ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಸಂಭ್ರಮದ ಸಂಕ್ರಾಂತಿ: ಎಳ್ಳು ಬೆಲ್ಲ ವಿನಿಮಯ / ಹಬ್ಬಕ್ಕೆ ಮೆರುಗು ನೀಡಿದ ಶುಭಾಶಯ ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರ

ದೊಡ್ಡಬಳ್ಳಾಪುರ: ಕರೊನಾ ಆತಂಕ, ವಾರಾಂತ್ಯದ ಕಪ್ರ್ಯೂ ಹೇರಿಕೆ ಹಾಗೂ ನಿಷೇಧಾಜ್ಞೆಗಳ ನಡುವೆಯೇ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. 

ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರವು ಹಬ್ಬಕ್ಕೆ ಮೆರುಗು ನೀಡಿದ್ದವು.

ಕಬ್ಬು, ಅವರೇ ಕಾಯಿ, ಕಡಲೇಕಾಯಿಗಳನ್ನು ಗೋವುಗಳಿಗೆ ನೇವೇದ್ಯ ಮಾಡಿ ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರೈತರು ಮುಂಜಾನೆಯಿಂದಲೇ ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು ಅಲಂಕಾರ ಮಾಡುತ್ತಿದ್ದರು. ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಗಳು ನಡೆದವು. 

ಸಂಕ್ರಾಂತಿ ಹಬ್ಬ ದಿನವು ಸಹ ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಅವರೆ ಕಾಯಿ, ಕಡಲೆ ಕಾಯಿ, ಕಬ್ಬು, ಗೆಣಸು ಮುಂತಾದ ಪದಾರ್ಥಗಳ ಮಾರಾಟ ಸಹ ನಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಸಂಜೆಯ ಕಾರ್ಯಕ್ರಮಗಳು: ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಮೀಣ ಪ್ರದೇಶದಲ್ಲಿ ಕಾಟಿಮರಾಯನ ಹಬ್ಬದ ಆಚರಣೆ ನಡೆದಿದೆ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು, ಬಗೆ ಬಗೆಯ ಅಲಂಕಾರದಿಂದ ಕೂಡಿದ ಗೌನುಗಳನ್ನು ಹೊದಿಸಿ ಕೊರಳಿಗೆ ಗೆಜ್ಜೆ ಸಾರಗಳನ್ನು ಹೂವಿನ ಹಾರಗಳನ್ನು ಹಾಕಿ ವಾದ್ಯಗಳೊಂದಿಗೆ ಮರೆವಣಿಗೆ  ಮಾಡಿದರು.

ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಎಲ್ಲೆಡೆ ಕಂಡು ಬಂದವು. ರಾಸುಗಳಿಗೆ ಅಲಂಕಾರ ಮಾಡಿಕೊಂಡು ಮೆರವಣಿಗೆಯಲ್ಲಿ ಊರ ಹೊರಗಿರುವ ಕಾಟಿಮರಾಯನ ಗೋಪುರ ಬಳಿಗೆ ಕರೆ ತಂದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಮಣ್ಣಿನಿಂದ ಮಾಡಲ್ಪಟ್ಟ ಎತ್ತರ ಗೋಪುರಕ್ಕೆ ಸುಣ್ಣ ಮತ್ತು ಕೆಮ್ಮಣ್ಣಿನ  ಪಟ್ಟೆಗಳನ್ನು ಬಳಿದು, ಹೂವು, ಮಾವು ಮತ್ತು ಬಾಳೆಯಿಂದ ಅಲಂಕಾರ ಮಾಡಿದ್ದರು. ಕೆಲವು ಗ್ರಾಮಗಳಲ್ಲಿ ಅಂಚಿ ಕಡ್ಡಿಗಳನ್ನು ಪೋಣಿಸಿರುವುದು ಸಹ ಕಂಡು ಬಂತು. 

ಪ್ರತಿ ಮನೆಯಿಂದ ಅಕ್ಕಿ, ಕಾಳು, ಬೆಲ್ಲ ಸಂಗ್ರಹಿಸಿ ಅವುಗಳನ್ನು ಬೇಯಿಸಿ ಪ್ರಸಾದವನ್ನು ರಾಸುಗಳಿಗೆ ನೀಡುತ್ತಿದ್ದರು. ಕಾಟೀಮರಾಯನ ಗುಡಿಯಲ್ಲಿ ವಿಶೇಷ ಪೂಜೆ ನಡೆದ ನಂತರ ಊರಿನ ಕಡೆಗೆ ರಾಸುಗಳನ್ನು ಓಡಿಸಿಕೊಂಡು ಬಂದು ಕಿಚ್ಚು ಹಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!