ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕನಕಪುರ ಸಂಗಮದಿಂದ ಕಾಂಗ್ರೆಸ್ ಮೇಕೆದಾಟು ಯೋಜನೆಯ ಪಾದಯಾತ್ರೆಗೆ ಚಾಲನೆ ನೀಡಿ ಕಾಂಗ್ರೆಸ್ ನಾಯಕರು ನಡಿರುವ ಕಾರ್ಯಕ್ರಮದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾದಯಾತ್ರೆಯ ಔಚಿತ್ಯವನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಬೆಳಗ್ಗೆ 11 ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ನನ್ನ ನಿವಾಸದಲ್ಲಿ ಪ್ರಮುಖ ಸಚಿವರ ಸಭೆ ಕರೆದಿದ್ದೇನೆ. ಅದರಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳು, ಮಾಡಬೇಕಾದ ಕೆಲಸಗಳು ಹಾಗೂ ಮೇಕೆದಾಟು ಯೋಜನೆಯ ಸಂಬಂಧ, ಪಾದಯಾತ್ರೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಕಾಂಗ್ರೆಸ್ ನವರು 5 ವರ್ಷ ಅಧಿಕಾರದಲ್ಲಿದ್ದರು, ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಅವರು ಕೂಡ ನೀರಾವರಿ ಸಚಿವರಾಗಿದ್ದರು. ಹಾಗಾದರೆ ಆಗ ಅವರು ಮೇಕೆದಾಟು ಯೋಜನೆಯ ಬಗ್ಗೆ ಏನು ಮಾಡಿದರು. ಡಿಪಿಆರ್ ವರದಿಯನ್ನು ಆಗ ಅವರು ಸರಿಯಾಗಿ ಸಲ್ಲಿಕೆ ಮಾಡಿದ್ದರೆ ಯೋಜನೆ ಈಡೇರುತ್ತಿರಲಿಲ್ಲವೇ, ಸಮ್ಮಿಶ್ರ ಸರ್ಕಾರ ಬಂದ ಮೇಲೆ ಡಿಪಿಆರ್ ಬಂದಿರುವುದು, ಸಮ್ಮಿಶ್ರ ಸರ್ಕಾರದಲ್ಲಿ ಕೂಡ ಡಿಪಿಆರ್ ನ್ನು ಸರಿಯಾಗಿ ತೆಗೆದುಕೊಂಡು ಹೋಗಿಲ್ಲ ಎಂದು ಹೇಳಿದರು. 

ಕಾಂಗ್ರೆಸ್ ನವರಿಗೆ ಮೇಕೆದಾಟು ಯೋಜನೆ ಬೇಕಾಗಿಲ್ಲ, ರಾಜಕಾರಣ ಬೇಕಾಗಿದೆ. ಯೋಜನೆಯ ಡಿಪಿಆರ್ ಮಾಡಲು ನಾಲ್ಕು ವರ್ಷ ತೆಗೆದುಕೊಂಡಿದ್ದಾರೆ. ಸಾಧ್ಯತೆ ವರದಿ ಮಾತ್ರ ಸಲ್ಲಿಕೆ ಮಾಡಿದ್ದಾರೆ, ಇದು ಕಾಂಗ್ರೆಸ್ ನವರ ಸಾಧನೆ, ಬೆಟ್ಟ ಅಗೆದು ಇಲಿ ತೆಗೆದಿದ್ದಾರೆ. ಇದು ಅವರ ಸಾಧನೆ ಎಂದು ವ್ಯಂಗ್ಯವಾಡಿದರು. 

