ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಂದಿನ ಚುನಾವಣೆಗೆ ಮಹಿಳಾ ಮೀಸಲಾತಿ: ಡಿಸಿಎಂ ಡಿ.ಕೆ‌.ಶಿವಕುಮಾರ್

ಮುಂದಿನ ಚುನಾವಣೆಗೆ ಮಹಿಳಾ ಮೀಸಲಾತಿ: ಡಿಸಿಎಂ ಡಿ.ಕೆ‌.ಶಿವಕುಮಾರ್

"ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="116116"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!