ಬೆಂ.ಗ್ರಾ.ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗದ ಹೊಸ ರೂಪಾಂತರ ಒಮೀಕ್ರಾನ್ ಹಾವಳಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 14ರ ಮಧ್ಯರಾತ್ರಿ 12.00 ಗಂಟೆಯಿಂದ ವಿವಿಧ ನಿಬಂಧನೆಗಳ ಮೇರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಕರ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ನಿಷೇಧಿಸಲಾಗಿದೆ ಹಾಗೂ ಮುಂಬರುವ ಯಾವುದೇ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶ, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.ಎಲ್ಲಾ ರೀತಿಯ ಸಾಮಾಜಿಕ ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಕಾರ್ಯಕ್ರಮಗಳು ಹಾಗೂ ಗುಂಪು ಸೇರುವುದನ್ನು ನಿಬರ್ಂಧಿಸಿದೆ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬಹುದಾಗಿದೆ.

ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವುದು ಕಡ್ಡಾಯವಾಗಿದೆ.

ಯಾವುದೇ ಸಾರ್ವಜನಿಕ ಮೈದಾನ, ರೇಸಾರ್ಟ್, ಹೋಟೆಲ್, ಪಾರ್ಟಿ ಹಾಲ್, ಕಲ್ಯಾಣ ಮಂಟಪ ಮತ್ತು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಾಗಿ ಹಬ್ಬಗಳನ್ನು ಆಚರಣೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಎಲ್ಲಾ ಎಲ್ಲಾ ಕಟ್ಟುನಿಟ್ಟಾದ ನಿರ್ಬಂಧಗಳು ಜನರ ಚಲನ-ವಲನಗಳಿಗೆ ಸಂಬಂಧಿಸಿದವುಗಳಾಗಿದ್ದು, ಅಗತ್ಯ ಸರಕುಗಳಿಗೆ ಸಂಬಂಧಿಸಿರುವುದಿಲ್ಲ.

ಯಾವುದೇ ವ್ಯಕ್ತಿ ಈ ಮೇಲಿನ ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡ ಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಆದೇಶಿಸಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!