ಖರ್ಗೆಯವರಿಂದ ಸುಳ್ಳು ಹೇಳಿಸಿದ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ವೇಳೆ ಭದ್ರತಾ ವಿಫಲತೆ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಸುಳ್ಳು ಹೇಳಿದ್ದು, ಕಾಂಗ್ರೆಸ್‍ನವರು ಅವರಿಂದ ಸುಳ್ಳು ಹೇಳಿಸಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಸುಳ್ಳನ್ನು ಹೇಳುವವರಿಗೆ ಮಾತ್ರ ಅವಕಾಶ ಇದೆ. ಆ ಪಕ್ಷದಲ್ಲಿದ್ದ ನಾನು ಸತ್ಯ ಹೇಳಲು ಬಿಜೆಪಿಗೆ ಬಂದಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಯಾವತ್ತೂ ಸುಳ್ಳು ಹೇಳಿದ್ದನ್ನು ನಾನು ನೋಡಿರಲಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ಕಾಂಗ್ರೆಸ್‍ನವರು ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದರು.

ದಲಿತ ವಿಚಾರವನ್ನು ತಂದಿದ್ದಾರೆ. ಪಂಜಾಬ್‍ನ ದಲಿತ ಸಿಎಂ ಅವರನ್ನು ಪದಚ್ಯುತಗೊಳಿಸಲು ಪ್ರಧಾನಿ ಹೀಗೆ ಮಾಡಿದ್ದಾರೆ ಎಂದಿದ್ದಾರೆ. ಇದು ಆಕ್ಷೇಪಾರ್ಹ. ಖಾಲಿಸ್ತಾನ ಮತ್ತು ಪಾಕಿಸ್ತಾನದ ಜೊತೆ ಪಂಜಾಬ್ ಸರಕಾರ ಕೈಜೋಡಿಸಿದೆ ಎಂದು ಆರೋಪಿಸಿದರು.

ಈ ಘಟನೆಯನ್ನು ದೇಶದ ಎಲ್ಲ ಪ್ರಜೆಗಳು ಖಂಡಿಸಬೇಕು. ಭದ್ರತಾ ವಿಫಲತೆಯು ಕ್ರಾಸ್ ಬಾರ್ಡರ್ ಟೆರರಿಸಂನ ಒಂದು ಭಾಗ. ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪರ ಮಾತನಾಡುತ್ತಾರೆ. ಪಾಕ್ ಜೊತೆ ಸೇರಿ ಈ ಕೃತ್ಯವನ್ನು ಪಂಜಾಬ್ ಸರಕಾರ ಮತ್ತು ಕಾಂಗ್ರೆಸ್‍ನವರು ಮಾಡಿದ್ದಾರೆ. ಇದರ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂದು ಆರೋಪಿಸಿದರು.

ಆರೋಪ ಮಾಡಲು ನಿಮಗೆ ಮನಸ್ಸಾದರೂ ಹೇಗೆ ಬಂತು, ಪ್ರಧಾನಿ ಬರುವ ಮೊದಲು ಸರ್ವೇ ಮಾಡಿರ್ತಾರೆ. ಪಂಜಾಬ್ ಸಿಎಂ ರೈತರ ಮುಂದೆ ನಿಂತು ಮಾತನಾಡುವುದು ಅವಶ್ಯಕತೆ ಇತ್ತೇ. ಪ್ರಧಾನಿ ಬರುವಾಗ ಹೋರಾಟ, ಪ್ರತಿಭಟನೆಗೆ ಅವಕಾಶವಿಲ್ಲ. ಪಂಜಾಬ್‍ನಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಸಿಎಂ, ಮುಖ್ಯ ಕಾರ್ಯದರ್ಶಿ ಬರದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ದಲಿತರೊಬ್ಬರನ್ನು ಸಿಎಂ ಮಾಡಿ ಅವರಿಗೆ ಅಪವಾದ ಬರಲು ಈ ರೀತಿ ಕಾಂಗ್ರೆಸ್ ಮಾಡಿಸಿತೇ, ಕೇವಲ 3 ತಿಂಗಳಿಗೆ ಅಲ್ಲಿ ದಲಿತ ಸಿಎಂ ಮಾಡಿದ್ದೇಕೆ. ಕರ್ನಾಟಕದಲ್ಲಿ ಆರು ದಶಕದಿಂದ ದಲಿತ ಸಿಎಂ ಬೇಡಿಕೆ ಇದ್ದರೂ ಮಾಡಿಲ್ಲವೇಕೆ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಮಳೆ ಬಿದ್ದರೆ ಕಾಂಗ್ರೆಸ್ ಮುಖಂಡರು ಪಂಜಾಬ್‍ನಲ್ಲಿ ಕೊಡೆ ಹಿಡಿಯುತ್ತಾರೆ. ಇಂಥ ಭದ್ರತಾ ವಿಫಲತೆ ಯಾವತ್ತೂ ನಡೆದಿಲ್ಲ. ಕಾಂಗ್ರೆಸ್ ಇದರ ಬಗ್ಗೆ ಖುಷಿ ಪಡುತ್ತಿದೆ. ನಿಮಗೆ ಮೋದಿಯವರ ಬಗ್ಗೆ ದ್ವೇಷ ಇರಬಹುದು. ಈ ರೀತಿ ದ್ವೇಷ ಪಡುವುದು ಸರಿಯೇ? ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ

2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

[ccc_my_favorite_select_button post_id="113885"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!