ನೀರಿನ ನೆಪದ ದೊಂಬರಾಟಕ್ಕೆ ಕೊನೆ ಹಾಡಬೇಕು: ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ  ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ.

ಕಳೆದ 4  ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು.

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ.

1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ  ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಯಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ.

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ.ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!