ರೈತ ಸಂಘದ ಧರಣಿಗೆ ಎರಡನೇ ದಿನ: ಬೆಂಬಲಿಸಿದ ಶಾಸಕ, ಎಪಿಎಂಸಿ ಅಧ್ಯಕ್ಷ…!

ದೊಡ್ಡಬಳ್ಳಾಪುರ: ಖರೀದಿ ಮಿತಿ ಸಡಿಲಗೊಳಿಸಿ ಒಬ್ಬ ರೈತರಿಂದ ಕನಿಷ್ಠ 50 ಕ್ವಿಂಟಾಲ್ವರೆಗೂ ರಾಗಿ ಖರೀದಿ ಮಾಡುವ ಆದೇಶ ಹೊರಬಿಳುವವರೆಗೂ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ನಗರದ ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರದ ಮುಂದೆ ನಡೆಸುತ್ತಿರುವ ಧರಣಿ ಎರಡನೇ ದಿನವು ಮುಂದುವರೆದಿದೆ.

ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ವೆಂಕಟರಮಣಯ್ಯ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ರೈತರು ಹೆಚ್ಚು ಜಮೀನು ಹೊಂದುವುದು, ರಾಗಿ ಬೆಳೆಯುವುದೇ ತಪ್ಪು ಎನ್ನುವ ರೀತಿಯಲ್ಲಿ ನಿಯಮ ಮಾಡಿರುವುದು ಅವೈಜ್ಞಾನಿಕವಾಗಿದೆ. ಯಂತ್ರಗಳ ಬಳಕೆ ನಂತರ ರಾಗಿ ಬೆಳೆಯುವ ಪ್ರದೇಶ ವಿಸ್ತಾರವಾಗಿದೆ. 2020-21ನೇ ಸಾಲಿನಲ್ಲಿ ಇದ್ದ ನಿಯಮವೇ ಈ ಬಾರಿಯು ಜಾರಿಗೊಳಿಸುವ ಮೂಲಕ ರಾಗಿ ಖರೀದಿ ಮಿತಿಯನ್ನು ಸಡಿಲಗೊಳಿಸಬೇಕು. ರೈತರ ಬೇಡಿಕೆ ನ್ಯಾಯೋಚಿತವಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸಚಿವರು ಹಾಗೂ ಕೃಷಿ ಸಚಿವರೊಂದಿಗೆ ಚರ್ಚಿಸಲು ರೈತರ ನಿಯೋಗವನ್ನು ಒಂದೆರಡು ದಿನಗಳಲ್ಲಿ ಕರೆದೊಯ್ಯಲಾಗುವುದು ಎಂದು ಹೇಳಿದರು.

ಧರಣಿ ಸ್ಥಣಕ್ಕೆ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ರೈತರ ಬೇಡಿಕೆ ಕುರಿತಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಖರೀದಿ ಮಿತಿ ಸಡಿಲಗೊಳುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೂ ಸಣ್ಣ ಹಿಡುವಳಿ ರೈತರಿಂದ ರಾಗಿ ಖರೀದಿ ನೋಂದಣಿ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ರಾಜ್ಯ ರೈತ ಸಂಘದ ಮುಖಂಡರು ಮಾತನಾಡಿ, ರೈತರನ್ನು ವಿಭಾಗ ಮಾಡುವ ಮೂಲಕ ಹೋರಾಟವನ್ನು ದಾರಿತಪ್ಪಿಸಲು ಬಿಡುವುದಿಲ್ಲ. ರಾಗಿ ಬೆಳೆಯುವ ರೈತರೆಲ್ಲರೂ ಒಂದೆ. ಖರೀದಿ ಮಿತಿಯನ್ನು ಸಡಿಲಗೊಳಿಸಿ ರೈತರಿಂದ ಹೆಚ್ಚುವರಿಯಾಗಿ ರಾಗಿ ಖರೀದಿಸುವ ಲಿಖಿತ ಭರವಸೆ ದೊರೆಯದ ಹೊರತು ಧರಣಿಯನ್ನು ಹಿಂತೆಗೆದುಕೊಳ್ಳುವುದಿಲ್ಲ, ನೋಂದಣಿಗೂ ಅವಕಾಶ ನೀಡುವುದಿಲ್ಲ. ಹೋರಾಟವನ್ನು ಮುಂದುರೆಸುತ್ತವೇ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!