ಖಾನಿ ಮಠದ ಭೂಮಿ ಮಾರಾಟ ಆರೋಪದಲ್ಲಿ ಹುರುಳಿಲ್ಲ: ಬಸವರಾಜ ಸ್ವಾಮೀಜಿ ಸ್ಪಷ್ಟನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ  ಖಾನಿಮಠದ ಆಸ್ತಿಯನ್ನು ಮಠದಿಂದ  ಮಾರಾಟ ಮಾಡಲಾಗಿದೆ ಎನ್ನುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಈ ಹಿಂದಿನ ಮಠದ  ಶಾಲೆಯ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿದ್ದ ರಾಜಶೇಖರ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮಠದ  ಬಸವರಾಜಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ನಗರದ  ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲುಕುಂಟೆ  ಸಮೀಪ ಮಠಕ್ಕೆ ಸೇರಿದ ಸುಮಾರು 6 ಎಕರೆ ಭೂಮಿ ಇತ್ತು. ಆ ಭೂಮಿಯಲ್ಲಿ ಮಾವಿನ ಗಿಡಗಳನ್ನು ಬೆಳೆದಿದ್ದೆವೆ. ಅದರೆ ಈ ಭೂಮಿಗೆ ತೆರಳಲು ರಸ್ತೆ ಇರಲಿಲ್ಲ. ಈ ಹಿಂದೆ ಆ ಭೂಮಿ ಗ್ರೋ ಮೋರ್ ಫುಡ್ ಗ್ರಾಂಟ್ ಅಡಿ ಮಠಕ್ಕೆ ಭೂಮಿ ಮಂಜೂರು ಆಗಿತ್ತು. ಆದರೆ ಅದು ಅಕೃತವಾಗಿರಲಿಲ್ಲ. ಇದೇ ಸಮಯದಲ್ಲಿ  ಬೇರೊಬ್ಬರು ಮಠದ ಭೂಮಿಯನ್ನು ಬಿಟ್ಟುಕೊಟ್ಟರೆ, ಸನಿಹದಲ್ಲೆ ಇರುವ ಅವರ 6 ಎಕರೆ ಭೂಮಿಯನ್ನು ನೀಡುವುದಾಗಿ ಹೇಳಿದ್ದರು. ಆ ಭೂಮಿಗೆ ರಸ್ತೆ ಕೂಡ ಇದ್ದು, ಮಠಕ್ಕೆ ಅಕೃತವಾದ ಭೂಮಿ ಸಿಗುವ ಭರವಸೆ ಮೇಲೆ ಭೂಮಿ ಬದಲಾವಣೆ ಮಾಡಿಕೊಂಡಿದ್ದೇವೆ ಹೊರತು, ಮಠದ ಭೂಮಿಯನ್ನು ಮಾರಿಲ್ಲ. ಹಿಂದಿನ ಷಡಕ್ಷರಿ ಸ್ವಾಮೀಜಿ ಪ್ರಕಾರ ಯಾರೂ ಅದನ್ನು ಮಾರಲು ಸಾಧ್ಯ ಇಲ್ಲ.

ನೋಂದಣಿ ದಾಖಲೆಯಲ್ಲಿ ಬಸವರಾಜು ಬಿನ್ ಶಿವಣ್ಣ ಎಂದು ನಮೂದಾಗಿದ್ದು, ಸ್ವಾಮೀಜಿ ಹೆಸರಿನ ಹಿಂದೆ ತಂದೆ ಹೆಸರೇಕೆ ಎಂಬ ಆರೋಪದ ಹಿನ್ನೆಲೆ ಅದನ್ನೂ ಸಹ ತಿದ್ದುಪಡಿಗೆ ನೀಡಿದ್ದೇವೆ. ಮಠದಿಂದ ನಡೆಯುತ್ತಿದ್ದ ಸರ್ಕಾರ ಅನುದಾನಿತ ಪ್ರೌಡಶಾಲೆ ವಿದ್ಯಾರ್ಥಿಗಳ ನೋಂದಣಿ ಕಡಿಮೆಯಾದ್ದರಿಂದ ಶಾಲಾ ಪರವಾನಿಗೆ ರದ್ದಾಗಿತ್ತು. ಈ ಶಾಲೆ ಮುಚ್ಚಲು ಕೂಡ ಶಾಲೆಗೆ ಮಕ್ಕಳು ನೋಂದಣಿಯಾಗದೆ ತಡೆದದ್ದು ರಾಜಶೇಖರ್ ಅವರೆ ಎಂದು ಆರೋಪ ಮಾಡಿದ ಅವರು ಖಾಲಿ ಇರುವ ಶಾಲಾ ಕಟ್ಟಡವನ್ನು ಮಠದ ವರಮಾನಕ್ಕಾಗಿ ಬೋಗ್ಯಕ್ಕೆ ನೀಡಿದ್ದೇವೆ ಹೊರತು. ಇಲ್ಲಿ ಯಾವುದೇ ದರ್ಬುಳಕೆ ಆಗಿಲ್ಲ.

ನಾನು ಇಲ್ಲಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಾಸ್ಟೆಲ್, ಭೋಜನ ಕೊಠಡಿ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಮಠದ ಹಿತರಕ್ಷಣೆಗೆ ಬದ್ದವಿರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮುಖಂಡರಾದ ವಿಶ್ವನಾಥ್, ಉಮಾಶಂಕರ್, ಪುಟ್ಟಬಸವರಾಜು, ಮುನಿರಾಜು, ಕೊನಘಟ್ಟ ಬಸವರಾಜು, ಕೆ.ಮಹಾಲಿಂಗಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!