ಇಂದಿನಿಂದ ಮೇಕೆದಾಟು ಪಾದಯಾತ್ರೆ ಆರಂಭ: 165 ಕಿ.ಮೀ. ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜು / ಕೋವಿಡ್ ಹೆಚ್ಚಳವಾದರೆ ಕಾಂಗ್ರೆಸ್ ತಲೆಗೆ ಕಟ್ಟಲು ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಕನಕಪುರ ಕೋಟೆಯಿಂದ ಬೆಂಗಳೂರಿನವರೆಗೂ ಕಾಲ್ನಡಿಗೆ ಜಾಥಾ ಸಾಗಲಿದೆ. 

ಇಂದಿನಿಂದ ಜನವರಿ 19ರವರೆಗೂ 11 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, 165ಕ್ಕೂ ಹೆಚ್ಚು ಕಿಲೋ ಮೀಟರ್ ದೂರ ಹೆಜ್ಜೆ ಹಾಕಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಂಡ ತಯಾರಾಗಿದೆ.

ದಿನ 1: 15 ಕಿ.ಮೀ. ಪಾದಯಾತ್ರೆ (ಮೇಕೆದಾಟು ಸಂಗಮದಿಂದ ದೊಡ್ಡ ಆಲದಹಳ್ಳಿ)

ದಿನ 2 ಜನವರಿ 10: 16 ಕಿಲೋ ಮೀಟರ್ ಪಾದಯಾತ್ರೆ (ದೊಡ್ಡ ಆಲದಹಳ್ಳಿಯಿಂದ ಕನಕಪುರ)

ದಿನ 3 ಜನವರಿ 11: 14.5 ಕಿಲೋ ಮೀಟರ್ ಪಾದಯಾತ್ರೆ(ಕನಕಪುರದಿಂದ ಚಿಕ್ಕೇಹಳ್ಳಿ ಗ್ರಾಮ)

ದಿನ 4 ಜನವರಿ 12: 15 ಕಿಲೋ ಮೀಟರ್ ಪಾದಯಾತ್ರೆ (ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್)

ದಿನ 5 ಜನವರಿ 13: 13 ಕಿಲೋ ಮೀಟರ್ ಪಾದಯಾತ್ರೆ (ರಾಮನಗರ ಟೌನ್ನಿಂದ ಬಿಡದಿ ಟೌನ್)

ದಿನ 6 ಜನವರಿ 14: 16 ಕಿಲೋ ಮೀಟರ್ ಪಾದಯಾತ್ರೆ (ಬಿಡದಿ ಟೌನ್ನಿಂದ ಕೆಂಗೇರಿ ಪೊಲೀಸ್ ಸ್ಟೇಷನ್)

ದಿನ 7 ಜನವರಿ 15: 15.5 ಕಿಲೋ ಮೀಟರ್ ಪಾದಯಾತ್ರೆ (ಕೆಂಗೇರಿ ಪೊಲೀಸ್ ಸ್ಟೇಷನ್ನಿಂದ ಸಾರಕ್ಕಿ ಸಿಗ್ನಲ್)

ದಿನ 8 ಜನವರಿ 16: 16 ಕಿಲೋ ಮೀಟರ್ ಪಾದಯಾತ್ರೆ (ಸಾರಕ್ಕಿ ಸಿಗ್ನಲ್ನಿಂದ ಮಾರತ್ತಹಳ್ಳಿ ಜಂಕ್ಷನ್)

ದಿನ 9 ಜನವರಿ 17: 13.5 ಕಿಲೋ ಮೀಟರ್ ಪಾದಯಾತ್ರೆ (ಮಾರತ್ತಹಳ್ಳಿ ಜಂಕ್ಷನ್ನಿಂದ ಲಿಂಗರಾಜಿಪುರ ಜಂಕ್ಷನ್)

ದಿನ 10 ಜನವರಿ 18: 14 ಕಿಲೋ ಮೀಟರ್ ಪಾದಯಾತ್ರೆ (ಲಿಂಗರಾಜಿಪುರ ಜಂಕ್ಷನ್ನಿಂದ ಡಿಸಿಸಿ ಕಾಂಗ್ರೆಸ್ ಭವನ)

ದಿನ 11 ಜನವರಿ 19: 8 ಕಿಲೋ ಮೀಟರ್ ಪಾದಯಾತ್ರೆ (ಕಾಂಗ್ರೆಸ್ ಭವನದಿಂದ ನ್ಯಾಷನಲ್ ಕಾಲೇಜು, ಬಸವನಗುಡಿ) ಜನವರಿ 19ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿದೆ.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ವೀಕೆಂಡ್ನಲ್ಲಿ ರಾಜಕೀಯ, ಸಭೆ, ಸಮಾರಂಭಗಳಿಗೆಲ್ಲಾ ನಿಷೇಧವಿದೆ. ಈ ನಿಯಮದ ಮಧ್ಯೆಯೂ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಕೈ ನಾಯಕರನ್ನು ಅರೆಸ್ಟ್ ಮಡುವುದು ಬೇಡಾ ಎಂದು ಹಿರಿಯ ಸಚಿವರು ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕಾಂಗ್ರೆಸ್ ನಾಯಕರು ನಿಯಮ ಉಲ್ಲಂಘಿಸಿದರು ಅಂತಾ ಜನರ ಮುಂದೆ ತೋರಿಸಿ. ಕರೊನಾ ಸಮಸ್ಯೆ ಆದರೆ ಅವರೇ ಜವಾಬ್ದಾರಿಯಾಗುತ್ತಾರೆ. ಸರ್ಕಾರದಷ್ಟೇ ಅವರಿಗೂ ಜವಾಬ್ದಾರಿ‌ ಇದೆ. ಪಾದಯಾತ್ರೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿರಿಯ ಸಚಿವರು ಸಲಹೆ ನೀಡಿದ್ದಾರೆ. ಸಚಿವರ ಮಾತಿಗೆ ಸಿಎಂ ಬೊಮ್ಮಾಯಿ ಕೂಡ ಸಹಮತ ವ್ಯಕ್ತಪಡಿಸಿದ್ದು, 500 ಜನ ಸೇರಿದರು ಬಂಧಿಸದಂತೆ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!