ಇಂದಿನಿಂದ ಮೇಕೆದಾಟು ಪಾದಯಾತ್ರೆ ಆರಂಭ: 165 ಕಿ.ಮೀ. ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜು / ಕೋವಿಡ್ ಹೆಚ್ಚಳವಾದರೆ ಕಾಂಗ್ರೆಸ್ ತಲೆಗೆ ಕಟ್ಟಲು ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಕನಕಪುರ ಕೋಟೆಯಿಂದ ಬೆಂಗಳೂರಿನವರೆಗೂ ಕಾಲ್ನಡಿಗೆ ಜಾಥಾ ಸಾಗಲಿದೆ. 

ಇಂದಿನಿಂದ ಜನವರಿ 19ರವರೆಗೂ 11 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, 165ಕ್ಕೂ ಹೆಚ್ಚು ಕಿಲೋ ಮೀಟರ್ ದೂರ ಹೆಜ್ಜೆ ಹಾಕಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಂಡ ತಯಾರಾಗಿದೆ.

ದಿನ 1: 15 ಕಿ.ಮೀ. ಪಾದಯಾತ್ರೆ (ಮೇಕೆದಾಟು ಸಂಗಮದಿಂದ ದೊಡ್ಡ ಆಲದಹಳ್ಳಿ)

ದಿನ 2 ಜನವರಿ 10: 16 ಕಿಲೋ ಮೀಟರ್ ಪಾದಯಾತ್ರೆ (ದೊಡ್ಡ ಆಲದಹಳ್ಳಿಯಿಂದ ಕನಕಪುರ)

ದಿನ 3 ಜನವರಿ 11: 14.5 ಕಿಲೋ ಮೀಟರ್ ಪಾದಯಾತ್ರೆ(ಕನಕಪುರದಿಂದ ಚಿಕ್ಕೇಹಳ್ಳಿ ಗ್ರಾಮ)

ದಿನ 4 ಜನವರಿ 12: 15 ಕಿಲೋ ಮೀಟರ್ ಪಾದಯಾತ್ರೆ (ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್)

ದಿನ 5 ಜನವರಿ 13: 13 ಕಿಲೋ ಮೀಟರ್ ಪಾದಯಾತ್ರೆ (ರಾಮನಗರ ಟೌನ್ನಿಂದ ಬಿಡದಿ ಟೌನ್)

ದಿನ 6 ಜನವರಿ 14: 16 ಕಿಲೋ ಮೀಟರ್ ಪಾದಯಾತ್ರೆ (ಬಿಡದಿ ಟೌನ್ನಿಂದ ಕೆಂಗೇರಿ ಪೊಲೀಸ್ ಸ್ಟೇಷನ್)

ದಿನ 7 ಜನವರಿ 15: 15.5 ಕಿಲೋ ಮೀಟರ್ ಪಾದಯಾತ್ರೆ (ಕೆಂಗೇರಿ ಪೊಲೀಸ್ ಸ್ಟೇಷನ್ನಿಂದ ಸಾರಕ್ಕಿ ಸಿಗ್ನಲ್)

ದಿನ 8 ಜನವರಿ 16: 16 ಕಿಲೋ ಮೀಟರ್ ಪಾದಯಾತ್ರೆ (ಸಾರಕ್ಕಿ ಸಿಗ್ನಲ್ನಿಂದ ಮಾರತ್ತಹಳ್ಳಿ ಜಂಕ್ಷನ್)

ದಿನ 9 ಜನವರಿ 17: 13.5 ಕಿಲೋ ಮೀಟರ್ ಪಾದಯಾತ್ರೆ (ಮಾರತ್ತಹಳ್ಳಿ ಜಂಕ್ಷನ್ನಿಂದ ಲಿಂಗರಾಜಿಪುರ ಜಂಕ್ಷನ್)

ದಿನ 10 ಜನವರಿ 18: 14 ಕಿಲೋ ಮೀಟರ್ ಪಾದಯಾತ್ರೆ (ಲಿಂಗರಾಜಿಪುರ ಜಂಕ್ಷನ್ನಿಂದ ಡಿಸಿಸಿ ಕಾಂಗ್ರೆಸ್ ಭವನ)

ದಿನ 11 ಜನವರಿ 19: 8 ಕಿಲೋ ಮೀಟರ್ ಪಾದಯಾತ್ರೆ (ಕಾಂಗ್ರೆಸ್ ಭವನದಿಂದ ನ್ಯಾಷನಲ್ ಕಾಲೇಜು, ಬಸವನಗುಡಿ) ಜನವರಿ 19ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿದೆ.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ವೀಕೆಂಡ್ನಲ್ಲಿ ರಾಜಕೀಯ, ಸಭೆ, ಸಮಾರಂಭಗಳಿಗೆಲ್ಲಾ ನಿಷೇಧವಿದೆ. ಈ ನಿಯಮದ ಮಧ್ಯೆಯೂ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಕೈ ನಾಯಕರನ್ನು ಅರೆಸ್ಟ್ ಮಡುವುದು ಬೇಡಾ ಎಂದು ಹಿರಿಯ ಸಚಿವರು ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕಾಂಗ್ರೆಸ್ ನಾಯಕರು ನಿಯಮ ಉಲ್ಲಂಘಿಸಿದರು ಅಂತಾ ಜನರ ಮುಂದೆ ತೋರಿಸಿ. ಕರೊನಾ ಸಮಸ್ಯೆ ಆದರೆ ಅವರೇ ಜವಾಬ್ದಾರಿಯಾಗುತ್ತಾರೆ. ಸರ್ಕಾರದಷ್ಟೇ ಅವರಿಗೂ ಜವಾಬ್ದಾರಿ‌ ಇದೆ. ಪಾದಯಾತ್ರೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿರಿಯ ಸಚಿವರು ಸಲಹೆ ನೀಡಿದ್ದಾರೆ. ಸಚಿವರ ಮಾತಿಗೆ ಸಿಎಂ ಬೊಮ್ಮಾಯಿ ಕೂಡ ಸಹಮತ ವ್ಯಕ್ತಪಡಿಸಿದ್ದು, 500 ಜನ ಸೇರಿದರು ಬಂಧಿಸದಂತೆ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!