ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]