ಇಂದಿನಿಂದ ಮೇಕೆದಾಟು ಪಾದಯಾತ್ರೆ ಆರಂಭ: 165 ಕಿ.ಮೀ. ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜು / ಕೋವಿಡ್ ಹೆಚ್ಚಳವಾದರೆ ಕಾಂಗ್ರೆಸ್ ತಲೆಗೆ ಕಟ್ಟಲು ರಾಜ್ಯ ಸರ್ಕಾರ ಪ್ಲಾನ್

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಕನಕಪುರ ಕೋಟೆಯಿಂದ ಬೆಂಗಳೂರಿನವರೆಗೂ ಕಾಲ್ನಡಿಗೆ ಜಾಥಾ ಸಾಗಲಿದೆ. 

ಇಂದಿನಿಂದ ಜನವರಿ 19ರವರೆಗೂ 11 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, 165ಕ್ಕೂ ಹೆಚ್ಚು ಕಿಲೋ ಮೀಟರ್ ದೂರ ಹೆಜ್ಜೆ ಹಾಕಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಂಡ ತಯಾರಾಗಿದೆ.

ದಿನ 1: 15 ಕಿ.ಮೀ. ಪಾದಯಾತ್ರೆ (ಮೇಕೆದಾಟು ಸಂಗಮದಿಂದ ದೊಡ್ಡ ಆಲದಹಳ್ಳಿ)

ದಿನ 2 ಜನವರಿ 10: 16 ಕಿಲೋ ಮೀಟರ್ ಪಾದಯಾತ್ರೆ (ದೊಡ್ಡ ಆಲದಹಳ್ಳಿಯಿಂದ ಕನಕಪುರ)

ದಿನ 3 ಜನವರಿ 11: 14.5 ಕಿಲೋ ಮೀಟರ್ ಪಾದಯಾತ್ರೆ(ಕನಕಪುರದಿಂದ ಚಿಕ್ಕೇಹಳ್ಳಿ ಗ್ರಾಮ)

ದಿನ 4 ಜನವರಿ 12: 15 ಕಿಲೋ ಮೀಟರ್ ಪಾದಯಾತ್ರೆ (ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್)

ದಿನ 5 ಜನವರಿ 13: 13 ಕಿಲೋ ಮೀಟರ್ ಪಾದಯಾತ್ರೆ (ರಾಮನಗರ ಟೌನ್ನಿಂದ ಬಿಡದಿ ಟೌನ್)

ದಿನ 6 ಜನವರಿ 14: 16 ಕಿಲೋ ಮೀಟರ್ ಪಾದಯಾತ್ರೆ (ಬಿಡದಿ ಟೌನ್ನಿಂದ ಕೆಂಗೇರಿ ಪೊಲೀಸ್ ಸ್ಟೇಷನ್)

ದಿನ 7 ಜನವರಿ 15: 15.5 ಕಿಲೋ ಮೀಟರ್ ಪಾದಯಾತ್ರೆ (ಕೆಂಗೇರಿ ಪೊಲೀಸ್ ಸ್ಟೇಷನ್ನಿಂದ ಸಾರಕ್ಕಿ ಸಿಗ್ನಲ್)

ದಿನ 8 ಜನವರಿ 16: 16 ಕಿಲೋ ಮೀಟರ್ ಪಾದಯಾತ್ರೆ (ಸಾರಕ್ಕಿ ಸಿಗ್ನಲ್ನಿಂದ ಮಾರತ್ತಹಳ್ಳಿ ಜಂಕ್ಷನ್)

ದಿನ 9 ಜನವರಿ 17: 13.5 ಕಿಲೋ ಮೀಟರ್ ಪಾದಯಾತ್ರೆ (ಮಾರತ್ತಹಳ್ಳಿ ಜಂಕ್ಷನ್ನಿಂದ ಲಿಂಗರಾಜಿಪುರ ಜಂಕ್ಷನ್)

ದಿನ 10 ಜನವರಿ 18: 14 ಕಿಲೋ ಮೀಟರ್ ಪಾದಯಾತ್ರೆ (ಲಿಂಗರಾಜಿಪುರ ಜಂಕ್ಷನ್ನಿಂದ ಡಿಸಿಸಿ ಕಾಂಗ್ರೆಸ್ ಭವನ)

ದಿನ 11 ಜನವರಿ 19: 8 ಕಿಲೋ ಮೀಟರ್ ಪಾದಯಾತ್ರೆ (ಕಾಂಗ್ರೆಸ್ ಭವನದಿಂದ ನ್ಯಾಷನಲ್ ಕಾಲೇಜು, ಬಸವನಗುಡಿ) ಜನವರಿ 19ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಸಲಾಗಿದೆ.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ವೀಕೆಂಡ್ನಲ್ಲಿ ರಾಜಕೀಯ, ಸಭೆ, ಸಮಾರಂಭಗಳಿಗೆಲ್ಲಾ ನಿಷೇಧವಿದೆ. ಈ ನಿಯಮದ ಮಧ್ಯೆಯೂ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಕೈ ನಾಯಕರನ್ನು ಅರೆಸ್ಟ್ ಮಡುವುದು ಬೇಡಾ ಎಂದು ಹಿರಿಯ ಸಚಿವರು ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕಾಂಗ್ರೆಸ್ ನಾಯಕರು ನಿಯಮ ಉಲ್ಲಂಘಿಸಿದರು ಅಂತಾ ಜನರ ಮುಂದೆ ತೋರಿಸಿ. ಕರೊನಾ ಸಮಸ್ಯೆ ಆದರೆ ಅವರೇ ಜವಾಬ್ದಾರಿಯಾಗುತ್ತಾರೆ. ಸರ್ಕಾರದಷ್ಟೇ ಅವರಿಗೂ ಜವಾಬ್ದಾರಿ‌ ಇದೆ. ಪಾದಯಾತ್ರೆ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿರಿಯ ಸಚಿವರು ಸಲಹೆ ನೀಡಿದ್ದಾರೆ. ಸಚಿವರ ಮಾತಿಗೆ ಸಿಎಂ ಬೊಮ್ಮಾಯಿ ಕೂಡ ಸಹಮತ ವ್ಯಕ್ತಪಡಿಸಿದ್ದು, 500 ಜನ ಸೇರಿದರು ಬಂಧಿಸದಂತೆ ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!