ತಪ್ಪುಗಳನ್ನು ಮುಚ್ಚಿಕೊಳ್ಳಲು ದೊಡ್ಡಬಳ್ಳಾಪುರ ನಗರಸಭೆಯಿಂದ ಪಂಪ್ ಗಳ ಅಳವಡಿಕೆ: ಕೆರೆ ಸಂರಕ್ಷಣಾ ವೇದಿಕೆ ಸಭೆಯಲ್ಲಿ ಮಜರಾಹೊಸಹಳ್ಳಿ ಗ್ರಾಪಂ ಅಧ್ಯಕ್ಷ ಸಂದೇಶ್ ಆಕ್ರೋಶ

ದೊಡ್ಡಬಳ್ಳಾಪುರ: ನಮ್ಮೂರಿನ ಕೆರೆ ನೀರನ್ನು ಶುದ್ಧವಾಗಿ ಉಳಿಸಿಕೊಳ್ಳುವುದಕ್ಕಾಗಿಯೇ ನಮ್ಮ ಹೋರಾಟ ಹೊರತು ಯಾರೊಬ್ಬರ ವಿರುದ್ಧವು ಅಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಖ್ಯಾತ ವೈದ್ಯ ಡಾ.ಟಿ.ಎಚ್. ಆಂಜಿನಪ್ಪ ಹೇಳಿದರು. 

ಅವರು ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಭಾನುವಾರ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಕೆರೆ ಸಂರಕ್ಷಣಾ ವೇದಿಕೆ ವತಿಯಿಂದ ನಡೆದ ಹೋರಾಟದ ರೂಪುರೇಷೆ ಕುರಿತ ಸಭೆಯಲ್ಲಿ ಮಾತನಾಡಿದರು.

ಎರಡು ದಶಕಗಳ ನಂತರ ನಮ್ಮೂರಿನ ಕೆರೆ ಕೋಡಿ ಬಿದ್ದಿರುವುದನ್ನು ನೋಡಿ ಖುಷಿ ಪಟ್ಟಿದ್ದೆವು. ನಮ್ಮ ಜೀವಿತ ಕಾಲದಲ್ಲಿ ಮತ್ತೆ ಕೆರೆಗೆ ನೀರು ಬರುತ್ತವೆ ಎನ್ನುವ ನಂಬಿಯೇ ಇಲ್ಲದಾಗಿತ್ತು. ಆದರೆ ಕೆರೆಗೆ ನೀರು ಬಂದ ಮೂರೇ ತಿಂಗಳಲ್ಲಿ ಕೆರೆ ನೀರು ಕಲುಷಿತವಾಗಿರುವುದರ ವಿರುದ್ಧ ಹೋರಾಟ ಮಾಡಬೇಕಾದ ಸ್ಥಿತಿ ಬಂದಿರುವುದು ವಿಷಾದದ ಸಂಗತಿಯಾಗಿದೆ.

ದೊಡ್ಡಬಳ್ಳಾಪುರ ನಗರಸಭೆ ಅಧಿಕಾರಿಗಳು ನಮ್ಮಿಂದ ಕೆರೆ ನೀರು ಕಲುಷಿತವಾಗಿಲ್ಲ ಎನ್ನುತ್ತಿದ್ದಾರೆ. ಬಾಶೆಟ್ಟಿಹಳ್ಳಿ ಕೈಗಾರಿಕೆಗಳು ನಮ್ಮದು ತಪ್ಪಿಲ್ಲ ಅಂದರೆ ಕೆರೆ ನೀರು ಯಾರಿಂದ ಕಲುಷಿತವಾಗಿದೆ ಎಂದು ಪ್ರಶ್ನಿಸಿದ ಅವರು, ಯಾರದೇ ಮಾತನ್ನು ನಂಬುವ ಮುನ್ನ ನೀರಿನ ವೈಜ್ಞಾನಿಕ ಪರೀಕ್ಷೆ ನಡೆಯಬೇಕು. ಯಾವ ಭಾಗದ ಹಳ್ಳದ ಸಾಲಿನಿಂದ ಬರುತ್ತಿರುವ ನೀರಿನಿಂದ ನಮ್ಮೂರಿನ ಕೆರೆಯ ನೀರು ಕಲುಷಿತವಾಗುತ್ತಿದೆ ಎನ್ನವ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ನಮ್ಮೂರಿನ ಕೆರೆಯ ನೀರು ಕಲುಷಿತಗೊಂಡಿರುವುದಕ್ಕೆ ನಿಖರ ಕಾರಣ ಹಾಗೂ ಪರಿಹಾರ ದೊರೆಯದ ಹೊರತು ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಕೆರೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಪಕ್ಷಾತೀತವಾಗಿದೆ. ಹೀಗಾಗಿ ನಮಗೆ ಯಶಸ್ಸು ದೊರೆಯಲಿದೆ ಎಂದರು.

