ದೊಡ್ಡಬಳ್ಳಾಪುರ: ಸಿಲಿಂಡರ್ ಸಂಪರ್ಕ ಪಡೆದ ಗ್ರಾಹಕರಿಗೆ ಬಹುಮಾನ ಯೋಜನೆ – ಡಿ.ನಂದಕುಮಾರ್

ದೊಡ್ಡಬಳ್ಳಾಪುರ: ಭಾರತ್ ಗ್ಯಾಸ್ ಅಡುಗೆ ಅನಿಲದ ಹೊಸ ಸಂಪರ್ಕ ಹಾಗೂ ಈಗಾಗಲೇ ಅನಿಲ ಸಂಪರ್ಕ  ಹೊಂದಿರುವ ಗ್ರಾಹಕರು, 2ನೇ ಸಿಲೆಂಡರ್ ಸಂಪರ್ಕ ಪಡೆದರೆ ಬಂಪರ್ ಬಹುಮಾನಗಳನ್ನು ಗೆಲ್ಲುವ ಅವಕಾಶ ಇದೆ ಎಂದು ನಗರದ ಭಾರತ್ ಗ್ಯಾಸ್ ಮಂಜುನಾಥ ಏಜೆನ್ಸಿ ಮಾಲೀಕ ಡಿ.ನಂದಕುಮಾರ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ‌ಮಾಹಿತಿ‌ ನೀಡಿರುವ ಅವರು, ಅನಿಲ ಸಂಪರ್ಕ  ಹೊಂದಿರುವ ಗ್ರಾಹಕರಿಗೆ ಕೂಪನ್‍ಗಳನ್ನು ವಿತರಿಸಿ ಈ ಬಗ್ಗೆ ಮಾಹಿತಿ ನೀಡಿದ ಅವರು ಈಗ ಅಡಿಗೆ ಅನಿಲ ಸಂಪರ್ಕ ಪಡೆಯುವುದು ಸುಲಭ ವಿಧಾನವಾಗಿದ್ದು, ಜೊತೆಗೆ ಬಹುಮಾನಗಳ ಯೋಜನೆಗಳಿವೆ.

ಸ್ಕೂಟರ್, ಎಲ್.ಇ.ಡಿ ಟಿ.ವಿ ಸೇರಿದಂತೆ ಹತ್ತು ಲಕ್ಷಕ್ಕೂ ಅಕ ಮೌಲ್ಯದ ಒಟ್ಟು 500 ಬಹುಮಾನಗಳು ಗ್ರಾಹಕರಿಗೆ ಲಭಿಸಲಿವೆ. ಈ ಅವಕಾಶ ಜನವರಿ 1ರಿಂದ ಏಪ್ರಿಲ್ 10ರವರೆಗೆ ಸಂಪರ್ಕ ಪಡೆಯುವ ಗ್ರಾಹಕರಿಗೆ ಮಾತ್ರ ಅನ್ವಯ ಲಕ್ಕಿ ಡ್ರಾ ಮೂಲಕ ಆಯ್ಕೆಯಾಗುವ ಗ್ರಾಹಕರಿಗೆ ಏ.24ರಂದು ಬಹುಮಾನಗಳ ವಿತರಣೆ ನಡೆಯಲಿದೆ.ಈ ಯೋಜನೆ ಎಲ್ಲಾ ಭಾರತ್ ಗ್ಯಾಸ್ ಏಜೆನ್ಸಿಯ ಗ್ರಾಹಕರು ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಹಕರಿಗೆ ಅವಕಾಶವಿದೆ ಎಂದರು.

ಕರೊನಾ ವೈರಸ್ ಹರಡುತ್ತಿರುವ ಸಮಯದಲ್ಲಿ ಗ್ರಾಹಕರು ಆನ್‍ಲೈನ್ ಮೂಲಕ ಡಿಜಿಟಲ್ ಪೇಮೆಂಟ್ ಮಾಡಲು ಸಹಕಾರಿಯಾಗುವಂತೆ ಕಂಪನಿಯು ವ್ಯವಸ್ಥೆ ಕಲ್ಪಿಸಿದ್ದು, ನಗದು ವ್ಯವಹಾರವನ್ನು ಕಡಿತಗೊಳಿಸಲು ಗ್ರಾಹಕರು ಹಾಗೂ ಸರಬರಾಜುದಾರರು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿಪಿಸಿಎಲ್ ಗ್ರಾಹಕರಲ್ಲಿ ಮನವಿ ಮಾಡಿದೆ.

ಭಾರತ್ ಗ್ಯಾಸ್ ರೀಫಿಲ್ ಸಿಲಿಂಡರ್ ಬುಕಿಂಗ್‍ಗಾಗಿ ಬಿಪಿಸಿಎಲ್‍ನ ಸ್ಮಾರ್ಟ್‍ಲೈನ್ ವಾಟ್ಸಾಪ್ ಸಂಖ್ಯೆ 1800-22-4344 ಇದನ್ನು ಸೇವ್ ಮಾಡಿಕೊಂಡು ಇದೇ ಸಂಖ್ಯೆಗೆ  ಎಚ್‍ಐ    ಎಂದು ಟೈಪ್ ಮಾಡಿ ಕಳುಹಿಸಿ , ನಂತರ ಫೋನ್ ಗೆ ಬರುವ ಸಂದೇಶದಲ್ಲಿಯೇ ರೀಫಿಲ್ ಬುಕ್ ಮಾಡಿ ಹಾಗೂ ಆನ್ಲೈನ್ ಮೂಲಕ ಹಣಸಂದಾಯ ಮಾಡುವ ಈ ವಿಧಾನಗಳ ಮೂಲಕ ನೀವು ಸುಲಭವಾಗಿ ಹಣ ಪಾವತಿಸಬಹುದು ಫೋನ್ ಪೇ, ಪೇಟಿಎಮ್, ಗೂಗಲ್ ಪೇ, ಅಮೇಜಾನ್ ಪೇ ಹಾಗೂ ಎಲ್ಲಾ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ ಮೂಲಕ ಹಣ ಪಾವತಿ ಮಾಡಬಹುದು ಎಂದರು.

ಎರಡು ಗಂಟೆಗಳಲ್ಲಿಯೇ ಹೊಸ ಗ್ಯಾಸ್ ಸಂಪರ್ಕ ಪಡೆಯಲು 9611100111  ಸಂಖ್ಯೆಗೆ ನಿಮ್ಮ ವಿವರಗಳನ್ನು ಹಾಗೂ ವಿಳಾಸವನ್ನು ವ್ಯಾಟ್ಸ್ ಆ್ಯಪ್ ಮಾಡಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭಾರತ್ ಗ್ಯಾಸ್ ಮಂಜುನಾಥ ಏಜೆನ್ಸಿ ಮುಖ್ಯಸ್ಥರಾದ ಆರ್.ದಯಾನಂದ್, ವ್ಯವಸ್ಥಾಪಕ ರವಿಚಂದ್ರ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!