ತಪ್ಪುಗಳನ್ನು ಮುಚ್ಚಿಕೊಳ್ಳಲು ದೊಡ್ಡಬಳ್ಳಾಪುರ ನಗರಸಭೆಯಿಂದ ಪಂಪ್ ಗಳ ಅಳವಡಿಕೆ: ಕೆರೆ ಸಂರಕ್ಷಣಾ ವೇದಿಕೆ ಸಭೆಯಲ್ಲಿ ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಸಂದೇಶ್ ಆಕ್ರೋಶ

ದೊಡ್ಡಬಳ್ಳಾಪುರ: ನಮ್ಮೂರಿನ ಕೆರೆ ನೀರನ್ನು ಶುದ್ಧವಾಗಿ ಉಳಿಸಿಕೊಳ್ಳುವುದಕ್ಕಾಗಿಯೇ ನಮ್ಮ ಹೋರಾಟ ಹೊರತು ಯಾರೊಬ್ಬರ ವಿರುದ್ಧವು ಅಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಖ್ಯಾತ ವೈದ್ಯ ಡಾ.ಟಿ.ಎಚ್. ಆಂಜಿನಪ್ಪ ಹೇಳಿದರು. 

ಅವರು ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಭಾನುವಾರ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಕೆರೆ ಸಂರಕ್ಷಣಾ ವೇದಿಕೆ ವತಿಯಿಂದ ನಡೆದ ಹೋರಾಟದ ರೂಪುರೇಷೆ ಕುರಿತ ಸಭೆಯಲ್ಲಿ ಮಾತನಾಡಿದರು.

ಎರಡು ದಶಕಗಳ ನಂತರ ನಮ್ಮೂರಿನ ಕೆರೆ ಕೋಡಿ ಬಿದ್ದಿರುವುದನ್ನು ನೋಡಿ ಖುಷಿ ಪಟ್ಟಿದ್ದೆವು. ನಮ್ಮ ಜೀವಿತ ಕಾಲದಲ್ಲಿ ಮತ್ತೆ ಕೆರೆಗೆ ನೀರು ಬರುತ್ತವೆ ಎನ್ನುವ ನಂಬಿಯೇ ಇಲ್ಲದಾಗಿತ್ತು. ಆದರೆ ಕೆರೆಗೆ ನೀರು ಬಂದ ಮೂರೇ ತಿಂಗಳಲ್ಲಿ ಕೆರೆ ನೀರು ಕಲುಷಿತವಾಗಿರುವುದರ ವಿರುದ್ಧ ಹೋರಾಟ ಮಾಡಬೇಕಾದ ಸ್ಥಿತಿ ಬಂದಿರುವುದು ವಿಷಾದದ ಸಂಗತಿಯಾಗಿದೆ.

ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ನಮ್ಮಿಂದ ಕೆರೆ ನೀರು ಕಲುಷಿತವಾಗಿಲ್ಲ ಎನ್ನುತ್ತಿದ್ದಾರೆ. ಬಾಶೆಟ್ಟಿಹಳ್ಳಿ ಕೈಗಾರಿಕೆಗಳು ನಮ್ಮದು ತಪ್ಪಿಲ್ಲ ಅಂದರೆ ಕೆರೆ ನೀರು ಯಾರಿಂದ ಕಲುಷಿತವಾಗಿದೆ ಎಂದು ಪ್ರಶ್ನಿಸಿದ ಅವರು, ಯಾರದೇ ಮಾತನ್ನು ನಂಬುವ ಮುನ್ನ ನೀರಿನ ವೈಜ್ಞಾನಿಕ ಪರೀಕ್ಷೆ ನಡೆಯಬೇಕು. ಯಾವ ಭಾಗದ ಹಳ್ಳದ ಸಾಲಿನಿಂದ ಬರುತ್ತಿರುವ ನೀರಿನಿಂದ ನಮ್ಮೂರಿನ ಕೆರೆಯ ನೀರು ಕಲುಷಿತವಾಗುತ್ತಿದೆ ಎನ್ನವ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ನಮ್ಮೂರಿನ ಕೆರೆಯ ನೀರು ಕಲುಷಿತಗೊಂಡಿರುವುದಕ್ಕೆ ನಿಖರ ಕಾರಣ ಹಾಗೂ ಪರಿಹಾರ ದೊರೆಯದ ಹೊರತು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕೆರೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಪಕ್ಷಾತೀತವಾಗಿದೆ. ಹೀಗಾಗಿ ನಮಗೆ ಯಶಸ್ಸು ದೊರೆಯಲಿದೆ ಎಂದರು.

ಕೆರೆಯ ನೀರು ಕಲುಷಿತವಾಗಿರುವುದರಿಂದ ಅಂತರ್ಜಲವು ಸಹ ಕಲುಷಿತವಾಗಿದ್ದು ಕೊಳವೆ ಬಾವಿಗಳಲ್ಲೂ ಶುದ್ದ ನೀರು ಬರುತ್ತಿಲ್ಲ. ಇದು ಕೇಲವ ಕುಡಿಯುವ ನೀರಿನ ಮೇಲಷ್ಟೇ ಅಲ್ಲದೆ ಕೃಷಿ ಬಳಕೆಯ ನೀರಿನ ಮೇಲೂ ಪರಿಣಾಮ ಬೀರಲಿದೆ. ರೈತರು ಈಗಲೇ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೇಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಿಂದ ಚಿಕ್ಕತುಮಕೂರು ಕೆರೆಗೆ ಬರುತ್ತಿರುವ ಒಳಚರಂಡಿ ನೀರನ್ನು ಸೂಕ್ತ ರೀತಿಯಲ್ಲಿ ಶುದ್ದೀಕರಣ ಮಾಡಿದ್ದರೆ ಇಷ್ಟೆಲ್ಲಾ ತೊಂದರೆ ಉಂಟಾಗುತ್ತಿರಲಿಲ್ಲ. ಚಿಕ್ಕತುಮಕೂರು ಕೆರೆಯ ಸಮೀಪ ಸೂಕ್ತ ಸಾಮರ್ಥ್ಯ ಹೊಂದಿರುವ ಪಂಪ್ಗಳನ್ನು ಆಳವಡಿಕೆ ಮಾಡದೇ ಒಳಚರಂಡಿ ನೀರು ಕೆರೆಗೆ ಹರಿದು ಬಿಟ್ಟಿದ್ದಾರೆ. ನಮ್ಮ ಪಂಚಾಯಿತಿ ವತಿಯಿಂದಲು ಹಲವಾರು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದ್ದೇವೆ. ಆದರೆ ಈಗ ಹೋರಾಟಗಳು ಆರಂಭವಾದ ಮೇಲೆ ಪಂಪ್ಗಳನ್ನು ಅಳವಡಿಸಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳು ಯತ್ನಿಸುತ್ತಿದ್ದಾರೆ. ಕೆರೆ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಪಂಚಾಯಿತಿ ವತಿಯಿಂದಲು ಬೆಂಬಲ ಸೂಚಿಸಲಾಗುವುದು. ಈ ಬಗ್ಗೆ ನಮ್ಮ ಪಂಚಾಯಿತಿ ಎಲ್ಲಾ ಸದಸ್ಯರು ಹಾಗೂ ಮುಖಂಡರೊಂದಿಗು ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಚಿಕ್ಕಣಪ್ಪ, ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಪ್ರಭಾಕರ್, ದೊಡ್ಡತುಮಕೂರು ಗ್ರಾಮಪಂಚಾಯಿತಿ ಸದಸ್ಯ ಲೋಕೇಶ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!