ಕೆರೆಯ ನೀರು ಕಲುಷಿತವಾಗಿರುವುದರಿಂದ ಅಂತರ್ಜಲವು ಸಹ ಕಲುಷಿತವಾಗಿದ್ದು ಕೊಳವೆ ಬಾವಿಗಳಲ್ಲೂ ಶುದ್ದ ನೀರು ಬರುತ್ತಿಲ್ಲ. ಇದು ಕೇಲವ ಕುಡಿಯುವ ನೀರಿನ ಮೇಲಷ್ಟೇ ಅಲ್ಲದೆ ಕೃಷಿ ಬಳಕೆಯ ನೀರಿನ ಮೇಲೂ ಪರಿಣಾಮ ಬೀರಲಿದೆ. ರೈತರು ಈಗಲೇ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂದೇಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಿಂದ ಚಿಕ್ಕತುಮಕೂರು ಕೆರೆಗೆ ಬರುತ್ತಿರುವ ಒಳಚರಂಡಿ ನೀರನ್ನು ಸೂಕ್ತ ರೀತಿಯಲ್ಲಿ ಶುದ್ದೀಕರಣ ಮಾಡಿದ್ದರೆ ಇಷ್ಟೆಲ್ಲಾ ತೊಂದರೆ ಉಂಟಾಗುತ್ತಿರಲಿಲ್ಲ. ಚಿಕ್ಕತುಮಕೂರು ಕೆರೆಯ ಸಮೀಪ ಸೂಕ್ತ ಸಾಮರ್ಥ್ಯ ಹೊಂದಿರುವ ಪಂಪ್ಗಳನ್ನು ಆಳವಡಿಕೆ ಮಾಡದೇ ಒಳಚರಂಡಿ ನೀರು ಕೆರೆಗೆ ಹರಿದು ಬಿಟ್ಟಿದ್ದಾರೆ. ನಮ್ಮ ಪಂಚಾಯಿತಿ ವತಿಯಿಂದಲು ಹಲವಾರು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದ್ದೇವೆ. ಆದರೆ ಈಗ ಹೋರಾಟಗಳು ಆರಂಭವಾದ ಮೇಲೆ ಪಂಪ್ಗಳನ್ನು ಅಳವಡಿಸಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳು ಯತ್ನಿಸುತ್ತಿದ್ದಾರೆ. ಕೆರೆ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಪಂಚಾಯಿತಿ ವತಿಯಿಂದಲು ಬೆಂಬಲ ಸೂಚಿಸಲಾಗುವುದು. ಈ ಬಗ್ಗೆ ನಮ್ಮ ಪಂಚಾಯಿತಿ ಎಲ್ಲಾ ಸದಸ್ಯರು ಹಾಗೂ ಮುಖಂಡರೊಂದಿಗು ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಚಿಕ್ಕಣಪ್ಪ, ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಪ್ರಭಾಕರ್, ದೊಡ್ಡತುಮಕೂರು ಗ್ರಾಮಪಂಚಾಯಿತಿ ಸದಸ್ಯ ಲೋಕೇಶ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!