ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಸಂಭ್ರಮದ ಸಂಕ್ರಾಂತಿ: ಎಳ್ಳು ಬೆಲ್ಲ ವಿನಿಮಯ / ಹಬ್ಬಕ್ಕೆ ಮೆರುಗು ನೀಡಿದ ಶುಭಾಶಯ ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರ

ದೊಡ್ಡಬಳ್ಳಾಪುರ: ಕರೊನಾ ಆತಂಕ, ವಾರಾಂತ್ಯದ ಕಪ್ರ್ಯೂ ಹೇರಿಕೆ ಹಾಗೂ ನಿಷೇಧಾಜ್ಞೆಗಳ ನಡುವೆಯೇ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. 

ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರವು ಹಬ್ಬಕ್ಕೆ ಮೆರುಗು ನೀಡಿದ್ದವು.

ಕಬ್ಬು, ಅವರೇ ಕಾಯಿ, ಕಡಲೇಕಾಯಿಗಳನ್ನು ಗೋವುಗಳಿಗೆ ನೇವೇದ್ಯ ಮಾಡಿ ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರೈತರು ಮುಂಜಾನೆಯಿಂದಲೇ ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು ಅಲಂಕಾರ ಮಾಡುತ್ತಿದ್ದರು. ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಗಳು ನಡೆದವು. 

ಸಂಕ್ರಾಂತಿ ಹಬ್ಬ ದಿನವು ಸಹ ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಅವರೆ ಕಾಯಿ, ಕಡಲೆ ಕಾಯಿ, ಕಬ್ಬು, ಗೆಣಸು ಮುಂತಾದ ಪದಾರ್ಥಗಳ ಮಾರಾಟ ಸಹ ನಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಸಂಜೆಯ ಕಾರ್ಯಕ್ರಮಗಳು: ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಮೀಣ ಪ್ರದೇಶದಲ್ಲಿ ಕಾಟಿಮರಾಯನ ಹಬ್ಬದ ಆಚರಣೆ ನಡೆದಿದೆ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು, ಬಗೆ ಬಗೆಯ ಅಲಂಕಾರದಿಂದ ಕೂಡಿದ ಗೌನುಗಳನ್ನು ಹೊದಿಸಿ ಕೊರಳಿಗೆ ಗೆಜ್ಜೆ ಸಾರಗಳನ್ನು ಹೂವಿನ ಹಾರಗಳನ್ನು ಹಾಕಿ ವಾದ್ಯಗಳೊಂದಿಗೆ ಮರೆವಣಿಗೆ  ಮಾಡಿದರು.

ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಎಲ್ಲೆಡೆ ಕಂಡು ಬಂದವು. ರಾಸುಗಳಿಗೆ ಅಲಂಕಾರ ಮಾಡಿಕೊಂಡು ಮೆರವಣಿಗೆಯಲ್ಲಿ ಊರ ಹೊರಗಿರುವ ಕಾಟಿಮರಾಯನ ಗೋಪುರ ಬಳಿಗೆ ಕರೆ ತಂದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಮಣ್ಣಿನಿಂದ ಮಾಡಲ್ಪಟ್ಟ ಎತ್ತರ ಗೋಪುರಕ್ಕೆ ಸುಣ್ಣ ಮತ್ತು ಕೆಮ್ಮಣ್ಣಿನ  ಪಟ್ಟೆಗಳನ್ನು ಬಳಿದು, ಹೂವು, ಮಾವು ಮತ್ತು ಬಾಳೆಯಿಂದ ಅಲಂಕಾರ ಮಾಡಿದ್ದರು. ಕೆಲವು ಗ್ರಾಮಗಳಲ್ಲಿ ಅಂಚಿ ಕಡ್ಡಿಗಳನ್ನು ಪೋಣಿಸಿರುವುದು ಸಹ ಕಂಡು ಬಂತು. 

ಪ್ರತಿ ಮನೆಯಿಂದ ಅಕ್ಕಿ, ಕಾಳು, ಬೆಲ್ಲ ಸಂಗ್ರಹಿಸಿ ಅವುಗಳನ್ನು ಬೇಯಿಸಿ ಪ್ರಸಾದವನ್ನು ರಾಸುಗಳಿಗೆ ನೀಡುತ್ತಿದ್ದರು. ಕಾಟೀಮರಾಯನ ಗುಡಿಯಲ್ಲಿ ವಿಶೇಷ ಪೂಜೆ ನಡೆದ ನಂತರ ಊರಿನ ಕಡೆಗೆ ರಾಸುಗಳನ್ನು ಓಡಿಸಿಕೊಂಡು ಬಂದು ಕಿಚ್ಚು ಹಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಇಂದು ಜಿಲ್ಲಾ ಯೋಜನಾ ಸಮಿತಿ ಚುನಾವಣೆ: ನಿಷೇಧಾಜ್ಞೆ ಜಾರಿ

ಇಂದು ಜಿಲ್ಲಾ ಯೋಜನಾ ಸಮಿತಿ ಚುನಾವಣೆ: ನಿಷೇಧಾಜ್ಞೆ ಜಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆಯನ್ನು (District Planning Committee Election) ಇಂದು (ಫೆ.27) ಬೆಳಗ್ಗೆ 9.00 ರಿಂದ 1.00 ಗಂಟೆಯವರೆಗೆ ಮತದಾನ ಹಾಗೂ ಇದೇ ಮಧ್ಯಾಹ್ನ 3.00 ಗಂಟೆಯಿಂದ ಮತ

[ccc_my_favorite_select_button post_id="119785"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!