ಕೋವಿಡ್ ನಿಯಮ ಉಲ್ಲಂಘಿಸಿ ವೀಕೆಂಡ್ ಕರ್ಫ್ಯೂ ವೇಳೆ ಪಾದಯಾತ್ರೆ ಮಾಡುತ್ತಿರುವುದಕ್ಕೆ ನೊಟೀಸ್ ನೀಡಲಾಗಿದೆ. ನಮ್ಮ ಅಧಿಕಾರಿಗಳು ಕೂಡ ಹೋಗಿ ಪಾದಯಾತ್ರೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಅವರು ಉಡಾಫೆಯಿಂದ ಮಾಡುತ್ತಿದ್ದಾರೆ. ಅದಕ್ಕೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಚುನಾವಣೆ ಸಮೀಪ ಬಂದಾಗ ಮೇಕೆದಾಟು ಕಾಂಗ್ರೆಸ್ ನವರಿಗೆ ನೆನಪಾಗಿದೆ: ಈ ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಬಂದಿದೆ. ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ನವರು ಮೇಕೆದಾಟು ಬಗ್ಗೆ ಎಲ್ಲಿಯೂ ಚರ್ಚೆ ಮಾಡಿಲ್ಲ, ಸರ್ಕಾರಕ್ಕೆ ಒತ್ತಾಯ ಮಾಡಿಲ್ಲ, ಈಗ 2023ರ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವಾಗ ಏಕಾಏಕಿ ರಾಜಕೀಯ ಪಾದಯಾತ್ರೆ ಆರಂಭಿಸಿದ್ದಾರೆ. ತಾವು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ ಎನ್ನುವ ಅಪರಾಧಿ ಮನೋಭಾವ ಕಾಂಗ್ರೆಸ್ ನವರನ್ನು ಕಾಡುತ್ತಿದೆ. ಆ ಅಪರಾಧಿ ಮನೋಭಾವವನ್ನು ದೂರ ಮಾಡಲು ಸಲುವಾಗಿ, ಜನರನ್ನು ಮರುಳು ಮಾಡುವ ಸಲುವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಸ್ಪಷ್ಟವಾಗಿ ರಾಜಕೀಯ ಪ್ರೇರಿತ ಕಾಂಗ್ರೆಸ್ ಪಾದಯಾತ್ರೆ ಎಂದರು.

ಕಾಂಗ್ರೆಸ್ ನವರು ಮೇಕೆದಾಟು ಆಗಲಿ, ಯಾವ ನೀರಾವರಿ ಯೋಜನೆ ಬಗ್ಗೆಯೂ ಬದ್ಧತೆಯಿಂದ ಕೆಲಸ ಮಾಡಿಲ್ಲ, ಕೃಷ್ಣೆಯ ಬಗ್ಗೆ ಪಾದಯಾತ್ರೆ ಮಾಡಿದ್ದು ಏನಾಯ್ತು, ಇದೇ ತರಹ ಕೂಡಲಸಂಗಮದಲ್ಲಿ ಹೋಗಿ ಆಣೆ ಮಾಡಿದ್ದರು, ಪ್ರತಿ ವರ್ಷ 10 ಸಾವಿರ ಕೋಟಿ ನೀಡುತ್ತೇವೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೊಡುತ್ತೇವೆ ಎಂದವರು ಇಡೀ 5 ವರ್ಷದ ಆಡಳಿತದಲ್ಲಿ 7 ಸಾವಿರ ಕೋಟಿ ರೂಪಾಯಿ ಕೂಡ ನೀಡಿರಲಿಲ್ಲ.

ಜನರನ್ನು ಎಲ್ಲಾ ಸಂದರ್ಭದಲ್ಲಿ ಮರುಳು ಮಾಡಲು ಸಾಧ್ಯವಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾದ ಮೇಲೆ ಡಿಪಿಆರ್ ಅನುಮತಿಗೆ ಕೇಂದ್ರ ಜಲ ಆಯೋಗದಿಂದ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಈಗಾಗಲೇ ಹೋಗಿದೆ. ಅದಕ್ಕೆ ಇದೇ ತಿಂಗಳಲ್ಲಿ ಸಭೆ ನಡೆದು ತೀರ್ಮಾನವಾಗುತ್ತದೆ. ಸುಪ್ರೀಂ ಕೋರ್ಟ್ ನಲ್ಲಿ ಕೂಡ ಇದೇ ತಿಂಗಳು ವಿಚಾರಣೆ ನಡೆಯುತ್ತದೆ. ಕಾನೂನು ತಜ್ಞರ ಜೊತೆಗೆ ನಾವು ಚರ್ಚಿಸುತ್ತಿದ್ದೇವೆ. ಪರಿಸರ ಇಲಾಖೆಯಿಂದ ಅನುಮತಿಗೆ ಕೂಡ ಕಾಯುತ್ತಿದ್ದೇವೆ ಎಂದು ವಿವರ ನೀಡಿದರು.

ಜವಾಬ್ದಾರಿಯುತ ಪಕ್ಷ ಕಾನೂನು ಅಡ್ಡಿ, ಆತಂಕಗಳು, ಯೋಜನೆಗೆ ಇರುವ ಸವಾಲುಗಳನ್ನು ಅರ್ಥ ಮಾಡಿಕೊಂಡಿದ್ದರೆ ಇಂದು ಪಾದಯಾತ್ರೆ ಮಾಡುತ್ತಿರಲಿಲ್ಲ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="111978"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!