ದೊಡ್ಡಬಳ್ಳಾಪುರ ನೂತನ ತಹಶೀಲ್ದಾರ್ ಆಗಿ ಮೋಹನ್ ಕುಮಾರಿ ಅಧಿಕಾರ ಸ್ವೀಕಾರ: ತಹಶೀಲ್ದಾರ್ ಶಿವರಾಜ್ ಸೇವೆ ಸ್ಮರಣೀಯವೆಂದ ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯದ ಧರ್ಮದರ್ಶಿ

ದೊಡ್ಡಬಳ್ಳಾಪುರ: ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಎಸ್.ಶಿವರಾಜ್ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನಂಜನಗೂಡು ತಹಶೀಲ್ದಾರ್ ಆಗಿದ್ದ ಮೋಹನ್ ಕುಮಾರಿ ಅವರು ಇಂದು ಅಧಿಕಾರ ವಹಿಸಿಕೊಂಡರು.

ಈ ವೇಳೆ ಕಂದಾಯ ಇಲಾಖೆ ಸಿಬ್ಬಂದಿ ನೂತನ ತಹಶೀಲ್ದಾರ್ ಮೋಹನ್ ಕುಮಾರಿ ಅವರನ್ನು ಅಭಿನಂದಿಸಿದರು.

ತಹಶೀಲ್ದಾರ್ ಶಿವರಾಜ್ ಸೇವೆ ಸ್ಮರಣೀಯ: ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವರಾಜ್ ಅವರು ತಮ್ಮ ಸೌಮ್ಯ ಸ್ವಭಾವದಿಂದ ತಾಲೂಕಿನಲ್ಲಿ ಜನಮನ್ನಣೆ ಪಾತ್ರರಾಗಿ ಅವರ ಎರಡು ವರ್ಷದ ಅಧಿಕಾರಾವಧಿ ತಾಲೂಕಿನ ಜನತೆಗೆ ಸ್ಮರಣೀಯವೆಂದು ಮಧುರೆ ಶ್ರೀ ಶನಿ ಮಹಾತ್ಮ ದೇವಾಲಯದ ಧರ್ಮದರ್ಶಿ ಪ್ರಕಾಶ್ ತಿಳಿಸಿದ್ದಾರೆ.

ಶಿವರಾಜ್ ಅವರ ವರ್ಗಾವಣೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ ಆದರೆ ಅಧಿಕಾರಿಗಳು ತಮ್ಮ ಅವಧಿಯಲ್ಲಿ ಮಾಡಿದ ಜನಪರ ಕಾರ್ಯ ಜನಮಾನಸದಲ್ಲಿ ನೆನಪಾಗಿ ಉಳಿಯುತ್ತದೆ ಎನ್ನುವುದಕ್ಕೆ ತಹಶೀಲ್ದಾರ್ ಅವರ ಕಾರ್ಯವೈಕರಿ ಸಾಕ್ಷಿಯಾಗಿದೆ.

ಕೋವಿಡ್ -19 ಸೋಂಕಿನ ಮೊದಲ ಅಲೆ, ಎರಡನೇ ಅಲೆಯ ಸಂಕಷ್ಟದಲ್ಲಿ ತಾಲೂಕಿಗೆ ಅವರು ಸಲ್ಲಿಸಿರುವ ಸೇವೆ ಅಪಾರವಾಗಿತ್ತು.

ಮೊದಲ ಲಾಕ್ ಡೌನ್‌ ನಿಂದ ಆರಂಭವಾಗಿ ಹೊರ ಜಿಲ್ಲೆಗಳ ಕಾರ್ಮಿಕರಿಗೆ ವಸತಿ. ಕೋವಿಡ್ ನಿಯಂತ್ರಣಕ್ಕೆ ಕ್ರಮ, ಎರಡನೆ ಅಲೆಯ ವೇಳೆ ಉಂಟಾದ ತೊಂದರೆಗಳ ವೇಳೆ ಆಕ್ಸಿಜನ್ ಪೂರೈಕೆ, ಕಾರ್ಖಾನೆಗಳ ನೆರವಿನೊಂದಿಗೆ  ಅಕ್ಸಿಜನ್ ಕಾನ್ಸಿಟ್ರೆಟರ್ ಪೂರೈಕೆ, ಸೋಂಕಿತರ ಚಿಕಿತ್ಸೆಗೆ ವಸತಿ ನಿಲಯಗಳ ವ್ಯವಸ್ಥೆ, ಮೇಕ್ ಶಿಫ್ಟ್ ಸ್ಥಾಪನೆ, ಆಕ್ಸಿಜನ್ ಘಟಕ ನಿರ್ಮಾಣ, ಲಸಿಕೆ ಅಭಾವದ ವೇಳೆ ಲಸಿಕೆ ಪೂರೈಕೆಗೆ ಕ್ರಮ ಸೇರಿದಂತೆ ಕೋವಿಡ್ ವಾರಿಯರ್ ಆಗಿ ಶಿವರಾಜ್ ಅವರು ಬಹಳಷ್ಟು ಶ್ರಮಿಸಿದ್ದರು. ಅಲ್ಲದೆ ಕಂದಾಯ ಇಲಾಖೆಯಲ್ಲಿ ಅಕ್ರಮ ಒತ್ತುವರಿಗೆ ತೆರವುಗೊಳಿಸುವ ಕಾರ್ಯ  ಮಾಡಿದ್ದರು ಎಂದು ಪ್ರಕಾಶ್ ಅವರು ಸ್ಮರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ಮುಂದೆ ತಿರುವು ಪಡೆಯುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ (Accident) ಕಂಟೈನರ್‌ ಮುಗುಚಿ ಬಿದ್ದು, ಚಾಲಕರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ

[ccc_my_favorite_select_button post_id="119069"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!