ಖಾನಿ ಮಠದ ಭೂಮಿ ಮಾರಾಟ ಆರೋಪದಲ್ಲಿ ಹುರುಳಿಲ್ಲ: ಬಸವರಾಜ ಸ್ವಾಮೀಜಿ ಸ್ಪಷ್ಟನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ  ಖಾನಿಮಠದ ಆಸ್ತಿಯನ್ನು ಮಠದಿಂದ  ಮಾರಾಟ ಮಾಡಲಾಗಿದೆ ಎನ್ನುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಈ ಹಿಂದಿನ ಮಠದ  ಶಾಲೆಯ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿದ್ದ ರಾಜಶೇಖರ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮಠದ  ಬಸವರಾಜಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ನಗರದ  ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲುಕುಂಟೆ  ಸಮೀಪ ಮಠಕ್ಕೆ ಸೇರಿದ ಸುಮಾರು 6 ಎಕರೆ ಭೂಮಿ ಇತ್ತು. ಆ ಭೂಮಿಯಲ್ಲಿ ಮಾವಿನ ಗಿಡಗಳನ್ನು ಬೆಳೆದಿದ್ದೆವೆ. ಅದರೆ ಈ ಭೂಮಿಗೆ ತೆರಳಲು ರಸ್ತೆ ಇರಲಿಲ್ಲ. ಈ ಹಿಂದೆ ಆ ಭೂಮಿ ಗ್ರೋ ಮೋರ್ ಫುಡ್ ಗ್ರಾಂಟ್ ಅಡಿ ಮಠಕ್ಕೆ ಭೂಮಿ ಮಂಜೂರು ಆಗಿತ್ತು. ಆದರೆ ಅದು ಅಕೃತವಾಗಿರಲಿಲ್ಲ. ಇದೇ ಸಮಯದಲ್ಲಿ  ಬೇರೊಬ್ಬರು ಮಠದ ಭೂಮಿಯನ್ನು ಬಿಟ್ಟುಕೊಟ್ಟರೆ, ಸನಿಹದಲ್ಲೆ ಇರುವ ಅವರ 6 ಎಕರೆ ಭೂಮಿಯನ್ನು ನೀಡುವುದಾಗಿ ಹೇಳಿದ್ದರು. ಆ ಭೂಮಿಗೆ ರಸ್ತೆ ಕೂಡ ಇದ್ದು, ಮಠಕ್ಕೆ ಅಕೃತವಾದ ಭೂಮಿ ಸಿಗುವ ಭರವಸೆ ಮೇಲೆ ಭೂಮಿ ಬದಲಾವಣೆ ಮಾಡಿಕೊಂಡಿದ್ದೇವೆ ಹೊರತು, ಮಠದ ಭೂಮಿಯನ್ನು ಮಾರಿಲ್ಲ. ಹಿಂದಿನ ಷಡಕ್ಷರಿ ಸ್ವಾಮೀಜಿ ಪ್ರಕಾರ ಯಾರೂ ಅದನ್ನು ಮಾರಲು ಸಾಧ್ಯ ಇಲ್ಲ.

ನೋಂದಣಿ ದಾಖಲೆಯಲ್ಲಿ ಬಸವರಾಜು ಬಿನ್ ಶಿವಣ್ಣ ಎಂದು ನಮೂದಾಗಿದ್ದು, ಸ್ವಾಮೀಜಿ ಹೆಸರಿನ ಹಿಂದೆ ತಂದೆ ಹೆಸರೇಕೆ ಎಂಬ ಆರೋಪದ ಹಿನ್ನೆಲೆ ಅದನ್ನೂ ಸಹ ತಿದ್ದುಪಡಿಗೆ ನೀಡಿದ್ದೇವೆ. ಮಠದಿಂದ ನಡೆಯುತ್ತಿದ್ದ ಸರ್ಕಾರ ಅನುದಾನಿತ ಪ್ರೌಡಶಾಲೆ ವಿದ್ಯಾರ್ಥಿಗಳ ನೋಂದಣಿ ಕಡಿಮೆಯಾದ್ದರಿಂದ ಶಾಲಾ ಪರವಾನಿಗೆ ರದ್ದಾಗಿತ್ತು. ಈ ಶಾಲೆ ಮುಚ್ಚಲು ಕೂಡ ಶಾಲೆಗೆ ಮಕ್ಕಳು ನೋಂದಣಿಯಾಗದೆ ತಡೆದದ್ದು ರಾಜಶೇಖರ್ ಅವರೆ ಎಂದು ಆರೋಪ ಮಾಡಿದ ಅವರು ಖಾಲಿ ಇರುವ ಶಾಲಾ ಕಟ್ಟಡವನ್ನು ಮಠದ ವರಮಾನಕ್ಕಾಗಿ ಬೋಗ್ಯಕ್ಕೆ ನೀಡಿದ್ದೇವೆ ಹೊರತು. ಇಲ್ಲಿ ಯಾವುದೇ ದರ್ಬುಳಕೆ ಆಗಿಲ್ಲ.

ನಾನು ಇಲ್ಲಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಾಸ್ಟೆಲ್, ಭೋಜನ ಕೊಠಡಿ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಮಠದ ಹಿತರಕ್ಷಣೆಗೆ ಬದ್ದವಿರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮುಖಂಡರಾದ ವಿಶ್ವನಾಥ್, ಉಮಾಶಂಕರ್, ಪುಟ್ಟಬಸವರಾಜು, ಮುನಿರಾಜು, ಕೊನಘಟ್ಟ ಬಸವರಾಜು, ಕೆ.ಮಹಾಲಿಂಗಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!