ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಸಂಭ್ರಮದ ಸಂಕ್ರಾಂತಿ: ಎಳ್ಳು ಬೆಲ್ಲ ವಿನಿಮಯ / ಹಬ್ಬಕ್ಕೆ ಮೆರುಗು ನೀಡಿದ ಶುಭಾಶಯ ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರ

ದೊಡ್ಡಬಳ್ಳಾಪುರ: ಕರೊನಾ ಆತಂಕ, ವಾರಾಂತ್ಯದ ಕಪ್ರ್ಯೂ ಹೇರಿಕೆ ಹಾಗೂ ನಿಷೇಧಾಜ್ಞೆಗಳ ನಡುವೆಯೇ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. 

ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರವು ಹಬ್ಬಕ್ಕೆ ಮೆರುಗು ನೀಡಿದ್ದವು.

ಕಬ್ಬು, ಅವರೇ ಕಾಯಿ, ಕಡಲೇಕಾಯಿಗಳನ್ನು ಗೋವುಗಳಿಗೆ ನೇವೇದ್ಯ ಮಾಡಿ ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರೈತರು ಮುಂಜಾನೆಯಿಂದಲೇ ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು ಅಲಂಕಾರ ಮಾಡುತ್ತಿದ್ದರು. ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಗಳು ನಡೆದವು. 

ಸಂಕ್ರಾಂತಿ ಹಬ್ಬ ದಿನವು ಸಹ ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಅವರೆ ಕಾಯಿ, ಕಡಲೆ ಕಾಯಿ, ಕಬ್ಬು, ಗೆಣಸು ಮುಂತಾದ ಪದಾರ್ಥಗಳ ಮಾರಾಟ ಸಹ ನಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಸಂಜೆಯ ಕಾರ್ಯಕ್ರಮಗಳು: ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಮೀಣ ಪ್ರದೇಶದಲ್ಲಿ ಕಾಟಿಮರಾಯನ ಹಬ್ಬದ ಆಚರಣೆ ನಡೆದಿದೆ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು, ಬಗೆ ಬಗೆಯ ಅಲಂಕಾರದಿಂದ ಕೂಡಿದ ಗೌನುಗಳನ್ನು ಹೊದಿಸಿ ಕೊರಳಿಗೆ ಗೆಜ್ಜೆ ಸಾರಗಳನ್ನು ಹೂವಿನ ಹಾರಗಳನ್ನು ಹಾಕಿ ವಾದ್ಯಗಳೊಂದಿಗೆ ಮರೆವಣಿಗೆ  ಮಾಡಿದರು.

ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಎಲ್ಲೆಡೆ ಕಂಡು ಬಂದವು. ರಾಸುಗಳಿಗೆ ಅಲಂಕಾರ ಮಾಡಿಕೊಂಡು ಮೆರವಣಿಗೆಯಲ್ಲಿ ಊರ ಹೊರಗಿರುವ ಕಾಟಿಮರಾಯನ ಗೋಪುರ ಬಳಿಗೆ ಕರೆ ತಂದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಮಣ್ಣಿನಿಂದ ಮಾಡಲ್ಪಟ್ಟ ಎತ್ತರ ಗೋಪುರಕ್ಕೆ ಸುಣ್ಣ ಮತ್ತು ಕೆಮ್ಮಣ್ಣಿನ  ಪಟ್ಟೆಗಳನ್ನು ಬಳಿದು, ಹೂವು, ಮಾವು ಮತ್ತು ಬಾಳೆಯಿಂದ ಅಲಂಕಾರ ಮಾಡಿದ್ದರು. ಕೆಲವು ಗ್ರಾಮಗಳಲ್ಲಿ ಅಂಚಿ ಕಡ್ಡಿಗಳನ್ನು ಪೋಣಿಸಿರುವುದು ಸಹ ಕಂಡು ಬಂತು. 

ಪ್ರತಿ ಮನೆಯಿಂದ ಅಕ್ಕಿ, ಕಾಳು, ಬೆಲ್ಲ ಸಂಗ್ರಹಿಸಿ ಅವುಗಳನ್ನು ಬೇಯಿಸಿ ಪ್ರಸಾದವನ್ನು ರಾಸುಗಳಿಗೆ ನೀಡುತ್ತಿದ್ದರು. ಕಾಟೀಮರಾಯನ ಗುಡಿಯಲ್ಲಿ ವಿಶೇಷ ಪೂಜೆ ನಡೆದ ನಂತರ ಊರಿನ ಕಡೆಗೆ ರಾಸುಗಳನ್ನು ಓಡಿಸಿಕೊಂಡು ಬಂದು ಕಿಚ್ಚು ಹಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]