ಪರಿಹಾರವನ್ನು ಕೇಂದ್ರದ ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಅದೇ ಪ್ರಮಾಣದಲ್ಲಿ ರಾಜ್ಯ ಸರ್ಕಾರದ ವತಿಯಿಂದಲೂ ಪರಿಹಾರದ ಸೇರಿ ದ್ವಿಗುಣ ಮೊತ್ತದ ಹಣ ನೀಡಲಾಗುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಪಿ.ಯು.ಸಿ.ನಂತರ ಉನ್ನತ ವ್ಯಾಸಂಗಕ್ಕೆ ರೂ.2500 ರಿಂದ  ರೂ.11 ಸಾವಿರವರೆಗೆ ಸ್ಕಾಲರಶಿಪ್ ನೀಡಲಾಗುತ್ತಿದೆ. ಅದೇ ರೀತಿ 8,9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತರ ಹೆಣ್ಣು ಮಕ್ಕಳಿಗೆ  ರೂ. ಮೂರು ಸಾವಿರ ಸ್ಕಾಲರ್‍ಶಿಪ್ ವಿತರಣೆ ತೀರ್ಮಾನಿಸಲಾಗಿದೆ ಎಂದರು.

ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಕ್ಯಾಬಿನೆಟ್‍ನಲ್ಲಿ ಐದು ಲಕ್ಷ ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ. 25ಕ್ಕಿಂತ ಹೆಚ್ಚಿಗೆ ಸದಸ್ಯರಿರುವ ಗ್ರಾಮ ಪಂಚಾಯತಿಗಳಿಗೆ 50 ಮನೆ, 15 ಕ್ಕಿಂತ ಹೆಚ್ಚಿನ ಸದಸ್ಯರಿಗೆ ಗ್ರಾಮ ಪಂಚಾಯತಿಗೆ 40 ಮನೆ ಹಾಗೂ 15 ಕ್ಕಿಂತ ಕಡಿಮೆ ಸದಸ್ಯರಿರುವ ಗ್ರಾಮ ಪಂಚಾಯತಿಗೆ 30 ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ. ರೈತರ ಪಂಪಸೆಟ್ ಹಾಗೂ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ ನೀರಾವರಿಗೆ  ಶೇ.90ರಷ್ಟು ಸಬ್ಸಿಡಿ ನೀಡಲು ಮಾನ್ಯಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಹಾಗೂ ಜನರ ಧ್ವನಿಯಾಯಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಆರ್.ಶಂಕರ ಮಾತನಾಡಿ, ಬೆಂಗಳೂರ ಮಾದರಿಯಲ್ಲಿ ರಾಣೇಬೆನ್ನೂರ ನಗರವನ್ನು ಅಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊಸ ಸರ್ಕಾರ ರಚನೆ ಮಾಡಲು ನಾನು ತ್ಯಾಗ ಮಾಡಿದ್ದೇನೆ. ನನ್ನ ಕನಸು ನನಸು ಮಾಡಲು ರಾಣೇಬೆನ್ನೂರಿಗೆ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಗಳಿಗೆ ಕೋರುತ್ತೇನೆ ಎಂದು ಹೇಳಿದರು.

ರಾಣೇಬೆನ್ನೂರ ಕ್ಷೇತ್ರದ ಶಾಸಕ ಅರುಣಕುಮಾರ ಗುತ್ತೂರ ಅವರು ಮಾತನಾಡಿ, ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಣೇಬೆನ್ನೂರ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಎಲ್ಲ ನೆರವು ನೀಡಿದೆ. ರೂ. 20 ಕೋಟಿ ವೆಚ್ಚದಲ್ಲಿ ಹಳೆಯ ರಾಷ್ಟ್ರೀಯ ಹೆದ್ದಾರಿ ಸುಧಾರಣೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ. ರೂ. ಐದು ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ, ದ್ವಿಭಾಜಕ ಮತ್ತು ಡಾಂಬೀಕರಣ, ಬೀದಿದೀಪ ಅಳವಡಿಕೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ರೂ. 206 ಕೋಟಿ ವೆಚ್ಚದಲ್ಲಿ  ಮೆಡ್ಲೇರಿ ಹಾಗೂ ಹೊಳೆಆನ್ವೇರಿ ಕೆರೆ ತುಂಬಿಸುವ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆ ಅರಿತು 600 ಎಲ್.ಪಿ.ಎಂ. ಮೆಡಿಕಲ್ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್‍ನ್ನು ಗ್ರಾಸಿಂ ನೆರವಿನಿಂದ ನಿರ್ಮಾಣ ಮಾಡಲಾಗಿದೆ. ಹಾಗೂ ಸರ್ಕಾರದ ವತಿಯಿಂದ ಮೆಡಿಕಲ್ ಆಕ್ಸಿಜನ್ ಘಟಕವನ್ನು ಸ್ಥಾಪಿಸಲಾಗಿದೆ. ಇದನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ. ಬರುವ ದಿನಗಳಲ್ಲಿ ರಾಣೇಬೆನ್ನೂರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಸಮಾರಂಭದಲ್ಲಿ ಬ್ಯಾಡಗಿ ಮತ್ತು ರಾಣೇಬೆನ್ನೂರ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತರಾದ ಕುಟುಂಬಗಳಿಗೆ ತಲಾ ರೂ. ಒಂದು ಲಕ್ಷ ಪರಿಹಾರ ವಿತರಿಸಲಾಯಿತು. 

ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಮಾತನಾಡಿ, ಬ್ಯಾಡಗಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನಿಗಿಸಲು ರೂ.110 ಕೋಟಿ ವೆಚ್ಚದ ಯೋಜನೆ ಮಂಜೂರ ಮಾಡಲಾಗಿದೆ. ಆಣೂರು, ಜೋಯಿಸರಹಳ್ಳಿ, ಕಬ್ಬೂರ ಹಾಗೂ ದೇವಗಿರಿ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಸಮಾರಂಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ನಗರಸಭೆ ಅಧ್ಯಕ್ಷೆ  ರೂಪಾ ಚಿನ್ನಿಕಟ್ಟಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]