15 ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ಬಂದ್ ಮಾಡೋದೇ ಒಳಿತು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಅಲೆ ಪ್ರಾರಂಭವಾಗಿದೆ. ಇನ್ನೊಂದು ವಾರದಲ್ಲಿ 3ನೇ ಅಲೆ ತೀವ್ರಗೊಳ್ಳಲಿದೆ ಎಂದು ತಜ್ಞರು ಹೇಳಿದ್ದಾರೆ. ಆ ಕಾರಣ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವುದೇ ಒಳಿತು ಎಂದು ಹೆಚ್​.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕರೊನಾ 3ನೇ ಅಲೆ ದಿನೇ ದಿನೇ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೆಲ ಸಲಹೆಗಳನ್ನು ನೀಡಿದ್ದಾರೆ.

ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಕೋವಿಡ್ ಅನಾಹುತಗಳ ಗ್ರಾಫ್  ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗಿದೆ. ಕರ್ಫ್ಯೂ ವಿಚಾರವಾಗಿ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲು ಗಮನಿಸುತ್ತಿದ್ದೇನೆ. ನೈಟ್ ಕರ್ಫ್ಯೂ ಜಾರಿಗೆ ತಂದಿರೋದು ಸರಿಯಿಲ್ಲ ಅಂತಿದ್ದಾರೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ಕೆಲ ವ್ಯಾಪಾರಿ ಸಂಘಟನೆಗಳು ಕೂಡ ರಾತ್ರಿ​​ ಕರ್ಫ್ಯೂಗೆ ವಿರೋಧ ವ್ಯಕ್ತ ಮಾಡಿವೆ. ಧಾರ್ಮಿಕ ಕ್ಷೇತ್ರದಲ್ಲಿ ಇನ್ನೊಂದೆರಡು ವಾರ ನಡೆಯಲಿವೆ. ಬಾದಾಮಿಯಲ್ಲಿ 40-40 ಸಾವಿರ ಭಕ್ತರು ಹೋಗಿದ್ದಾರೆ.

ನಾಡಿನ ಜನತೆಗೆ ವಿಶೇಷವಾಗಿ ಮನವಿ ಮಾಡ್ತೀನಿ. ಸರ್ಕಾರದ ನೀತಿ ನಿಯಮಗಳಿಂದ ಇದನ್ನು ಸರಿ ಪಡಿಸಲು ಸಾಧ್ಯವಿಲ್ಲ. ನಮ್ಮ ಜವಾಬ್ದಾರಿ ಇಲ್ಲಿ ಮುಖ್ಯವಾಗಿದೆ. ಇನ್ನೊಂದು ವರ್ಷಗಳಲ್ಲಿ ಚುನಾವಣಾ ಸಮಯ ಬರಲಿದೆ. ಆಗ ನಿಯಮಗಳನ್ನು ಉಲ್ಲಂಘನೆ ಮಾಡಿದಾಗ ಜನರು ಪ್ರಶ್ನೆ ಮಾಡ್ತಾರೆ. ಈಗಾಗಲೇ ಈ ರೀತಿ ಘಟನೆಗಳ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ದೇವರ ದಯೆಯಿಂದ ಎರಡನೇ ಅಲೆಯಂತೆ ಆಗಿಲ್ಲ. ದೊಡ್ಡ ಮಟ್ಟದ ಸಮಸ್ಯೆ, ಗಂಭೀರ ಸ್ಥಿತಿ ಇಲ್ಲ. ಇದಕ್ಕೆ ದೇವರಿಗೆ ನಾವು ಧನ್ಯವಾದ ಸಲ್ಲಿಸಬೇಕು ಎಂದರು. ನೈಟ್ ಕರ್ಫ್ಯೂ ನಿಂದ ಇದನ್ನು ತಡೆಯಬಹುದು ಎಂದು ತಜ್ಞರು ವರದಿ ನೀಡಿದ್ದಾರೋ ಗೊತ್ತಿಲ್ಲ. ಆದರೆ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ನಿಂದ ದಿನ ಗೂಲಿಯವರಿಗೆ ತೊಂದರೆ ಆಗುತ್ತಿದೆ. ಏನಾದರೂ ಬದಲಿ ವ್ಯವಸ್ಥೆ ಮಾಡಬೇಕಲ್ಲಾ ಸರ್ಕಾರ..?

ವಿಜಯಪುರ ಸೇರಿದಂತೆ ಅನೇಕ ಕಡೆ ರೈತರು ತಾವು ಬೆಳೆದ ಬೆಳೆ ಮಾರಾಟ ಮಾಡಲು ಆಗಿಲ್ಲ. ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ನಿಂದ ನಿತ್ಯ ದುಡಿದು ತಿನ್ನುವವರಿಗೆ ಸಮಸ್ಯೆ ಆಗುತ್ತಿದೆ. ಅವರ ಬದುಕು ಕಟ್ಟಿಕೊಡಲು ಏನಾದರೂ ಸಹಾಯ ಮಾಡಬೇಕು. ವಿಶೇಷ ಪ್ಯಾಕೇಜ್ ಏನಾದ್ರೂ ಘೋಷಣೆ ಮಾಡಿ ಎಂದು ಸರ್ಕಾರವನ್ನು ಎಚ್​ಡಿಕೆ ಆಗ್ರಹಿಸಿದರು. ರೈತರು ಬೆಳೆದ ಬೆಳೆ ಮಾರಾಟ ಮಾಡುವಾಗ ಅವರಿಗೆ ಸೂಚನೆ ನೀಡಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಮಾರ್ಗಸೂಚಿ ಪಾಲಿಸಿ ಮಾರಾಟಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D.

[ccc_my_favorite_select_button post_id="117875"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!