ಬೆಂ.ಗ್ರಾ.ಜಿಲ್ಲೆ: ಓಂ ಶಕ್ತಿ ದೇವಸ್ಥಾನದಿಂದ ಮರಳಿದ ಸುಮಾರು 200 ಮಂದಿ ಭಕ್ತರಿಗೆ ಜಿಲ್ಲೆಯ ದೊಡ್ಡಬಳ್ಳಾಪುರದ ನಗರ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ತಪಾಸಣೆ ಕಾರ್ಯ ಭಾನುವಾರ ನಡೆಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಡಾ.ಅರುಣ್ ಕುಮಾರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ ನೇತೃತ್ವದಲ್ಲಿ ತಪಾಸಣೆ ಕಾರ್ಯ ನಡೆಸಲಾಗಿದ್ದು, ಅದೃಷ್ಟವಶಾತ್ ಪ್ರಾಥಮಿಕ ವರದಿಯಲ್ಲಿ ಯಾವುದೇ ಸೋಂಕು ದೃಢಪಟ್ಟಿಲ್ಲ ಎನ್ನಲಾಗಿದೆ.
ಇನ್ನೂ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.9ರ ಬುಲೆಟಿನ್ ಅನ್ವಯ ಇಂದು ಹೊಸದಾಗಿ 98 ಕರೊನಾ ಪ್ರಕರಣಗಳು ವರದಿಯಾಗಿದೆ. ಕೋವಿಡ್ ಸೋಂಕಿನಿಂದ 05 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 12 ಪುರುಷರು, 08 ಮಹಿಳೆಯರು ಸೇರಿ 20. ದೇವನಹಳ್ಳಿ ತಾಲೂಕಿನ 10 ಪುರುಷರು, 07 ಮಹಿಳೆಯರು ಸೇರಿ 17. ದೊಡ್ಡಬಳ್ಳಾಪುರ ತಾಲೂಕಿನ 16 ಪುರುಷರು, 11 ಮಹಿಳೆಯರು ಸೇರಿ 27. ಹಾಗೂ ನೆಲಮಂಗಲ ತಾಲೂಕಿನ 18 ಪುರುಷರು, 16 ಮಹಿಳೆಯರು ಸೇರಿ 34 ಮತ್ತು ಒಟ್ಟು 98 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 367ಕ್ಕೆ ಏರಿಕೆಯಾಗಿದೆ. ಅಲ್ಲದೆ 566 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 966 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….