ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕರ್ನಾಟಕಕ್ಕೆ ರೂ 642.26 ಕೋಟಿ ಮಂಜೂರು

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ರೂ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಈ ಯೋಜನೆಯಡಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ.ವರೆಗೆ ಅನುದಾನ  ಲಭ್ಯವಾಗಲಿದೆ .ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಯೋಜನೆಯ ಮುಖ್ಯ ಉದ್ದೇಶಗಳನ್ನು ವಿವರಿಸಿದ ಸಚಿವರು,ಮಳೆ ನೀರು ಕೊಯ್ಲ ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು.ಪರ್ಯಾಯ ಬೆಳೆ ವ್ಯವಸ್ಥೆಗಳು,ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು,ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ.  ಆಸ್ತಿರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ (SHGs) ಉತ್ತೇಜಿಸುವುದು ವಿಕಲಚೇತನರು ಮತ್ತು ಮಹಿಳೆಯರಿಗೆ ಅಭಿವೃದ್ಧಿಪಡಿಸಿದ ಭೂಮಿ, ನೀರು ಮತ್ತು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವುದಾಗಿದೆ ಎಂದರು.

ಜಲಾನಯನ ಅಭಿವೃದ್ಧಿ ಇಲಾಖೆಯ ಸಾಧನೆಗಳನ್ನು ಮುಂದುವರೆಸಿ ಮಾತನಾಡಿದ ಬಿ.ಸಿ.ಪಾಟೀಲ್, 2021-22 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ ಸುಜಲ-iii ಯೋಜನೆ ಮಾದರಿಯಲ್ಲಿ ವಿಶ್ವಬ್ಯಾಂಕ್ ಅನುದಾನದ ನೆರವಿನಲ್ಲಿ ಹೊಸ ರಿವಾರ್ಡ್ ( ಕೃಷಿಯ ಸುಸ್ಥಿರತೆಗಾಗಿ ನವೀನ ಅಭಿವೃದ್ಧಿಯ ಮೂಲಕ ಜಲಾನಯನ ಪ್ರದೇಶಗಳನ್ನು ಪುನಶ್ಚೇತನಗೊಳಿಸುವ ಯೋಜನೆ ಜಾರಿಗೊಳಿಸಿ ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ರೂ.ವೆಚ್ಚದಲ್ಲಿ ವಿಶ್ವಬ್ಯಾಂಕಿನ ಶೇ.70 ರಾಜ್ಯದ ಶೇ.30 ಪಾಲಿನಂತೆ ಯೋಜನೆಯನ್ನು ಮುಂದಿನ 5  ವರ್ಷಗಳ ಕಾಲ ಅನುಷ್ಠಾನಗೊಳಿಸಲಾಗಿದೆ ಎಂದರು.

ದೇಶದಲ್ಲಿಯೇ ಕರ್ನಾಟಕ ಕೃಷಿ ಇಲಾಖೆಯ ಜಲಾನಯನ ಇಲಾಖೆಯು ಇತರೆ ರಾಜ್ಯಗಳಿಗೆ ತಾಂತ್ರಿಕ ಸಲಹೆ ನೀಡಲು ಮಾದರಿಯಾಗಿದ್ದು, ಕರ್ನಾಟಕ ರಾಜ್ಯವನ್ನು ಕೇಂದ್ರ ಸರ್ಕಾರ “ಲೈಟ್ ಹೌಸ್” ಎಂದು ಗುರುತಿಸಿರುವುದು ಕರ್ನಾಟಕದ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ (Apex Bank elections) ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ

[ccc_my_favorite_select_button post_id="118515"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!