ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!