ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!