ದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಅವರೆಕಾಯಿ ಸೊಗಡು ಆರಂಭ / ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು / ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ

ದೊಡ್ಡಬಳ್ಳಾಪುರ: ಡಿಸೆಂಬರ್‌, ಜನವರಿ ಬಂದರೆ ಪ್ರತಿ ಮನೆಯಲ್ಲಿಯೂ ಅವರೆಕಾಯಿ ಘಮಲು ಇದ್ದೇ ಇರುತ್ತದೆ. ಚಳಿಗಾಲದಲ್ಲಿ ಅವರೆಕಾಳಿನ ಉಪ್ಪೆಸರು, ಇತಕು ಬೇಳೆ, ಮುದ್ದೆ ಹೆಸರು ಕೇಳಿದರೆ ಎಂತಹವರ ಬಾಯಲ್ಲೂನೀರು ಬರುತ್ತದೆ. ಅದರಲ್ಲೂ ಸೊಗಡು ಅವರೆಕಾಳಿನಸಾರು, ಮುದ್ದೆ ರುಚಿಯ ಮುಂದೆ ಬೇರೆ ಊಟವಿಲ್ಲ. ತಾಲೂಕಿನ ರೈತರು ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು ಈಗ ತಾಲೂಕಿನಲ್ಲಿ ಹರಡಿಕೊಂಡಿದ್ದು, ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ.

ತಾಲೂಕಿನ 5 ಹೋಬಳಿಯಲ್ಲಿ ರಾಗಿ, ಮೆಕ್ಕೆ ಜೋಳ ಹೆಚ್ಚಾಗಿ ಬೆಳೆದಿದ್ದು, ಅದರ ಮಧ್ಯದಲ್ಲಿ ಕೆಲ ರೈತರು ಅವರೆ ಬೆಳೆಯನ್ನು ಹಾಕಿದ್ದಾರೆ. ಈ ಬಾರಿ ಮಳೆ ಹೆಚ್ಚಳ, ನಂತರ ಮಾಗಿಯ ಚಳಿ ಹೆಚ್ಚಿದ್ದು, ಬೆಳಗ್ಗೆ 9 ಗಂಟೆಯಾದರು ಮಂಜು ಬೀಳುತ್ತಲೇ ಇರುತ್ತದೆ. ಇದು ಅವರೆ ಬೆಳೆಗೆ ಹೇಳಿ ಮಾಡಿದಂತಹ ವಾತಾವರಣವಾಗಿದೆ.

ಇಳುವರಿ ಹೆಚ್ಚಳ: ಅವರೆ ಬಳ್ಳಿ ಹಾಗೂ ಅದರ ಕಾಯಿಯ ಮೇಲೆ ಬಿದ್ದಿರುವ ಮಂಜಿನ ಹನಿ ನೋಡುವುದೇ ಒಂದು ಸೊಬಗು, ಅವರೆಕಾಯಿ ಮುಟ್ಟಿದರೆ ಅದರ ಸೊಗಡು ಕೈಗೆ ಅಂಟುತ್ತಿದೆ. ಅಷ್ಟರಮಟ್ಟಿಗೆ ಈ ಬಾರಿ ಅವರೆಕಾಯಿ ಬೆಳೆದಿದ್ದು, ಇಳುವರಿಯೂ ಉತ್ತಮವಾಗಿದೆ.

ಬೇಡಿಕೆ ಹೆಚ್ಚು: ತಾಲೂಕಿನಲ್ಲಿ ಯಂತ್ರಗಳನ್ನು ಬಳಸಿ ಬೆಳೆ ಕಟಾವು ಮಾಡುವ ಪ್ರಕ್ರಿಯೆ ಹೆಚ್ಚಾಗಿರುವುದರಿಂದ ಅವರೆ ಬೆಳೆ ಬೆಳೆಯುವರ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಸ್ಥಳೀಯವಾಗಿ ಅಲ್ಲದೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ  ಹಾಗೂ ಆಂಧ್ರ ಪ್ರದೇಶದಿಂದ ಸೊಗಡು ಅವರೆಕಾಯಿ ತಾಲೂಕಿನ ಮಾರುಕಟ್ಟೆಗೆ ಬರುತ್ತದೆ. 

ಮಾರುಕಟ್ಟೆಯಲ್ಲಿ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿಅವರೆಕಾಯಿ ದೊರೆಯುತ್ತಿಲ್ಲ. ಒಂದು ಕೆಜಿ ಅವರ ಈಗ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಇಲ್ವಾ ಎಂದು ಗ್ರಾಹಕರು ಕೇಳಿದ್ರೆ 100 ರೂ. ಕೊಡಿ ಎರಡುವರೆ ಕೆಜಿ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ ವರ್ತಕರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!