ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!